AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Nyay Yatra: ಬಿಹಾರದಲ್ಲಿ ರಾಹುಲ್ ಗಾಂಧಿ ಕಾರಿಗೆ ಕಲ್ಲು ತೂರಾಟ, ಕಾರಿನ ಹಿಂಬದಿಯ ಗಾಜು ಜಖಂ

ಬಿಹಾರದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ ನಡೆಯುತ್ತಿದೆ. ಇದರ ಮಧ್ಯೆ ರಾಹುಲ್​​ ಗಾಂಧಿ ಅವರು ಪ್ರಯಾಣಿಸುವ ಕಾರಿನ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಇನ್ನು ರಾಹುಲ್​​​​ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಬಿಹಾರ ತಲುಪಿದೆ. ಇಂದು ಬೆಳಿಗ್ಗೆ ರಾಹುಲ್​​​​ ಬಿಹಾರ ಜಿಲ್ಲೆಯಲ್ಲಿ ರೋಡ್ ಶೋ ನಡೆಸಿದ್ದಾರೆ.

Bharat Jodo Nyay Yatra: ಬಿಹಾರದಲ್ಲಿ ರಾಹುಲ್ ಗಾಂಧಿ ಕಾರಿಗೆ ಕಲ್ಲು ತೂರಾಟ, ಕಾರಿನ ಹಿಂಬದಿಯ ಗಾಜು ಜಖಂ
ರಾಹುಲ್ ಗಾಂಧಿImage Credit source: Hindustan Times
ಅಕ್ಷಯ್​ ಪಲ್ಲಮಜಲು​​
|

Updated on: Jan 31, 2024 | 2:40 PM

Share

ಪಟ್ನಾ, ಜ.31: ಬಿಹಾರದಲ್ಲಿ ಭಾರೀ ಬಿರುಸಿನಲ್ಲಿ ಕಾಂಗ್ರೆಸ್​​​ ನಾಯಕ ರಾಹುಲ್​​ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆ ನಡೆಯುತ್ತಿದೆ. ಇದರ ಮಧ್ಯೆ ಒಂದು ಅಹಿತಕರ ಘಟನೆ ನಡೆದಿದೆ. ರಾಹುಲ್​​ ಗಾಂಧಿ ಅವರು ಪ್ರಯಾಣಿಸುವ ಕಾರಿನ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ ಎಂದು ಕಾಂಗ್ರೆಸ್​​​ ನಾಯಕ ಅಧೀರ್ ರಂಜನ್ ಚೌಧರಿ ಅವರು ಇಂದು (ಜ.31) ಹೇಳಿದ್ದಾರೆ.

ಬಂಗಾಳ – ಬಿಹಾರ ಗಡಿಯಲ್ಲಿ ಬಳಿ ಈ ಘಟನೆ ನಡೆದಿದೆ. ಯಾರೋ ರಾಹುಲ್​​​ ಗಾಂಧಿ ಅವರ ಕಾರಿಗೆ ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಕಾರಿನ ಹಿಂಬದಿಯ ಗಾಜು ಜಖಂಗೊಂಡಿದೆ ಎಂದು ಕಾಂಗ್ರೆಸ್​​​​ ಹೇಳಿದೆ. ಇನ್ನು ರಾಹುಲ್​​​​ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಬಿಹಾರ ತಲುಪಿದೆ. ಇಂದು ಬೆಳಿಗ್ಗೆ ರಾಹುಲ್​​​​ ಬಿಹಾರ ಜಿಲ್ಲೆಯಲ್ಲಿ ರೋಡ್ ಶೋ ನಡೆಸಿದ್ದಾರೆ.

ಮಧ್ಯಾಹ್ನದ ಹೊತ್ತಿಗೆ ಮಾಲ್ಡಾ ಮೂಲಕ ಪಶ್ಚಿಮ ಬಂಗಾಳ ತಲುಪುವ ನಿರೀಕ್ಷೆ ಇತ್ತು. ಆದರೆ ಅವರ ಕಾರು ಜಖಂಗೊಂಡ ಕಾರಣ ಯಾತ್ರೆ ನಿರೀಕ್ಷಿತ ಸಮಯಕ್ಕೆ ಪಶ್ಚಿಮ ಬಂಗಾಳಕ್ಕೆ ತಲುಪಲು ಸಾಧ್ಯವಾಗಿಲ್ಲ ಎಂದು ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿಯ ಭಾರತ್ ಜೋಡೋ ನ್ಯಾಯ್ ಯಾತ್ರೆ ಹೋದಲ್ಲೆಲ್ಲಾ ಮಮತಾ ಬ್ಯಾನರ್ಜಿ ಪಾದಯಾತ್ರೆ

ಇನ್ನು ಬಿಹಾರದಲ್ಲಿ ರಾಜಕೀಯ ಬದಲಾವಣೆಗಳು ಗರಿಗೆದರಿದ್ದು. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಜೆಪಿಯೊಮದಿಗೆ ಮತ್ತೆ ಮೈತ್ರಿ ಮಾಡಿಕೊಳ್ಳುವ ಒಲುವು ತೋರಿಸಿದ್ದಾರೆ. ಈ ಸಮಯದಲ್ಲೇ ಕಾಂಗ್ರೆಸ್​​​​ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಬಿಹಾರದಲ್ಲಿ ನಡೆಸುತ್ತಿದೆ.

ರಾಹುಲ್ ಗಾಂಧಿಯ ಭಾರತ್ ಜೋಡೋ ನ್ಯಾಯ್ ಯಾತ್ರೆ ಹೋದಲ್ಲೆಲ್ಲಾ ಮಮತಾ ಬ್ಯಾನರ್ಜಿ ಪಾದಯಾತ್ರೆ

ರಾಹುಲ್​​​ ಗಾಂಧಿ ಜೊತೆಯಾಗಿ ನಿಲ್ಲುವ ಮಮತಾ ಬ್ಯಾನರ್ಜಿ ಇದೀಗ ಉಲ್ಟಾ ಹೊಡೆದಿದ್ದಾರೆ. ಲೋಕಸಭೆ ಸೀಟು ಹಂಚಿಕೆ ಕುರಿತು ಮಮತಾ ಅಸಮಾಧಾನಗೊಂಡಿದ್ದು, ಲೋಕಸಭೆಯಲ್ಲಿ ಒಬ್ಬಂಟಿಯಾಗಿ ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಈ ಹೊತ್ತಿನಲ್ಲೇ ಭಾರತ್ ಜೋಡೋ ನ್ಯಾಯ್ ಯಾತ್ರೆ ಪಶ್ಚಿಮ ಬಂಗಾಳಕ್ಕೆ ಬಂದಿದೆ. ಆದರೆ ಈ ಯಾತ್ರೆಗೆ ಬಂಗಾಳದಲ್ಲಿ ಸರಿಯಾದ ಅವಕಾಶ ಹಾಗೂ ಪ್ರತಿಕ್ರಿಯೆ ಸಿಕ್ಕಿಲ್ಲ. ರಾಹುಲ್​​​ ಮಾಡುವ ಸಭೆಗೆ ಅಲ್ಲಿನ ಜಿಲ್ಲಾಡಳಿತ ಅವಕಾಶವನ್ನೇ ನೀಡಿರಲಿಲ್ಲ. ಈ ಯಾತ್ರೆ ಇದೀಗ ಬಿಹಾರಕ್ಕೆ ಬಂದಿದೆ. ರಾಹುಲ್​​ ಗಾಂಧಿ ಸಾಗಿದ ಹಾದಿಯಲ್ಲೇ ಮಮತಾ ಕೂಡ ಸಾಗುತ್ತಿದ್ದಾರೆ ಎಂದು ಹೇಳಲಾಗಿದೆ. ಭಾರತ್ ಜೋಡೋ ನ್ಯಾಯ್ ಯಾತ್ರೆ ಸಾಗಿದ ಪ್ರದೇಶದಲ್ಲಿ ಮಮತಾ ಕೂಡ ಯಾತ್ರೆ ಮಾಡಲಿದ್ದಾರೆ ಎಂದು ವರದಿ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ