AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Yatra: ಭಾರತ್ ಜೋಡೋ ಯಾತ್ರೆ ವೇಳೆ ಕಾಲ್ತುಳಿತವಾಗಿ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್​ಗೆ ಗಾಯ

ಇಂದೋರ್‌ನಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಜನರು ಒಂದೇ ಸಮನೆ ನುಗ್ಗಿದ ಹಿನ್ನೆಲೆಯಲ್ಲಿ ಕಾಲ್ತುಳಿತದಿಂದ ಕೆ.ಸಿ ವೇಣುಗೋಪಾಲ್ ಅವರಿಗೆ ಗಾಯಗಳಾಗಿವೆ.

Bharat Jodo Yatra: ಭಾರತ್ ಜೋಡೋ ಯಾತ್ರೆ ವೇಳೆ ಕಾಲ್ತುಳಿತವಾಗಿ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್​ಗೆ ಗಾಯ
ಭಾರತ್ ಜೋಡೋ ಯಾತ್ರೆ ವೇಳೆ ಕಾಲ್ತುಳಿತವಾಗಿ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್​ಗೆ ಗಾಯ
TV9 Web
| Updated By: ಸುಷ್ಮಾ ಚಕ್ರೆ|

Updated on:Nov 28, 2022 | 9:40 AM

Share

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ (Bharat Jodo Yatra) 5ನೇ ದಿನದ ಪಾದಯಾತ್ರೆಯ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ (KC Venugopal) ಅವರು ಕೆಳಗೆ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಭಾರತ್ ಜೋಡೋ ಯಾತ್ರೆ ವೇಳೆ ಕಾಲ್ತುಳಿತದಿಂದ ಕೆ.ಸಿ ವೇಣುಗೋಪಾಲ್ ಅವರ ಕೈ ಮತ್ತು ಮೊಣಕಾಲಿನ ಮೇಲೆ ಗಾಯಗಳಾಗಿದೆ. ಅವರಿಗೆ ಭಾರತ್ ಜೋಡೋ ಯಾತ್ರೆಯ ಶಿಬಿರದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಲಾಯಿತು.

ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಜನರು ಒಂದೇ ಸಮನೆ ನುಗ್ಗಿದ ಹಿನ್ನೆಲೆಯಲ್ಲಿ ಕಾಲ್ತುಳಿತದಿಂದ ಕೆಸಿ ವೇಣುಗೋಪಾಲ್ ಅವರಿಗೆ ಗಾಯಗಳಾಗಿವೆ ಎನ್ನಲಾಗಿದೆ. ತೀವ್ರ ನೂಕುನುಗ್ಗಲು ಉಂಟಾಗಿದ್ದರಿಂದ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಪೊಲೀಸ್ ಸಿಬ್ಬಂದಿ ವಿಫಲವಾಗಿದ್ದಾರೆ. ಆದರೆ, ಪ್ರಥಮ ಚಿಕಿತ್ಸೆ ಪಡೆದ ನಂತರ ಕೆಸಿ ವೇಣುಗೋಪಾಲ್ ಮತ್ತೆ ಪಾದಯಾತ್ರೆಯನ್ನು ಮುಂದುವರೆಸಿದ್ದಾರೆ.

ಇದಕ್ಕೂ ಮುನ್ನ ಇಂದೋರ್‌ನಲ್ಲಿ ನಡೆದ ಮೆರವಣಿಗೆಯಲ್ಲಿ ಎಎನ್‌ಐ ಜೊತೆ ಮಾತನಾಡಿದ ಕೆ.ಸಿ ವೇಣುಗೋಪಾಲ್, ಭಾರತ್ ಜೋಡೋ ಯಾತ್ರೆಯ ವಿರುದ್ಧ ಏನಾದರೂ ಹುಳುಕು ಹುಡುಕಲು ಬಿಜೆಪಿಯವರು ಪ್ರಯತ್ನಿಸುತ್ತಲೇ ಇದ್ದಾರೆ. ನಮ್ಮ ಈ ಯಾತ್ರೆಯ ನಿಜವಾದ ಫಲಿತಾಂಶ ಏನಾಗಲಿದೆ ಎಂದು ಅರಿವಿರುವುದರಿಂದ ಬಿಜೆಪಿಯವರು ಆತಂಕಕ್ಕೊಳಗಾಗಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: Rahul Gandhi: ಭಾರತ್ ಜೋಡೋ ಯಾತ್ರೆ ವೇಳೆ ರಾಷ್ಟ್ರಗೀತೆ ಹಾಕುವಾಗ ಎಡವಟ್ಟು; ರಾಹುಲ್ ಗಾಂಧಿಗೆ ಬಿಜೆಪಿ ತರಾಟೆ

ಕನ್ಯಾಕುಮಾರಿಯಿಂದ ಆರಂಭವಾದ 150 ದಿನಗಳ ಪಾದಯಾತ್ರೆಯ ನೇತೃತ್ವ ವಹಿಸಿರುವ ರಾಹುಲ್ ಗಾಂಧಿ ಅವರ ಇಮೇಜ್‌ಗೆ ಕಳಂಕ ತರುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಆದರೆ, ಈ ಯಾತ್ರೆಯ ಸಮಯದಲ್ಲಿ ಜನರು ರಾಹುಲ್ ಗಾಂಧಿಯವರ ನಿಜವಾದ ಮುಖವನ್ನು ನೋಡಿದ್ದಾರೆ ಎಂದು ಅವರು ಹೇಳಿದ್ದಾರೆ.

“ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಪ್ರಸ್ತಾಪಿಸಿದ ವಿಷಯಗಳನ್ನು ಎಲ್ಲರೂ ಒಪ್ಪಿಕೊಳ್ಳುತ್ತಿದ್ದಾರೆ. ನಿರುದ್ಯೋಗ, ಹಣದುಬ್ಬರ, ದ್ವೇಷ, ಮತ್ತು ಜನರು ಈ ಎಲ್ಲಾ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುತ್ತಿದ್ದಾರೆ. ಬಿಜೆಪಿ ಕಳೆದ ಕೆಲವು ವರ್ಷಗಳಿಂದ ರಾಹುಲ್ ಗಾಂಧಿಯವರ ವರ್ಚಸ್ಸನ್ನು ಹಾಳು ಮಾಡುವಲ್ಲಿ ನಿರತವಾಗಿದೆ. ಆದರೆ ಈಗ ಜನರು ರಾಹುಲ್ ಗಾಂಧಿಯವರ ನಿಜವಾದ ಮುಖವನ್ನು ನೋಡುತ್ತಿದ್ದಾರೆ. ವಿದ್ಯಾವಂತರು, ಸಹಾನುಭೂತಿಯುಳ್ಳವರಾದ ಜನರು ಸ್ವಂತ ನಿಲುವು ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆ ನನಗಿದೆ” ಎಂದು ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ಇಂದೋರ್ ತಲುಪುತ್ತಿದ್ದಂತೆ ಬಾಂಬ್ ಸ್ಫೋಟಿಸುವುದಾಗಿ ರಾಹುಲ್ ಗಾಂಧಿಗೆ ಬೆದರಿಕೆ ಪತ್ರ

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯು 81ನೇ ದಿನಕ್ಕೆ ತಲುಪಿದೆ. ಇಲ್ಲಿಯವರೆಗಿನ ಈ ಯಾತ್ರೆಯು 7 ರಾಜ್ಯಗಳನ್ನು ಒಳಗೊಂಡಿದೆ. ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆಯು ಮುಂದಿನ ವರ್ಷ ಕಾಶ್ಮೀರದಲ್ಲಿ ಮುಕ್ತಾಯವಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:40 am, Mon, 28 November 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ