AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Yatra ಭಾರತ್ ಜೋಡೋ ಯಾತ್ರೆ: 3,570 ಕಿಮೀ ಪ್ರಯಾಣ, ಮುಂದಿನ 150 ದಿನ ಕಂಟೈನರ್‌ನಲ್ಲಿ ರಾಹುಲ್ ಗಾಂಧಿ ವಾಸ್ತವ್ಯ

Bharat Jodo Yatra ಅಂದಹಾಗೆ ರಾಹುಲ್ ಯಾವುದೇ ಹೋಟೆಲ್‌ನಲ್ಲಿ ಉಳಿದುಕೊಳ್ಳುವುದಿಲ್ಲ. ಸಂಪೂರ್ಣ ಪ್ರಯಾಣವನ್ನು ಸರಳವಾಗಿ ಪೂರ್ಣಗೊಳಿಸುತ್ತಾರೆ ಎಂದು ಪಕ್ಷ ಸ್ಪಷ್ಟಪಡಿಸಿದೆ.  ರಾಹುಲ್ ಗಾಂಧಿ ಮುಂದಿನ 150 ದಿನಗಳ ಕಾಲ ಕಂಟೈನರ್‌ನಲ್ಲಿ ಉಳಿಯಲಿದ್ದಾರೆ

Bharat Jodo Yatra ಭಾರತ್ ಜೋಡೋ ಯಾತ್ರೆ: 3,570 ಕಿಮೀ ಪ್ರಯಾಣ, ಮುಂದಿನ 150 ದಿನ ಕಂಟೈನರ್‌ನಲ್ಲಿ ರಾಹುಲ್ ಗಾಂಧಿ ವಾಸ್ತವ್ಯ
ರಾಹುಲ್ ಗಾಂಧಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Sep 07, 2022 | 9:28 PM

Share

ಕನ್ಯಾಕುಮಾರಿ: ಇಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ‘ಭಾರತ್ ಜೋಡೋ ಯಾತ್ರೆ'(Bharat Jodo Yatra) ಆರಂಭಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಮುಂದಿನ 150 ದಿನಗಳ ಕಾಲ ಕಂಟೈನರ್‌ನಲ್ಲಿ ತಂಗಲಿದ್ದಾರೆ. ಮುಂಬರುವ 2024 ರ ಚುನಾವಣೆಯಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಎದುರಿಸಲು ಇದು ಕಾಂಗ್ರೆಸ್‌ನ “ಮಾಸ್ಟರ್‌ಸ್ಟ್ರೋಕ್” ಎಂದು ಪರಿಗಣಿಸಲಾಗುತ್ತಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ (Kanyakumari) ಕಾಶ್ಮೀರದವರೆಗೆ ಸುಮಾರು 150 ದಿನಗಳ ಕಾಲ 3,570 ಕಿಮೀ ಪ್ರಯಾಣ ಮಾಡಲಿದ್ದಾರೆ. ಪಕ್ಷವು ರಾಷ್ಟ್ರವ್ಯಾಪಿ ಯಾತ್ರೆಯನ್ನು ಪ್ರಾರಂಭಿಸುತ್ತಿದ್ದಂತೆ, ರಾಹುಲ್ ಗಾಂಧಿಯವರು ಎಲ್ಲಿ ತಂಗಲಿದ್ದಾರೆ ಎಂಬ ಪ್ರಶ್ನೆಗಳನ್ನು ಜನರು ಕೇಳುತ್ತಿದ್ದಾರೆ. ಅಂದಹಾಗೆ ರಾಹುಲ್ ಯಾವುದೇ ಹೋಟೆಲ್‌ನಲ್ಲಿ ಉಳಿದುಕೊಳ್ಳುವುದಿಲ್ಲ. ಸಂಪೂರ್ಣ ಪ್ರಯಾಣವನ್ನು ಸರಳವಾಗಿ ಪೂರ್ಣಗೊಳಿಸುತ್ತಾರೆ ಎಂದು ಪಕ್ಷ ಸ್ಪಷ್ಟಪಡಿಸಿದೆ.  ರಾಹುಲ್ ಗಾಂಧಿ ಮುಂದಿನ 150 ದಿನಗಳ ಕಾಲ ಕಂಟೈನರ್‌ನಲ್ಲಿ ಉಳಿಯಲಿದ್ದಾರೆ. ಕೆಲವು ಕಂಟೈನರ್‌ಗಳಲ್ಲಿ ಮಲಗುವ ಹಾಸಿಗೆಗಳು, ಶೌಚಾಲಯಗಳು ಮತ್ತು ಹವಾನಿಯಂತ್ರಣಗಳನ್ನು ಸಹ ಸ್ಥಾಪಿಸಲಾಗಿದೆ. ಪ್ರಯಾಣದ ಸಮಯದಲ್ಲಿ, ತಾಪಮಾನ ಮತ್ತು ಪರಿಸರವು ಅನೇಕ ಪ್ರದೇಶಗಳಲ್ಲಿ ಭಿನ್ನವಾಗಿರುತ್ತದೆ. ಸ್ಥಳ ಬದಲಾವಣೆಯೊಂದಿಗೆ ತೀವ್ರವಾದ ಶಾಖ ಮತ್ತು ತೇವಾಂಶವನ್ನು ಗಮನದಲ್ಲಿಟ್ಟುಕೊಂಡು ವ್ಯವಸ್ಥೆಗಳನ್ನು ಮಾಡಲಾಗಿದೆ.

“ಇಂತಹ ಸುಮಾರು 60 ಕಂಟೈನರ್‌ಗಳನ್ನು ಸಿದ್ಧಪಡಿಸಿ ಕನ್ಯಾಕುಮಾರಿಗೆ ಕಳುಹಿಸಲಾಗಿದೆ, ಅಲ್ಲಿ ಈ ಎಲ್ಲಾ ಕಂಟೈನರ್‌ಗಳನ್ನು ಇರಿಸಲಾಗಿದೆ, ಅಲ್ಲಿ ಒಂದು ಗ್ರಾಮವನ್ನು ಸ್ಥಾಪಿಸಲಾಗಿದೆ. ಕಂಟೈನರ್‌ ಅನ್ನು ಪ್ರತಿದಿನ ಹಳ್ಳಿಯ ಆಕಾರದಲ್ಲಿ ರಾತ್ರಿ ವಿಶ್ರಾಂತಿಗಾಗಿ ಹೊಸ ಸ್ಥಳದಲ್ಲಿ ನಿಲ್ಲಿಸಲಾಗಿದೆ. ರಾಹುಲ್ ಗಾಂಧಿಯವರೊಂದಿಗೆ ಇರುವ  ಯಾತ್ರಿಗಳು ಒಟ್ಟಿಗೆ ಊಟ ಮಾಡುತ್ತಾರೆ ಮತ್ತು ಹತ್ತಿರದಲ್ಲೇ ಇರುತ್ತಾರೆ ಎಂದು ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ, ಭಾರತ್ ಜೋಡೋ ಯಾತ್ರೆಯನ್ನು ಸಾಮಾನ್ಯ ಜನರೊಂದಿಗೆ ಸಂಪರ್ಕಿಸುವ ಮಾರ್ಗವೆಂದು ಪರಿಗಣಿಸುತ್ತಾರೆ. ಆದ್ದರಿಂದ ಅವರು ಈ ಸಂಪೂರ್ಣ ಪ್ರಯಾಣವನ್ನು ಸರಳ ರೀತಿಯಲ್ಲಿ ಪೂರ್ಣಗೊಳಿಸಲು ಬಯಸುತ್ತಾರೆ. ರಾಹುಲ್ ಗಾಂಧಿ ಇದನ್ನು ಪ್ರಯಾಣ ಎಂದು ಕರೆಯುತ್ತಾರೆ ಆದರೆ ರಾಜಕೀಯ ವಿಶ್ಲೇಷಕರು ಇದನ್ನು 2024 ರ ತಯಾರಿ ಎಂದು ಪರಿಗಣಿಸುತ್ತಾರೆ” ಎಂದು ಮೂಲಗಳು ಹೇಳಿವೆ.

ಇಂದು  ರಾಹುಲ್ ಗಾಂಧಿ  ಶ್ರೀಪೆರಂಬದೂರಿನ ರಾಜೀವ್ ಗಾಂಧಿ ಸ್ಮಾರಕದಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದರು. ಶ್ರೀಪೆರಂಬದೂರಿನಲ್ಲಿ ಅವರ ತಂದೆ ರಾಜೀವ್ ಗಾಂಧಿ ಅವರು ಮೇ 21, 1991 ರಂದು ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಬಾಂಬ್ ಸ್ಫೋಟದಲ್ಲಿ ಹತ್ಯೆಯಾಗಿದ್ದರು. ರಾಹುಲ್ ಗಾಂಧಿ ಅವರು ತಮ್ಮ ತಂದೆಯ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. “ದ್ವೇಷ ಮತ್ತು ವಿಭಜನೆಯ ರಾಜಕಾರಣದಿಂದ ನಾನು ನನ್ನ ತಂದೆಯನ್ನು ಕಳೆದುಕೊಂಡೆ. ಅದಕ್ಕೆ ನನ್ನ ಪ್ರೀತಿಯ ದೇಶವನ್ನೂ ಕಳೆದುಕೊಳ್ಳುವುದಿಲ್ಲ. ಪ್ರೀತಿ ದ್ವೇಷವನ್ನು ಜಯಿಸುತ್ತದೆ. ಭರವಸೆ ಭಯವನ್ನು ಸೋಲಿಸುತ್ತದೆ. ಒಟ್ಟಿಗೆ, ನಾವು ಜಯಿಸುತ್ತೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಪಕ್ಷದ ಮುಖ್ಯಸ್ಥ ಡಿಕೆ ಶಿವಕುಮಾರ್ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಪ್ರಾರ್ಥನಾ ಸಭೆಯಲ್ಲಿ ಉಪಸ್ಥಿತರಿದ್ದರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ‘ಯಾತ್ರೆ’ಗೆ ಸೇರುವಂತೆ ಜನರನ್ನು ಒತ್ತಾಯಿಸಿದ್ದು, ದೇಶವನ್ನು ಸಮೃದ್ಧಗೊಳಿಸಲು ಜನರು ಒಂದಾಗಬೇಕು ಎಂದು ಹೇಳಿದರು.

ಈ ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿಮಾಚಲ ಪ್ರದೇಶ ಸೇರಿದಂತೆ 12 ರಾಜ್ಯಗಳ ಮೂಲಕ ಯಾತ್ರೆ ಸಾಗಲಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ