AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Food Poisoning: ವಿಷಪೂರಿತ ಆಹಾರ ಸೇವನೆ, ಭಾರತ್​ ಗೌರವ್ ರೈಲಿನ 90 ಪ್ರಯಾಣಿಕರು ಅಸ್ವಸ್ಥ

ಭಾರತ್ ಗೌರವ್ ರೈಲಿನಲ್ಲಿ ವಿಷಪೂರಿತ ಆಹಾರ ಸೇವಿಸಿ 90 ಮಂದಿ ಪ್ರಯಾಣಿಕರು ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ. ತಡರಾತ್ರಿ ಪುಣೆ ರೈಲ್ವೆ ನಿಲ್ದಾಣಕ್ಕೆ ತಲುಪುವುದಕ್ಕೂ ಮುನ್ನ ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಚೆನ್ನೈನಿಂದ ಪ್ರಯಾಣಿಸುತ್ತಿದ್ದ ಸುಮಾರು 90 ಪ್ರಯಾಣಿಕರು ಹೊಟ್ಟೆ ನೋವು ಹಾಗೂ ಇನ್ನಿತರೆ ಸಮಸ್ಯೆಗಳನ್ನು ಅನುಭವಿಸಿದರು. ಹಾಗಾಗಿ ವಿಷಪೂರಿತ ಆಹಾರ ಸೇವನೆಯಿಂದ ಹಾಗಾಗಿರಬಹುದು ಎನ್ನಲಾಗಿದೆ.

Food Poisoning: ವಿಷಪೂರಿತ ಆಹಾರ ಸೇವನೆ, ಭಾರತ್​ ಗೌರವ್ ರೈಲಿನ 90 ಪ್ರಯಾಣಿಕರು ಅಸ್ವಸ್ಥ
ರೈಲು
ನಯನಾ ರಾಜೀವ್
|

Updated on: Nov 30, 2023 | 9:06 AM

Share

ಭಾರತ್ ಗೌರವ್ ರೈಲಿನಲ್ಲಿ ವಿಷಪೂರಿತ ಆಹಾರ ಸೇವಿಸಿ 90 ಮಂದಿ ಪ್ರಯಾಣಿಕರು ಆಸ್ಪತ್ರೆಗೆ ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ. ತಡರಾತ್ರಿ ಪುಣೆ ರೈಲ್ವೆ ನಿಲ್ದಾಣಕ್ಕೆ ತಲುಪುವುದಕ್ಕೂ ಮುನ್ನ ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಚೆನ್ನೈನಿಂದ ಪ್ರಯಾಣಿಸುತ್ತಿದ್ದ ಸುಮಾರು 90 ಪ್ರಯಾಣಿಕರು ಹೊಟ್ಟೆ ನೋವು ಹಾಗೂ ಇನ್ನಿತರೆ ಸಮಸ್ಯೆಗಳನ್ನು ಅನುಭವಿಸಿದರು. ಹಾಗಾಗಿ ವಿಷಪೂರಿತ ಆಹಾರ ಸೇವನೆಯಿಂದ ಹಾಗಾಗಿರಬಹುದು ಎನ್ನಲಾಗಿದೆ.

ಚೆನ್ನೈನಿಂದ ಗುಜರಾತ್‌ನ ಪಾಲಿಟಾನಾಗೆ ಪ್ರಯಾಣಿಸುತ್ತಿದ್ದ ಭಾರತ್ ಗೌರವ್ ಯಾತ್ರಾ ವಿಶೇಷ ಪ್ಯಾಕೇಜ್ ರೈಲಿನಲ್ಲಿ ಭಾರತೀಯ ರೈಲ್ವೇ ಕೇಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಅಡುಗೆ ಗುತ್ತಿಗೆದಾರರು ನೀಡಿದ ಭೋಜನವನ್ನು ಸೇವಿಸಿದ ನಂತರ 90 ಮಂದಿಗೆ ಅನಾರೋಗ್ಯ ಕಾಡಿತ್ತು.

ಅನೇಕ ಪ್ರಯಾಣಿಕರು ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದರು, ಗುಜರಾತ್‌ನ ಪಾಲಿಟಾನಾಗೆ ಹೋಗುವ ರೈಲು ಪುಣೆ ರೈಲು ನಿಲ್ದಾಣದಲ್ಲಿ ತುರ್ತು ನಿಲುಗಡೆ ಮಾಡಲಾಯಿತು. ರೈಲಿನ ಸ್ನಾನಗೃಹಗಳನ್ನು ಸ್ವಚ್ಛಗೊಳಿಸಲಾಯಿತು. ಕಲ್ಯಾಣ್ ರೈಲು ನಿಲ್ದಾಣದಲ್ಲಿ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಬೇಕು ಎಂಬ ಸೂಚನೆಯೊಂದಿಗೆ ರೈಲು ಹೊರಟಿತು.

ರೂಬಿ ಹಾಲ್ ಕ್ಲಿನಿಕ್ ರೈಲ್ವೆ ಆಸ್ಪತ್ರೆ ಮತ್ತು ಸಾಸೂನ್ ಜನರಲ್ ಆಸ್ಪತ್ರೆಯ ವೈದ್ಯರು ಒಟ್ಟು 99 ರೋಗಿಗಳನ್ನು ಪರೀಕ್ಷಿಸಿದರು ಮತ್ತು ಎಲ್ಲಾ ರೋಗಿಗಳ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮೈಸೂರು, ಬೆಂಗಳೂರು, ಚೆನ್ನೈ ರೈಲು ಪ್ರಯಾಣಿಕರಿಗೆ ಶುಭ ಸುದ್ದಿ ನೀಡಿದ ನೈಋತ್ಯ ರೈಲ್ವೆ; ಇಲ್ಲಿದೆ ವಿವರ

50 ನಿಮಿಷಗಳ ನಂತರ ರೈಲು ತನ್ನ ಪ್ರಯಾಣ ಮುಂದುವರೆಸಿತು. ಪ್ರಯಾಣಿಕರು ತಾವೇ ಆಹಾರ ತಂದಿದ್ದರು, ರೈಲ್ವೆ ಸಿಬ್ಬಂದಿ ಪೂರೈಸಿಲ್ಲ ಎಂದು ಹೇಳಲಾಗಿದೆ.

ಎಲ್ಲಾ ಪ್ರಯಾಣಿಕರಿಗೆ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ನಂತರ ಸಹಜ ಸ್ಥಿತಿಯಲ್ಲಿದ್ದಾರೆ. ಯಾವುದೇ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲ, ಅವರೆಲ್ಲರೂ ಅದೇ ರೈಲಿನಲ್ಲಿ ತಮ್ಮ ಪ್ರಯಾಣವನ್ನು ಮುಂದುವರೆಸಿದರು, ಎಂದು ಸೆಂಟ್ರಲ್ ರೈಲ್ವೆ ಸಿಪಿಆರ್‌ಒ ಹೇಳಿಕೆ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!