Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ವಿರುದ್ಧ ಎಫ್​ಐಆರ್​ ದಾಖಲು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ(Bharat Jodo Nyay Yatra)ವಿರುದ್ಧ ಅಸ್ಸಾಂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಯಾತ್ರೆಯ ಮಾರ್ಗ ಬದಲಾವಣೆಯಿಂದಾಗಿ ರಾಜ್ಯದ ಜೋರ್ಹತ್ ನಗರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅಧಿಕಾರಿಯೊಬ್ಬರು ಮಾತನಾಡಿ, ಅನುಮತಿಯಂತೆ ಯಾತ್ರೆ ಕೆಬಿ ರಸ್ತೆಯತ್ತ ಸಾಗಬೇಕಿತ್ತು.

ಅಸ್ಸಾಂ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ವಿರುದ್ಧ ಎಫ್​ಐಆರ್​ ದಾಖಲು
ರಾಹುಲ್ ಗಾಂಧಿImage Credit source: Rediff.com
Follow us
ನಯನಾ ರಾಜೀವ್
|

Updated on: Jan 19, 2024 | 10:53 AM

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ(Bharat Jodo Nyay Yatra)ವಿರುದ್ಧ ಅಸ್ಸಾಂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಯಾತ್ರೆಯ ಮಾರ್ಗ ಬದಲಾವಣೆಯಿಂದಾಗಿ ರಾಜ್ಯದ ಜೋರ್ಹತ್ ನಗರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅಧಿಕಾರಿಯೊಬ್ಬರು ಮಾತನಾಡಿ, ಅನುಮತಿಯಂತೆ ಯಾತ್ರೆ ಕೆಬಿ ರಸ್ತೆಯತ್ತ ಸಾಗಬೇಕಿತ್ತು.

ಬದಲಾಗಿ ನಗರದಲ್ಲಿ ಬೇರೆ ಮಾರ್ಗದಲ್ಲಿ ಯಾತ್ರೆ ಕೈಗೊಳ್ಳಲಾಯಿತು. ಇದರಿಂದ ಆ ಪ್ರದೇಶದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಜನರ ಏಕಾಏಕಿ ನುಗ್ಗಿದ್ದರಿಂದ ಕೆಲವರು ಬಿದ್ದು ನೂಕುನುಗ್ಗಲು ಉಂಟಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಯಾತ್ರೆ ಮತ್ತು ಅದರ ಮುಖ್ಯ ಆಯೋಜಕರ ವಿರುದ್ಧ ಜೋರ್ಹತ್ ಸದರ್ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತವಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ಹೇಳಿದರು. ಅಧಿಕಾರಿಯ ಪ್ರಕಾರ, ಯಾತ್ರೆಯು ಜಿಲ್ಲಾಡಳಿತದ ನಿಯಮಗಳನ್ನು ಅನುಸರಿಸಿಲ್ಲ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಆದ್ದರಿಂದ ಮತ್ತು ರಸ್ತೆ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬುದು ಪ್ರಮುಖ ಕಾರಣವಾಗಿದೆ.

ಮತ್ತಷ್ಟು ಓದಿ: Rahul Gandhi: ಅಂದು ಕನ್ಯಾಕುಮಾರಿ, ಇಂದು ಮಣಿಪುರ; ರಾಹುಲ್ ಗಾಂಧಿಯ ಎರಡನೇ ಆವೃತ್ತಿಯ ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್​ಗೆ ಗೆಲುವಿನ ವಿಶ್ವಾಸ ಮೂಡಿಸುತ್ತಾ?

ಎಫ್‌ಐಆರ್‌ಗೆ ಸಂಬಂಧಿಸಿದಂತೆ ಹಿಮಂತ ಶರ್ಮಾ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಎಫ್‌ಐಆರ್ ಅನಗತ್ಯ ಅಡೆತಡೆಗಳನ್ನು ಸೃಷ್ಟಿಸುವ ತಂತ್ರವಾಗಿದೆ ಎಂದು ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಿಯಾ ಪಿಟಿಐಗೆ ತಿಳಿಸಿದ್ದಾರೆ. ಈ ಹಿಂದೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕೂಡ ಮಾರ್ಗದ ಬಗ್ಗೆ ಎಚ್ಚರಿಕೆ ನೀಡಿದ್ದರು.

ನಾವು ನಗರಗಳ ಒಳಗೆ ಹೋಗಬಾರದು ಎಂದು ಹೇಳಿದ್ದೇವೆ. ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಹೋಂ ಇದೆ. ಇಂತಹ ಪರಿಸ್ಥಿತಿಯಲ್ಲಿ ಯಾವುದೇ ಪರ್ಯಾಯ ಮಾರ್ಗವನ್ನು ಹುಡುಕಿದರೂ ಅದಕ್ಕೆ ಅವಕಾಶ ನೀಡಲಾಗುವುದು, ಆದರೆ ನಗರದ ಒಳಗಿನಿಂದ ಹೋಗಬೇಕೆಂದು ಒತ್ತಾಯಿಸಿದರೆ, ನಾವು ಪೊಲೀಸ್ ಭದ್ರತೆ ನೀಡಲು ಸಾಧ್ಯವಾಗುವುದಿಲ್ಲ ಎಂದಿದ್ದರು.

ನಾಗಾಲ್ಯಾಂಡ್ ನಂತರ ಭಾರತ್ ಜೋಡೋ ನ್ಯಾಯ ಯಾತ್ರೆ ಅಸ್ಸಾಂ ತಲುಪಿದೆ. ಈ ಸಂದರ್ಭದಲ್ಲಿ, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶಿವಸಾಗರ ಜಿಲ್ಲೆಯಲ್ಲಿ ಮಾತನಾಡಿ ಬಹುಶಃ ಈ ರಾಜ್ಯದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಮತ್ತು ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಇದ್ದಾರೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದು, ಅಸ್ಸಾಂ ತಲುಪಿದ ನಂತರ, ಮಣಿಪುರ ಮತ್ತು ನಾಗಾಲ್ಯಾಂಡ್‌ನ ಜನರಿಂದ ಭಾರು ಪ್ರೀತಿ ನನಗೆ ಸಿಕ್ಕಿತು. ನಿಮ್ಮ ನೋವು, ನಿಮ್ಮ ಸಮಸ್ಯೆಗಳು ಮತ್ತು ನಿಮಗೆ ಆಗುತ್ತಿರುವ ಭೀಕರ ಅನ್ಯಾಯವನ್ನು ನಿಕಟವಾಗಿ ಅರ್ಥಮಾಡಿಕೊಳ್ಳುವುದು ನಮ್ಮ ಭೇಟಿಯ ಉದ್ದೇಶವಾಗಿದೆ ಎಂದು ಬರೆದಿದ್ದಾರೆ.

ಅಸ್ಸಾಂ ಸರ್ಕಾರವು ಬಿಜೆಪಿಯ ರೂಪದಲ್ಲಿ ದ್ವೇಷದ ಗೊಬ್ಬರದಿಂದ ಹುಟ್ಟಿರುವ ಭ್ರಷ್ಟಾಚಾರದ ಬೆಳೆಯಾಗಿದೆ. ಅಸ್ಸಾಂನ ಮುಖ್ಯಮಂತ್ರಿ ಭಾರತದ ಅತ್ಯಂತ ಭ್ರಷ್ಟ ಮುಖ್ಯಮಂತ್ರಿಯಾಗಿದ್ದು, ಸಾರ್ವಜನಿಕ ಹಣವನ್ನು ಲೂಟಿ ಮಾಡುವುದೊಂದೇ ಇವರ ಕೆಲಸವಾಗಿದೆ. ಹಣದ ಬಲವು ಅಸ್ಸಾಂನ ಜನರ ಶಕ್ತಿಯನ್ನು ಎಂದಿಗೂ ಸೋಲಿಸಲು ಸಾಧ್ಯವಿಲ್ಲ. ನಾವು ಈ ಅನ್ಯಾಯದ ವಿರುದ್ಧ ಹೋರಾಡಬೇಕು ಎಂದು ಬರೆದುಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು