AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Yatra: ಭಾರತ್ ಜೋಡೋ ಯಾತ್ರೆಗೆ ಹೊಸ ಅತಿಥಿ; ರಾಹುಲ್ ಗಾಂಧಿ ಜತೆ ಯಾರಿದ್ದಾರೆ ನೋಡಿ

ಗೋಲ್ಡನ್ ರಿಟ್ರೈವರ್ ನಾಯಿಯೊಂದರ ಜತೆ ರಾಹುಲ್ ಹೆಜ್ಜೆ ಹಾಕುತ್ತಿರುವ ಚಿತ್ರವೀಗ ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲೂ ವೈರಲ್ ಆಗುತ್ತಿದೆ.

Bharat Jodo Yatra: ಭಾರತ್ ಜೋಡೋ ಯಾತ್ರೆಗೆ ಹೊಸ ಅತಿಥಿ; ರಾಹುಲ್ ಗಾಂಧಿ ಜತೆ ಯಾರಿದ್ದಾರೆ ನೋಡಿ
ಗೋಲ್ಡನ್ ರಿಟ್ರೈವರ್ ನಾಯಿಯೊಂದರ ಜತೆ ರಾಹುಲ್ ಹೆಜ್ಜೆ ಹಾಕುತ್ತಿರುವುದು (ಎಎನ್​ಐ ಚಿತ್ರ)Image Credit source: ANI
TV9 Web
| Edited By: |

Updated on: Jan 07, 2023 | 1:34 PM

Share

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಭಾರತ್ ಜೋಡೋ ಯಾತ್ರೆ (Bharat Jodo Yatra) ಹರಿಯಾಣದ ಕರ್ನಾಲ್ (Karnal) ಪ್ರವೇಶಿಸಿದೆ. ಪ್ರತಿ ಬಾರಿಯೂ ಪಕ್ಷದ ಅನೇಕ ನಾಯಕರು, ಕಾರ್ಯಕರ್ತರು ಹಾಗೂ ಗಣ್ಯರ ಜತೆ ಕಾಣಿಸಿಕೊಳ್ಳುತ್ತಿದ್ದ ರಾಹುಲ್ ಗಾಂಧಿ ಈ ಬಾರಿ ಹೊಸ ಅತಿಥಿ ಜತೆ ಕಾಣಿಸಿಕೊಂಡಿದ್ದಾರೆ. ಹೌದು, ಗೋಲ್ಡನ್ ರಿಟ್ರೈವರ್ ನಾಯಿಯೊಂದರ ಜತೆ ರಾಹುಲ್ ಹೆಜ್ಜೆ ಹಾಕುತ್ತಿರುವ ಚಿತ್ರವೀಗ ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲೂ ವೈರಲ್ ಆಗುತ್ತಿದೆ. ಮಾಮೂಲಿಯಂತೆ ಬಿಳಿ ಟಿ-ಶರ್ಟ್ ಧರಿಸಿರುವ ರಾಹುಲ್ ಗಾಂಧಿ, ನಸು ನಗುತ್ತಾ ನಾಯಿಯ ಕೊರಳಿಗೆ ಹಾಕಿರುವ ಹಗ್ಗ ಹಿಡಿದು ಮುನ್ನಡೆಯುತ್ತಿರುವುದು ಚಿತ್ರದಲ್ಲಿದೆ.

ನಿಗದಿಯಂತೆ ಯಾತ್ರೆಯು ಘರೋಂಡ, ಮಧುಬನ್ ಮೂಲಕ ಹಾದುಹೋಗಲಿದೆ. ಸಂಜೆ ವೇಳೆಗೆ ಉಚ್ಚಾನಾದಲ್ಲಿ ದಿನದ ಯಾತ್ರೆ ಮುಕ್ತಾಯಗೊಳ್ಳಲಿದ್ದು, ನಾಳೆ ಮುಂದುವರಿಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಭಾರತ್​ ಜೋಡೋ ಯಾತ್ರೆ ಶುಕ್ರವಾರ ಹರಿಯಾಣದ ಪಾಣಿಪತ್‌ ಜಿಲ್ಲೆಗೆ ಪ್ರವೇಶಿಸಿತ್ತು. ಯಾತ್ರೆಯಲ್ಲಿ ಈ ಹಿಂದೆಯೂ ಹಲವು ಬಾರಿ ವಿಭಿನ್ನವಾಗಿ ಕಾಣಿಸಿಕೊಳ್ಳುವ ಮೂಲಕ ರಾಹುಲ್ ಗಾಂಧಿ ಗಮನ ಸೆಳೆದಿದ್ದರು. ದೆಹಲಿಯ ಕೊರೆಯುವ ಚಳಿಯಲ್ಲಿ ರಾಹುಲ್ ಗಾಂಧಿ ಟೀ ಶರ್ಟ್ ಮಾತ್ರ ಧರಿಸಿ ಜಾಕೆಟ್, ಸ್ವೆಟರ್ ಹಾಕದೆ ಹೆಜ್ಜೆ ಹಾಕುವ ಮೂಲಕ ಇತ್ತೀಚೆಗೆ ಗಮನ ಸೆಳೆದಿದ್ದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು