AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Food Poisoning: ವಿಷಪೂರಿತ ಆಹಾರ ಸೇವನೆ, ಭಾರತ್​ ಗೌರವ್ ರೈಲಿನ 90 ಪ್ರಯಾಣಿಕರು ಅಸ್ವಸ್ಥ

ಭಾರತ್ ಗೌರವ್ ರೈಲಿನಲ್ಲಿ ವಿಷಪೂರಿತ ಆಹಾರ ಸೇವಿಸಿ 90 ಮಂದಿ ಪ್ರಯಾಣಿಕರು ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ. ತಡರಾತ್ರಿ ಪುಣೆ ರೈಲ್ವೆ ನಿಲ್ದಾಣಕ್ಕೆ ತಲುಪುವುದಕ್ಕೂ ಮುನ್ನ ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಚೆನ್ನೈನಿಂದ ಪ್ರಯಾಣಿಸುತ್ತಿದ್ದ ಸುಮಾರು 90 ಪ್ರಯಾಣಿಕರು ಹೊಟ್ಟೆ ನೋವು ಹಾಗೂ ಇನ್ನಿತರೆ ಸಮಸ್ಯೆಗಳನ್ನು ಅನುಭವಿಸಿದರು. ಹಾಗಾಗಿ ವಿಷಪೂರಿತ ಆಹಾರ ಸೇವನೆಯಿಂದ ಹಾಗಾಗಿರಬಹುದು ಎನ್ನಲಾಗಿದೆ.

Food Poisoning: ವಿಷಪೂರಿತ ಆಹಾರ ಸೇವನೆ, ಭಾರತ್​ ಗೌರವ್ ರೈಲಿನ 90 ಪ್ರಯಾಣಿಕರು ಅಸ್ವಸ್ಥ
ರೈಲು
ನಯನಾ ರಾಜೀವ್
|

Updated on: Nov 30, 2023 | 9:06 AM

Share

ಭಾರತ್ ಗೌರವ್ ರೈಲಿನಲ್ಲಿ ವಿಷಪೂರಿತ ಆಹಾರ ಸೇವಿಸಿ 90 ಮಂದಿ ಪ್ರಯಾಣಿಕರು ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ. ತಡರಾತ್ರಿ ಪುಣೆ ರೈಲ್ವೆ ನಿಲ್ದಾಣಕ್ಕೆ ತಲುಪುವುದಕ್ಕೂ ಮುನ್ನ ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಚೆನ್ನೈನಿಂದ ಪ್ರಯಾಣಿಸುತ್ತಿದ್ದ ಸುಮಾರು 90 ಪ್ರಯಾಣಿಕರು ಹೊಟ್ಟೆ ನೋವು ಹಾಗೂ ಇನ್ನಿತರೆ ಸಮಸ್ಯೆಗಳನ್ನು ಅನುಭವಿಸಿದರು. ಹಾಗಾಗಿ ವಿಷಪೂರಿತ ಆಹಾರ ಸೇವನೆಯಿಂದ ಹಾಗಾಗಿರಬಹುದು ಎನ್ನಲಾಗಿದೆ.

ಚೆನ್ನೈನಿಂದ ಗುಜರಾತ್‌ನ ಪಾಲಿಟಾನಾಗೆ ಪ್ರಯಾಣಿಸುತ್ತಿದ್ದ ಭಾರತ್ ಗೌರವ್ ಯಾತ್ರಾ ವಿಶೇಷ ಪ್ಯಾಕೇಜ್ ರೈಲಿನಲ್ಲಿ ಭಾರತೀಯ ರೈಲ್ವೇ ಕೇಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಅಡುಗೆ ಗುತ್ತಿಗೆದಾರರು ನೀಡಿದ ಭೋಜನವನ್ನು ಸೇವಿಸಿದ ನಂತರ 90 ಮಂದಿಗೆ ಅನಾರೋಗ್ಯ ಕಾಡಿತ್ತು.

ಅನೇಕ ಪ್ರಯಾಣಿಕರು ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದರು, ಗುಜರಾತ್‌ನ ಪಾಲಿಟಾನಾಗೆ ಹೋಗುವ ರೈಲು ಪುಣೆ ರೈಲು ನಿಲ್ದಾಣದಲ್ಲಿ ತುರ್ತು ನಿಲುಗಡೆ ಮಾಡಲಾಯಿತು. ರೈಲಿನ ಸ್ನಾನಗೃಹಗಳನ್ನು ಸ್ವಚ್ಛಗೊಳಿಸಲಾಯಿತು. ಕಲ್ಯಾಣ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಬೇಕು ಎಂಬ ಸೂಚನೆಯೊಂದಿಗೆ ರೈಲು ಹೊರಟಿತು.

ರೂಬಿ ಹಾಲ್ ಕ್ಲಿನಿಕ್ ರೈಲ್ವೆ ಆಸ್ಪತ್ರೆ ಮತ್ತು ಸಾಸೂನ್ ಜನರಲ್ ಆಸ್ಪತ್ರೆಯ ವೈದ್ಯರು ಒಟ್ಟು 99 ರೋಗಿಗಳನ್ನು ಪರೀಕ್ಷಿಸಿದರು ಮತ್ತು ಎಲ್ಲಾ ರೋಗಿಗಳ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮೈಸೂರು, ಬೆಂಗಳೂರು, ಚೆನ್ನೈ ರೈಲು ಪ್ರಯಾಣಿಕರಿಗೆ ಶುಭ ಸುದ್ದಿ ನೀಡಿದ ನೈಋತ್ಯ ರೈಲ್ವೆ; ಇಲ್ಲಿದೆ ವಿವರ

50 ನಿಮಿಷಗಳ ನಂತರ ರೈಲು ತನ್ನ ಪ್ರಯಾಣ ಮುಂದುವರೆಸಿತು. ಪ್ರಯಾಣಿಕರು ತಾವೇ ಆಹಾರ ತಂದಿದ್ದರು, ರೈಲ್ವೆ ಸಿಬ್ಬಂದಿ ಪೂರೈಸಿಲ್ಲ ಎಂದು ಹೇಳಲಾಗಿದೆ.

ಎಲ್ಲಾ ಪ್ರಯಾಣಿಕರಿಗೆ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ನಂತರ ಸಹಜ ಸ್ಥಿತಿಯಲ್ಲಿದ್ದಾರೆ. ಯಾವುದೇ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ, ಅವರೆಲ್ಲರೂ ಅದೇ ರೈಲಿನಲ್ಲಿ ತಮ್ಮ ಪ್ರಯಾಣವನ್ನು ಮುಂದುವರೆಸಿದರು, ಎಂದು ಸೆಂಟ್ರಲ್ ರೈಲ್ವೆ ಸಿಪಿಆರ್‌ಒ ಹೇಳಿಕೆ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ