AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Yatra: ಬಿಜೆಪಿ 24×7 ಹಿಂದೂ-ಮುಸ್ಲಿಂ ದ್ವೇಷ ಹರಡುತ್ತಿದೆ: ರಾಹುಲ್ ಗಾಂಧಿ

ನಿಜವಾದ ಸಮಸ್ಯೆಗಳಿಂದ ನಿಮ್ಮ ಗಮನವನ್ನು ಬೇರೆಡೆಗೆ ತಿರುಗಿಸಲು 24x7 ಹಿಂದೂ-ಮುಸ್ಲಿಂ ದ್ವೇಷವನ್ನು ಹರಡಲಾಗುತ್ತಿದೆ ಎಂದು ಹೇಳಿದರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಭಾರತ್ ಜೋಡೋ ಯಾತ್ರೆಯಲ್ಲಿ ದೆಹಲಿಯ ಕೆಂಪು ಕೋಟೆಗೆ ಬಂದು ತಲುಪಿದೆ.

Bharat Jodo Yatra: ಬಿಜೆಪಿ 24x7 ಹಿಂದೂ-ಮುಸ್ಲಿಂ ದ್ವೇಷ ಹರಡುತ್ತಿದೆ: ರಾಹುಲ್ ಗಾಂಧಿ
Bharat Jodo Yatra: Rahul Gandhi Image Credit source: google image
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Dec 24, 2022 | 7:10 PM

Share

ದೆಹಲಿ: ಧಾರ್ಮಿಕ ಭಿನ್ನಾಭಿಪ್ರಾಯಗಳನ್ನು ಅಸ್ತ್ರವನ್ನಾಗಿ ಬಳಸಿಕೊಂಡು ದ್ವೇಷವನ್ನು ಹರಡುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಾಗ್ದಾಳಿ ನಡೆಸಿದ್ದಾರೆ. ಇಂದು ಸಂಜೆ ಭಾರತ್ ಜೋಡೋ ಯಾತ್ರೆಯಲ್ಲಿ (Bharat Jodo Yatra) ದೆಹಲಿ ಸ್ಮಾರಕವನ್ನು ತಲುಪಿದ ನಂತರ ಕೆಂಪು ಕೋಟೆಯಲ್ಲಿ ಮಾಡಿದ ಭಾಷಣದಲ್ಲಿ ರಾಹುಲ್ ಗಾಂಧಿ, ನಿಜವಾದ ಸಮಸ್ಯೆಗಳಿಂದ ನಿಮ್ಮ ಗಮನವನ್ನು ಬೇರೆಡೆಗೆ ತಿರುಗಿಸಲು 24×7 ಹಿಂದೂ-ಮುಸ್ಲಿಂ ದ್ವೇಷವನ್ನು ಹರಡಲಾಗುತ್ತಿದೆ ಎಂದು ಹೇಳಿದರು. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಬೆಳಗ್ಗೆ ಯಾತ್ರೆಯಲ್ಲಿ ಪಾಲ್ಗೊಂಡರು. ನಂತರ, ಮೆರವಣಿಗೆ ಕೆಂಪು ಕೋಟೆ ಬಳಿ ಬಂದಾಗ ನಟ ಕಮಲ್ ಹಾಸನ್ ರಾಹುಲ್ ಗಾಂಧಿಗೆ ಸಾಥ್ ನೀಡಿದರು.

ನಾನು 2,800 ಕಿಲೋಮೀಟರ್ ನಡೆದಿದ್ದೇನೆ, ಆದರೆ ಯಾವುದೇ ದ್ವೇಷವನ್ನು ನೋಡಲಿಲ್ಲ. ನಾನು ಟಿವಿ ಆನ್ ಮಾಡಿದಾಗ, ಮಾತ್ರ ನಾನು ಹಿಂಸೆಯನ್ನು ನೋಡುತ್ತೇನೆ ಎಂದು ರಾಹುಲ್ ಹೇಳಿದರು. ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಗೆ ಸೇರುವುದು ಮತ್ತು ರಾಹುಲ್ ಗಾಂಧಿ ಅವರೊಂದಿಗೆ ನಡೆಯುವುದು ರಾಜಕೀಯವಾಗಿ ತಪ್ಪು ಎಂದು ಜನರು ತನ್ನ ಬಳಿಗೆ ಬಂದರು ಎಂದು ಕಮಲ್ ಹಾಸನ್ ಹೇಳಿದರು.

ಇದನ್ನು ಓದಿ;Bharat Jodo Yatra: ಭಾರತ್​ ಜೋಡೋ ಯಾತ್ರೆ ತುಸು ಹೊತ್ತು ಸ್ಥಗಿತಗೊಳಿಸಿ ಆ್ಯಂಬುಲೆನ್ಸ್​ಗೆ ದಾರಿ ಮಾಡಿಕೊಟ್ಟ ರಾಹುಲ್ ಗಾಂಧಿ

ಇದು ದೇಶಕ್ಕೆ ಬೇಕಾದ ಸಮಯ. ಇಂದು ನನ್ನ ಆಂತರಿಕ ಧ್ವನಿ ಹೇಳಿದೆ, ಭಾರತ್ ತೋಡ್ನೆ ಕಿ ನಹಿ ಜೋಡ್ನೆ ಕಿ ಮದದ್ ಕರೋ (ದೇಶವನ್ನು ಒಗ್ಗೂಡಿಸಲು ಸಹಾಯ ಮಾಡಿ, ಅದನ್ನು ಒಡೆಯಬೇಡಿ) ಎಂದು ಹೇಳಿದರು. ಕಮಲ್ ಹಾಸನ್ ಯಾತ್ರೆಯಲ್ಲಿ ಭಾಗವಹಿಸಿದರೂ ರಾಜಕೀಯ ಮೈತ್ರಿಗಳ ಬಗ್ಗೆ ಮಾತನಾಡಲಿಲ್ಲ. ಏಪ್ರಿಲ್ 2021 ರಲ್ಲಿ ತಮಿಳುನಾಡಿನಲ್ಲಿ ತನ್ನ ಮೊದಲ ಚುನಾವಣೆಯಲ್ಲಿ ಸ್ಪರ್ಧಿಸಿದ ಅವರ ಪಕ್ಷವು ಚುನಾವಣಾ ಸೋತಿತ್ತು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:00 pm, Sat, 24 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ