AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Food Poisoning: ವಿಷಪೂರಿತ ಆಹಾರ ಸೇವನೆ, ಭಾರತ್​ ಗೌರವ್ ರೈಲಿನ 90 ಪ್ರಯಾಣಿಕರು ಅಸ್ವಸ್ಥ

ಭಾರತ್ ಗೌರವ್ ರೈಲಿನಲ್ಲಿ ವಿಷಪೂರಿತ ಆಹಾರ ಸೇವಿಸಿ 90 ಮಂದಿ ಪ್ರಯಾಣಿಕರು ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ. ತಡರಾತ್ರಿ ಪುಣೆ ರೈಲ್ವೆ ನಿಲ್ದಾಣಕ್ಕೆ ತಲುಪುವುದಕ್ಕೂ ಮುನ್ನ ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಚೆನ್ನೈನಿಂದ ಪ್ರಯಾಣಿಸುತ್ತಿದ್ದ ಸುಮಾರು 90 ಪ್ರಯಾಣಿಕರು ಹೊಟ್ಟೆ ನೋವು ಹಾಗೂ ಇನ್ನಿತರೆ ಸಮಸ್ಯೆಗಳನ್ನು ಅನುಭವಿಸಿದರು. ಹಾಗಾಗಿ ವಿಷಪೂರಿತ ಆಹಾರ ಸೇವನೆಯಿಂದ ಹಾಗಾಗಿರಬಹುದು ಎನ್ನಲಾಗಿದೆ.

Food Poisoning: ವಿಷಪೂರಿತ ಆಹಾರ ಸೇವನೆ, ಭಾರತ್​ ಗೌರವ್ ರೈಲಿನ 90 ಪ್ರಯಾಣಿಕರು ಅಸ್ವಸ್ಥ
ರೈಲು
ನಯನಾ ರಾಜೀವ್
|

Updated on: Nov 30, 2023 | 9:06 AM

Share

ಭಾರತ್ ಗೌರವ್ ರೈಲಿನಲ್ಲಿ ವಿಷಪೂರಿತ ಆಹಾರ ಸೇವಿಸಿ 90 ಮಂದಿ ಪ್ರಯಾಣಿಕರು ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ. ತಡರಾತ್ರಿ ಪುಣೆ ರೈಲ್ವೆ ನಿಲ್ದಾಣಕ್ಕೆ ತಲುಪುವುದಕ್ಕೂ ಮುನ್ನ ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಚೆನ್ನೈನಿಂದ ಪ್ರಯಾಣಿಸುತ್ತಿದ್ದ ಸುಮಾರು 90 ಪ್ರಯಾಣಿಕರು ಹೊಟ್ಟೆ ನೋವು ಹಾಗೂ ಇನ್ನಿತರೆ ಸಮಸ್ಯೆಗಳನ್ನು ಅನುಭವಿಸಿದರು. ಹಾಗಾಗಿ ವಿಷಪೂರಿತ ಆಹಾರ ಸೇವನೆಯಿಂದ ಹಾಗಾಗಿರಬಹುದು ಎನ್ನಲಾಗಿದೆ.

ಚೆನ್ನೈನಿಂದ ಗುಜರಾತ್‌ನ ಪಾಲಿಟಾನಾಗೆ ಪ್ರಯಾಣಿಸುತ್ತಿದ್ದ ಭಾರತ್ ಗೌರವ್ ಯಾತ್ರಾ ವಿಶೇಷ ಪ್ಯಾಕೇಜ್ ರೈಲಿನಲ್ಲಿ ಭಾರತೀಯ ರೈಲ್ವೇ ಕೇಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಅಡುಗೆ ಗುತ್ತಿಗೆದಾರರು ನೀಡಿದ ಭೋಜನವನ್ನು ಸೇವಿಸಿದ ನಂತರ 90 ಮಂದಿಗೆ ಅನಾರೋಗ್ಯ ಕಾಡಿತ್ತು.

ಅನೇಕ ಪ್ರಯಾಣಿಕರು ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದರು, ಗುಜರಾತ್‌ನ ಪಾಲಿಟಾನಾಗೆ ಹೋಗುವ ರೈಲು ಪುಣೆ ರೈಲು ನಿಲ್ದಾಣದಲ್ಲಿ ತುರ್ತು ನಿಲುಗಡೆ ಮಾಡಲಾಯಿತು. ರೈಲಿನ ಸ್ನಾನಗೃಹಗಳನ್ನು ಸ್ವಚ್ಛಗೊಳಿಸಲಾಯಿತು. ಕಲ್ಯಾಣ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಬೇಕು ಎಂಬ ಸೂಚನೆಯೊಂದಿಗೆ ರೈಲು ಹೊರಟಿತು.

ರೂಬಿ ಹಾಲ್ ಕ್ಲಿನಿಕ್ ರೈಲ್ವೆ ಆಸ್ಪತ್ರೆ ಮತ್ತು ಸಾಸೂನ್ ಜನರಲ್ ಆಸ್ಪತ್ರೆಯ ವೈದ್ಯರು ಒಟ್ಟು 99 ರೋಗಿಗಳನ್ನು ಪರೀಕ್ಷಿಸಿದರು ಮತ್ತು ಎಲ್ಲಾ ರೋಗಿಗಳ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮೈಸೂರು, ಬೆಂಗಳೂರು, ಚೆನ್ನೈ ರೈಲು ಪ್ರಯಾಣಿಕರಿಗೆ ಶುಭ ಸುದ್ದಿ ನೀಡಿದ ನೈಋತ್ಯ ರೈಲ್ವೆ; ಇಲ್ಲಿದೆ ವಿವರ

50 ನಿಮಿಷಗಳ ನಂತರ ರೈಲು ತನ್ನ ಪ್ರಯಾಣ ಮುಂದುವರೆಸಿತು. ಪ್ರಯಾಣಿಕರು ತಾವೇ ಆಹಾರ ತಂದಿದ್ದರು, ರೈಲ್ವೆ ಸಿಬ್ಬಂದಿ ಪೂರೈಸಿಲ್ಲ ಎಂದು ಹೇಳಲಾಗಿದೆ.

ಎಲ್ಲಾ ಪ್ರಯಾಣಿಕರಿಗೆ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ನಂತರ ಸಹಜ ಸ್ಥಿತಿಯಲ್ಲಿದ್ದಾರೆ. ಯಾವುದೇ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ, ಅವರೆಲ್ಲರೂ ಅದೇ ರೈಲಿನಲ್ಲಿ ತಮ್ಮ ಪ್ರಯಾಣವನ್ನು ಮುಂದುವರೆಸಿದರು, ಎಂದು ಸೆಂಟ್ರಲ್ ರೈಲ್ವೆ ಸಿಪಿಆರ್‌ಒ ಹೇಳಿಕೆ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ