AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Yatra: ಕಾಶ್ಮೀರದಲ್ಲಿ ರಾಹುಲ್ ಗಾಂಧಿ ಯಾತ್ರೆಗೆ ನೀಡಿದ ಭದ್ರತೆ ಹಠಾತ್ ಹಿಂತೆಗೆದ ಸರ್ಕಾರ: ಕಾಂಗ್ರೆಸ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಜಮ್ಮು ಮತ್ತು ಕಾಶ್ಮೀರದ ಭಾರತ್ ಜೋಡೋ ಯಾತ್ರೆಯ ಭಾಗವಾಗಿರುವ ಯಾತ್ರಿಗಳಿಗೆ ಶುಕ್ರವಾರ ಬನಿಹಾಲ್‌ನಲ್ಲಿ ಭದ್ರತೆಯನ್ನು ನಿರಾಕರಿಸಲಾಗಿದೆ ಎಂದು ಪಕ್ಷದ ಹಲವು ಮುಖಂಡರು ಆರೋಪಿಸಿದ್ದಾರೆ

Bharat Jodo Yatra: ಕಾಶ್ಮೀರದಲ್ಲಿ ರಾಹುಲ್ ಗಾಂಧಿ ಯಾತ್ರೆಗೆ ನೀಡಿದ ಭದ್ರತೆ ಹಠಾತ್ ಹಿಂತೆಗೆದ ಸರ್ಕಾರ: ಕಾಂಗ್ರೆಸ್
ರಾಹುಲ್ ಗಾಂಧಿImage Credit source: NDTV
TV9 Web
| Edited By: |

Updated on: Jan 27, 2023 | 2:50 PM

Share

ಜಮ್ಮು- ಕಾಶ್ಮೀರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮತ್ತು ಜಮ್ಮು ಮತ್ತು ಕಾಶ್ಮೀರದ ಭಾರತ್ ಜೋಡೋ ಯಾತ್ರೆಯ (Bharat Jodo Yatra) ಭಾಗವಾಗಿರುವ ಯಾತ್ರಿಗಳಿಗೆ ಶುಕ್ರವಾರ ಬನಿಹಾಲ್‌ನಲ್ಲಿ ಭದ್ರತೆಯನ್ನು ನಿರಾಕರಿಸಲಾಗಿದೆ ಎಂದು ಪಕ್ಷದ ಹಲವು ಮುಖಂಡರು ಆರೋಪಿಸಿದ್ದಾರೆ. ಡಿ-ಏರಿಯಾದಿಂದ ಭದ್ರತಾ ಸಿಬ್ಬಂದಿ ಹಠಾತ್ ಹಿಂತೆಗೆದುಕೊಳ್ಳುವಿಕೆಯು ಕಾಶ್ಮೀರದ ಬನಿಹಾಲ್‌ನಲ್ಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಗಂಭೀರ ಭದ್ರತಾ ಉಲ್ಲಂಘನೆಯನ್ನು ಉಂಟುಮಾಡಿದೆ. ಇದನ್ನು ಯಾರು ಆದೇಶಿಸಿದ್ದಾರೆ? ಎಂದು ಪಕ್ಷದ ಮುಖಂಡ ಕೆಸಿ ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ. ಜವಾಬ್ದಾರರಾಗಿರುವ ಅಧಿಕಾರಿಗಳು ಈ ಲೋಪಕ್ಕೆ ಉತ್ತರಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಯಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು.

ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಶುಕ್ರವಾರ ಬನಿಹಾಲ್‌ನಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡರು, ರಾಹುಲ್ ಗಾಂಧಿ ನೇತೃತ್ವದ ಈ ಯಾತ್ರೆ ರಾಹುಲ್ ಅವರ ಇಮೇಜ್ ಮೇಕ್ ಓವರ್‌ಗಾಗಿ ನಡೆಸುತ್ತಿಲ್ಲ, ಬದಲಿಗೆ ದೇಶದಲ್ಲಿರುವ ಪರಿಸ್ಥಿತಿಯನ್ನು ಬದಲಾಯಿಸಲು ಈ ಯಾತ್ರೆ ನಡೆಸಲಾಗುತ್ತಿದೆ ಎಂದು ಹೇಳಿದರು. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಒಂದು ದಿನದ ವಿರಾಮದ ನಂತರ ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಬನಿಹಾಲ್‌ನಿಂದ ಭಾರತ್ ಜೋಡೋ ಯಾತ್ರೆ ಪುನರಾರಂಭವಾಯಿತು. ಜನವರಿ 30 ರಂದು ಶ್ರೀನಗರದಲ್ಲಿ ರ್ಯಾಲಿಯಲ್ಲಿ ಕೊನೆಗೊಳ್ಳಲಿದೆ. ಈ ಮೊದಲು ಯಾತ್ರೆ ತನ್ನ ಕೊನೆಯ ಹಂತದಲ್ಲಿ ಇಂದು ಕಾಶ್ಮೀರ ಕಣಿವೆಯನ್ನು ಪ್ರವೇಶಿಸಲಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಜೈರಾಮ್ ರಮೇಶ್ ಪ್ರಕಾರ, ಯಾತ್ರೆಯು ಜಮ್ಮುವಿನ ವಿವಿಧ ಜಿಲ್ಲೆಗಳಲ್ಲಿ ಹಾದು ಸುಮಾರು 90 ಕಿಲೋಮೀಟರ್‌ಗಳನ್ನು ಕ್ರಮಿಸಿದೆ.

ಇದನ್ನು ಓದಿ:Bharat Jodo Yatra ಪಾಕ್ ಪರ ಘೋಷಣೆ ಕೂಗಿದ ಆರೋಪದ ಮೇಲೆ ಕೈ ನಾಯಕರ ವಿರುದ್ಧ ದೂರು ದಾಖಲು

ಜನತಾ ದಳ (ಯುನೈಟೆಡ್) ಅಧ್ಯಕ್ಷ ಲಾಲನ್ ಸಿಂಗ್ ಗುರುವಾರ ಶ್ರೀನಗರದಲ್ಲಿ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ವಿರೋಧ ವ್ಯಕ್ತಪಡಿಸಿದ್ದಾರೆ . ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ಸಿಂಗ್ ಅವರು ಈ ಯಾತ್ರೆಯಲ್ಲಿ ನಾನು ಭಾಗವಹಿಸುವುದಿಲ್ಲ ನನಗೆ ನಾಗಾಲ್ಯಾಂಡ್‌ನಲ್ಲಿ ರಾಜಕೀಯ ಕಾರ್ಯಕ್ರಮ ನಿಗದಿತಯಾಗಿದೆ ಎಂದು ಹೇಳಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರಲು ಹಾಗೂ ಪಕ್ಷ ಸಂಘಟನೆಗಾಗಿ ಈ ಯಾತ್ರೆಗೆ ಬಿಜೆಪಿಯೇತರ ಪಕ್ಷಗಳ ಮುಖ್ಯಸ್ಥರನ್ನು ಕಾಂಗ್ರೆಸ್ ಆಹ್ವಾನಿಸಿದೆ.

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್