AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Food Poisoning: ವಿಷಪೂರಿತ ಆಹಾರ ಸೇವನೆ, ಭಾರತ್​ ಗೌರವ್ ರೈಲಿನ 90 ಪ್ರಯಾಣಿಕರು ಅಸ್ವಸ್ಥ

ಭಾರತ್ ಗೌರವ್ ರೈಲಿನಲ್ಲಿ ವಿಷಪೂರಿತ ಆಹಾರ ಸೇವಿಸಿ 90 ಮಂದಿ ಪ್ರಯಾಣಿಕರು ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ. ತಡರಾತ್ರಿ ಪುಣೆ ರೈಲ್ವೆ ನಿಲ್ದಾಣಕ್ಕೆ ತಲುಪುವುದಕ್ಕೂ ಮುನ್ನ ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಚೆನ್ನೈನಿಂದ ಪ್ರಯಾಣಿಸುತ್ತಿದ್ದ ಸುಮಾರು 90 ಪ್ರಯಾಣಿಕರು ಹೊಟ್ಟೆ ನೋವು ಹಾಗೂ ಇನ್ನಿತರೆ ಸಮಸ್ಯೆಗಳನ್ನು ಅನುಭವಿಸಿದರು. ಹಾಗಾಗಿ ವಿಷಪೂರಿತ ಆಹಾರ ಸೇವನೆಯಿಂದ ಹಾಗಾಗಿರಬಹುದು ಎನ್ನಲಾಗಿದೆ.

Food Poisoning: ವಿಷಪೂರಿತ ಆಹಾರ ಸೇವನೆ, ಭಾರತ್​ ಗೌರವ್ ರೈಲಿನ 90 ಪ್ರಯಾಣಿಕರು ಅಸ್ವಸ್ಥ
ರೈಲು
ನಯನಾ ರಾಜೀವ್
|

Updated on: Nov 30, 2023 | 9:06 AM

Share

ಭಾರತ್ ಗೌರವ್ ರೈಲಿನಲ್ಲಿ ವಿಷಪೂರಿತ ಆಹಾರ ಸೇವಿಸಿ 90 ಮಂದಿ ಪ್ರಯಾಣಿಕರು ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ. ತಡರಾತ್ರಿ ಪುಣೆ ರೈಲ್ವೆ ನಿಲ್ದಾಣಕ್ಕೆ ತಲುಪುವುದಕ್ಕೂ ಮುನ್ನ ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಚೆನ್ನೈನಿಂದ ಪ್ರಯಾಣಿಸುತ್ತಿದ್ದ ಸುಮಾರು 90 ಪ್ರಯಾಣಿಕರು ಹೊಟ್ಟೆ ನೋವು ಹಾಗೂ ಇನ್ನಿತರೆ ಸಮಸ್ಯೆಗಳನ್ನು ಅನುಭವಿಸಿದರು. ಹಾಗಾಗಿ ವಿಷಪೂರಿತ ಆಹಾರ ಸೇವನೆಯಿಂದ ಹಾಗಾಗಿರಬಹುದು ಎನ್ನಲಾಗಿದೆ.

ಚೆನ್ನೈನಿಂದ ಗುಜರಾತ್‌ನ ಪಾಲಿಟಾನಾಗೆ ಪ್ರಯಾಣಿಸುತ್ತಿದ್ದ ಭಾರತ್ ಗೌರವ್ ಯಾತ್ರಾ ವಿಶೇಷ ಪ್ಯಾಕೇಜ್ ರೈಲಿನಲ್ಲಿ ಭಾರತೀಯ ರೈಲ್ವೇ ಕೇಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಅಡುಗೆ ಗುತ್ತಿಗೆದಾರರು ನೀಡಿದ ಭೋಜನವನ್ನು ಸೇವಿಸಿದ ನಂತರ 90 ಮಂದಿಗೆ ಅನಾರೋಗ್ಯ ಕಾಡಿತ್ತು.

ಅನೇಕ ಪ್ರಯಾಣಿಕರು ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದರು, ಗುಜರಾತ್‌ನ ಪಾಲಿಟಾನಾಗೆ ಹೋಗುವ ರೈಲು ಪುಣೆ ರೈಲು ನಿಲ್ದಾಣದಲ್ಲಿ ತುರ್ತು ನಿಲುಗಡೆ ಮಾಡಲಾಯಿತು. ರೈಲಿನ ಸ್ನಾನಗೃಹಗಳನ್ನು ಸ್ವಚ್ಛಗೊಳಿಸಲಾಯಿತು. ಕಲ್ಯಾಣ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಬೇಕು ಎಂಬ ಸೂಚನೆಯೊಂದಿಗೆ ರೈಲು ಹೊರಟಿತು.

ರೂಬಿ ಹಾಲ್ ಕ್ಲಿನಿಕ್ ರೈಲ್ವೆ ಆಸ್ಪತ್ರೆ ಮತ್ತು ಸಾಸೂನ್ ಜನರಲ್ ಆಸ್ಪತ್ರೆಯ ವೈದ್ಯರು ಒಟ್ಟು 99 ರೋಗಿಗಳನ್ನು ಪರೀಕ್ಷಿಸಿದರು ಮತ್ತು ಎಲ್ಲಾ ರೋಗಿಗಳ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮೈಸೂರು, ಬೆಂಗಳೂರು, ಚೆನ್ನೈ ರೈಲು ಪ್ರಯಾಣಿಕರಿಗೆ ಶುಭ ಸುದ್ದಿ ನೀಡಿದ ನೈಋತ್ಯ ರೈಲ್ವೆ; ಇಲ್ಲಿದೆ ವಿವರ

50 ನಿಮಿಷಗಳ ನಂತರ ರೈಲು ತನ್ನ ಪ್ರಯಾಣ ಮುಂದುವರೆಸಿತು. ಪ್ರಯಾಣಿಕರು ತಾವೇ ಆಹಾರ ತಂದಿದ್ದರು, ರೈಲ್ವೆ ಸಿಬ್ಬಂದಿ ಪೂರೈಸಿಲ್ಲ ಎಂದು ಹೇಳಲಾಗಿದೆ.

ಎಲ್ಲಾ ಪ್ರಯಾಣಿಕರಿಗೆ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ನಂತರ ಸಹಜ ಸ್ಥಿತಿಯಲ್ಲಿದ್ದಾರೆ. ಯಾವುದೇ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ, ಅವರೆಲ್ಲರೂ ಅದೇ ರೈಲಿನಲ್ಲಿ ತಮ್ಮ ಪ್ರಯಾಣವನ್ನು ಮುಂದುವರೆಸಿದರು, ಎಂದು ಸೆಂಟ್ರಲ್ ರೈಲ್ವೆ ಸಿಪಿಆರ್‌ಒ ಹೇಳಿಕೆ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ