Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಜೋಡೋ ನ್ಯಾಯ್ ಯಾತ್ರೆ: ಪಶ್ಚಿಮ ಬಂಗಾಳದಲ್ಲಿ ರಾಹುಲ್ ಗಾಂಧಿ ಸಭೆಗೆ ಅನುಮತಿ ಇಲ್ಲ

Bharat Jodo Nyay Yatra: ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ದಿನಕ್ಕೊಂದು ಕಂಟಕ ಉಂಟಾಗಿದೆ. ಅಸ್ಸಾಂನಲ್ಲಿ ಈ ಯಾತ್ರೆಯನ್ನು ಯಶಸ್ವಿಯಾಗಿ ಮುಂದುವರಿಸಲು ಸಾಧ್ಯವಾಗಿಲ್ಲ. ಇದೀಗ ಅಸ್ಸಾಂನಿಂದ ಪಶ್ಚಿಮ ಬಂಗಾಳಕ್ಕೆ ನ್ಯಾಯ್ ಯಾತ್ರೆ ಬಂದಿದೆ. ಇದೀಗ ಅಲ್ಲಿಯೂ ಸಮಸ್ಯೆ ಎದುರಾಗಿದೆ. ಯಾತ್ರೆಯ ಎರಡನೇ ದಿನ ನಡೆಸಬೇಕಿದ್ದ ಸಾರ್ವಜನಿಕ ಸಭೆಯನ್ನು ರದ್ದುಗೊಳಿಸಬೇಕಾಗಿದೆ. ಈ ಸಭಗೆ ಅಲ್ಲಿನ ಪೊಲೀಸರು ಅನುಮತಿ ನೀಡುತ್ತಿಲ್ಲ ಎಂದು ಕಾಂಗ್ರೆಸ್​​ ಆರೋಪಿಸಿದೆ.

ಭಾರತ್ ಜೋಡೋ ನ್ಯಾಯ್ ಯಾತ್ರೆ: ಪಶ್ಚಿಮ ಬಂಗಾಳದಲ್ಲಿ ರಾಹುಲ್ ಗಾಂಧಿ ಸಭೆಗೆ ಅನುಮತಿ ಇಲ್ಲ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jan 26, 2024 | 1:52 PM

ದೆಹಲಿ, ಜ.26: ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ದಿನಕ್ಕೊಂದು ಕಂಟಕ ಉಂಟಾಗಿದೆ. ಅಸ್ಸಾಂನಲ್ಲಿ ಈ ಯಾತ್ರೆಯನ್ನು ಯಶಸ್ವಿಯಾಗಿ ಮುಂದುವರಿಸಲು ಸಾಧ್ಯವಾಗಿಲ್ಲ. ಇದೀಗ ಅಸ್ಸಾಂನಿಂದ ಪಶ್ಚಿಮ ಬಂಗಾಳಕ್ಕೆ ನ್ಯಾಯ್ ಯಾತ್ರೆ ಬಂದಿದೆ. ಇದೀಗ ಅಲ್ಲಿಯೂ ಸಮಸ್ಯೆ ಎದುರಾಗಿದೆ. ಯಾತ್ರೆಯ ಎರಡನೇ ದಿನ ನಡೆಸಬೇಕಿದ್ದ ಸಾರ್ವಜನಿಕ ಸಭೆಯನ್ನು ರದ್ದುಗೊಳಿಸಬೇಕಾಗಿದೆ. ಈ ಸಭೆಗೆ ಅಲ್ಲಿನ ಪೊಲೀಸರು ಅನುಮತಿ ನೀಡುತ್ತಿಲ್ಲ ಎಂದು ಕಾಂಗ್ರೆಸ್​​ ಆರೋಪಿಸಿದೆ. ಸಿಲಿಗುರಿಯಲ್ಲಿ ರಾಹುಲ್​​ ಗಾಂಧಿ ಅವರು ಎರಡು ಸಭೆಗಳನ್ನು ನಡೆಸಬೇಕಿತ್ತು. ಆದರೆ ಪಶ್ಚಿಮ ಬಂಗಾಳ ಪೊಲೀಸರು, ಪೊಲೀಸ್ ಪರೀಕ್ಷೆ ನಡೆಯುತ್ತಿದೆ, ಆ ಕಾರಣಕ್ಕೆ ಸಭೆಗೆ ಅವಕಾಶವಿಲ್ಲ ಎಂದಿದ್ದಾರೆ. ಇದರಿಂದ ಸಭೆ ರದ್ದಾಗಿದೆ ಎಂದು ಕಾಂಗ್ರೆಸ್​​​ ನಾಯಕ ಅಧೀರ್ ಚೌಧರಿ ಹೇಳಿದ್ದಾರೆ.

ಸಭೆ ರದ್ದಾಗಿದ್ದರು, ಯಾತ್ರೆ ಮಾತ್ರ ಈಗಾಗಲೇ ನಿಗದಿ ಮಾಡಿರುವ ಮಾರ್ಗದಲ್ಲಿಯೇ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಈ ಹಿಂದೆ ಕಾಂಗ್ರೆಸ್​​ನ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಅಸ್ಸಾಂನಲ್ಲೂ ಇಂತಹ ಸಮಸ್ಯೆಗಳು ಎದುರಾಗಿತ್ತು. ಅಲ್ಲಿ ಕಾನೂನು ಸುವ್ಯವಸ್ಥೆಯ ಎಂಬ ಕಾರಣವನ್ನು ಹೇಳಿ,  ರಾಹುಲ್​​ ಗಾಂಧಿ ಅವರನ್ನು ಯಾತ್ರೆಯಲ್ಲಿ ಭಾಗವಹಿಸಲು ತಡೆ ನೀಡಲಾಗಿತ್ತು ಎಂದು ಕಾಂಗ್ರೆಸ್​​ ಹೇಳಿದೆ.

ಇನ್ನು ಪ್ರಾಂತ ಕಾಂಗ್ರೆಸ್ ಅಧ್ಯಕ್ಷ ಅಧೀರ್ ಚೌಧರಿ ಮತ್ತು ಇತರ ಕಾಂಗ್ರೆಸ್ ಮುಖಂಡರು ಗುರುವಾರ ಸಂಜೆ ಪೊಲೀಸರ ಅನುಮತಿಯಿಲ್ಲದೆ ಸುದೀರ್ಘ ಸಭೆ ನಡೆಸಿದರು. ಆದರೆ ಈ ಸಭೆಯನ್ನು ಪೊಲೀಸರು ತಡೆದಿದ್ದಾರೆ. ನಮಗೆ ಒಂದು ಸಭೆಯನ್ನು ನಡೆಸಲು ಅವಕಾಶ ನೀಡಬೇಕು ಎಂದು ಪೊಲೀಸರಿಗೆ ಮನವಿ ಮಾಡಲಾಗಿತ್ತು ಎಂದು ಅಧೀರ್ ಚೌಧರಿ ಹೇಳಿದ್ದಾರೆ. ಇಷ್ಟೇಲ್ಲ ಘಟನೆ ನಡೆದರು, ಕಾಂಗ್ರೆಸ್​​ ನಾಯಕರಿಂದ ಮಮತಾ ಬ್ಯಾನರ್ಜಿ ವಿರುದ್ಧ ಯಾವುದೇ ಮಾತುಗಳು ಕೇಳಿ ಬಂದಿಲ್ಲ.

ಇತ್ತೀಚೆಗಷ್ಟೇ ಇಂಡಿಯಾ ಒಕ್ಕೂಟದಿಂದ ಅಂತ ಕಾಯ್ದುಕೊಳ್ಳುತ್ತಿರುವ ಮಮತಾ ಬ್ಯಾನರ್ಜಿ ಕೂಡ ಈ ಯಾತ್ರೆಯಲ್ಲಿ ಭಾಗವಹಿಸಿಲ್ಲ, ಹಾಗೂ ಯಾತ್ರೆಯಲ್ಲಿ ಎದುರಾಗಿರುವ ಸಮಸ್ಯೆಗಳ ಬಗ್ಗೆ ಮಾತನಾಡಿಲ್ಲ ಎಂಬುದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: ಇಂಡಿಯಾ ಮೈತ್ರಿಕೂಟ ಅನ್ಯಾಯದ ವಿರುದ್ಧ ಒಗ್ಗಟ್ಟಾಗಿ ಹೋರಾಡುತ್ತದೆ: ಬಂಗಾಳದಲ್ಲಿ ರಾಹುಲ್ ಗಾಂಧಿ 

ಇನ್ನು ಜ.27ರಿಂದ ನ್ಯಾಯ ಯಾತ್ರೆ ದೆಹಲಿಯಿಂದ ಆರಂಭವಾಗಲಿದೆ. ಈ ಯಾತ್ರೆಯಲ್ಲೂ ರಾಹುಲ್​​​ ಗಾಂಧಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಗುಲಾಂ ಮಿರ್ ಹೇಳಿದ್ದಾರೆ. ಜ.28ರಂದು ಫಲಕಟ್ಟಾದಿಂದ ಮೆರವಣಿಗೆ ಹೊರಟು ನಿಗದಿತ ಮಾರ್ಗದಲ್ಲಿ ಸಾಗಲಿದೆ. ಅಲ್ಲಿಂದ ಜಲ್ಪೈಗುರಿಯಿಂದ ಸಿಲಿಗುರಿಗೆ ಬರಲಿದೆ. ಅಲ್ಲಿಂದ ಜ. 29ರಂದು ಬಿಹಾರದಿಂದ ಇಸ್ಲಾಂಪುರ ಮಾರ್ಗವಾಗಿ, ಜನವರಿ 31ರಂದು ಮತ್ತೆ ಬಂಗಾಳಕ್ಕೆ ಬರಲಿದೆ. ಮಾಲ್ದಾ ಮತ್ತು ಮುರ್ಷಿದಾಬಾದ್‌ನಲ್ಲಿ ಎರಡು ದಿನಗಳ ಕಾಲ ಮೆರವಣಿಗೆ ಮುಂದುವರಿಯಲಿದೆ. ನಂತರ ರಾಹುಲ್ ಗಾಂಧಿ ಜಾರ್ಖಂಡ್ ಹೋಗಲಿದ್ದಾರೆ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:09 pm, Fri, 26 January 24

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ