AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Yatra: ಭಾರತ್ ಜೋಡೋ ಯಾತ್ರೆಗೆ ಹೊಸ ಅತಿಥಿ; ರಾಹುಲ್ ಗಾಂಧಿ ಜತೆ ಯಾರಿದ್ದಾರೆ ನೋಡಿ

ಗೋಲ್ಡನ್ ರಿಟ್ರೈವರ್ ನಾಯಿಯೊಂದರ ಜತೆ ರಾಹುಲ್ ಹೆಜ್ಜೆ ಹಾಕುತ್ತಿರುವ ಚಿತ್ರವೀಗ ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲೂ ವೈರಲ್ ಆಗುತ್ತಿದೆ.

Bharat Jodo Yatra: ಭಾರತ್ ಜೋಡೋ ಯಾತ್ರೆಗೆ ಹೊಸ ಅತಿಥಿ; ರಾಹುಲ್ ಗಾಂಧಿ ಜತೆ ಯಾರಿದ್ದಾರೆ ನೋಡಿ
ಗೋಲ್ಡನ್ ರಿಟ್ರೈವರ್ ನಾಯಿಯೊಂದರ ಜತೆ ರಾಹುಲ್ ಹೆಜ್ಜೆ ಹಾಕುತ್ತಿರುವುದು (ಎಎನ್​ಐ ಚಿತ್ರ)Image Credit source: ANI
Follow us
TV9 Web
| Updated By: Ganapathi Sharma

Updated on: Jan 07, 2023 | 1:34 PM

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಭಾರತ್ ಜೋಡೋ ಯಾತ್ರೆ (Bharat Jodo Yatra) ಹರಿಯಾಣದ ಕರ್ನಾಲ್ (Karnal) ಪ್ರವೇಶಿಸಿದೆ. ಪ್ರತಿ ಬಾರಿಯೂ ಪಕ್ಷದ ಅನೇಕ ನಾಯಕರು, ಕಾರ್ಯಕರ್ತರು ಹಾಗೂ ಗಣ್ಯರ ಜತೆ ಕಾಣಿಸಿಕೊಳ್ಳುತ್ತಿದ್ದ ರಾಹುಲ್ ಗಾಂಧಿ ಈ ಬಾರಿ ಹೊಸ ಅತಿಥಿ ಜತೆ ಕಾಣಿಸಿಕೊಂಡಿದ್ದಾರೆ. ಹೌದು, ಗೋಲ್ಡನ್ ರಿಟ್ರೈವರ್ ನಾಯಿಯೊಂದರ ಜತೆ ರಾಹುಲ್ ಹೆಜ್ಜೆ ಹಾಕುತ್ತಿರುವ ಚಿತ್ರವೀಗ ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲೂ ವೈರಲ್ ಆಗುತ್ತಿದೆ. ಮಾಮೂಲಿಯಂತೆ ಬಿಳಿ ಟಿ-ಶರ್ಟ್ ಧರಿಸಿರುವ ರಾಹುಲ್ ಗಾಂಧಿ, ನಸು ನಗುತ್ತಾ ನಾಯಿಯ ಕೊರಳಿಗೆ ಹಾಕಿರುವ ಹಗ್ಗ ಹಿಡಿದು ಮುನ್ನಡೆಯುತ್ತಿರುವುದು ಚಿತ್ರದಲ್ಲಿದೆ.

ನಿಗದಿಯಂತೆ ಯಾತ್ರೆಯು ಘರೋಂಡ, ಮಧುಬನ್ ಮೂಲಕ ಹಾದುಹೋಗಲಿದೆ. ಸಂಜೆ ವೇಳೆಗೆ ಉಚ್ಚಾನಾದಲ್ಲಿ ದಿನದ ಯಾತ್ರೆ ಮುಕ್ತಾಯಗೊಳ್ಳಲಿದ್ದು, ನಾಳೆ ಮುಂದುವರಿಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಭಾರತ್​ ಜೋಡೋ ಯಾತ್ರೆ ಶುಕ್ರವಾರ ಹರಿಯಾಣದ ಪಾಣಿಪತ್‌ ಜಿಲ್ಲೆಗೆ ಪ್ರವೇಶಿಸಿತ್ತು. ಯಾತ್ರೆಯಲ್ಲಿ ಈ ಹಿಂದೆಯೂ ಹಲವು ಬಾರಿ ವಿಭಿನ್ನವಾಗಿ ಕಾಣಿಸಿಕೊಳ್ಳುವ ಮೂಲಕ ರಾಹುಲ್ ಗಾಂಧಿ ಗಮನ ಸೆಳೆದಿದ್ದರು. ದೆಹಲಿಯ ಕೊರೆಯುವ ಚಳಿಯಲ್ಲಿ ರಾಹುಲ್ ಗಾಂಧಿ ಟೀ ಶರ್ಟ್ ಮಾತ್ರ ಧರಿಸಿ ಜಾಕೆಟ್, ಸ್ವೆಟರ್ ಹಾಕದೆ ಹೆಜ್ಜೆ ಹಾಕುವ ಮೂಲಕ ಇತ್ತೀಚೆಗೆ ಗಮನ ಸೆಳೆದಿದ್ದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು