AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Yatra: ಭಾರತ್ ಜೋಡೋ ಯಾತ್ರೆಗೆ ಹೊಸ ಅತಿಥಿ; ರಾಹುಲ್ ಗಾಂಧಿ ಜತೆ ಯಾರಿದ್ದಾರೆ ನೋಡಿ

ಗೋಲ್ಡನ್ ರಿಟ್ರೈವರ್ ನಾಯಿಯೊಂದರ ಜತೆ ರಾಹುಲ್ ಹೆಜ್ಜೆ ಹಾಕುತ್ತಿರುವ ಚಿತ್ರವೀಗ ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲೂ ವೈರಲ್ ಆಗುತ್ತಿದೆ.

Bharat Jodo Yatra: ಭಾರತ್ ಜೋಡೋ ಯಾತ್ರೆಗೆ ಹೊಸ ಅತಿಥಿ; ರಾಹುಲ್ ಗಾಂಧಿ ಜತೆ ಯಾರಿದ್ದಾರೆ ನೋಡಿ
ಗೋಲ್ಡನ್ ರಿಟ್ರೈವರ್ ನಾಯಿಯೊಂದರ ಜತೆ ರಾಹುಲ್ ಹೆಜ್ಜೆ ಹಾಕುತ್ತಿರುವುದು (ಎಎನ್​ಐ ಚಿತ್ರ)Image Credit source: ANI
TV9 Web
| Edited By: |

Updated on: Jan 07, 2023 | 1:34 PM

Share

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಭಾರತ್ ಜೋಡೋ ಯಾತ್ರೆ (Bharat Jodo Yatra) ಹರಿಯಾಣದ ಕರ್ನಾಲ್ (Karnal) ಪ್ರವೇಶಿಸಿದೆ. ಪ್ರತಿ ಬಾರಿಯೂ ಪಕ್ಷದ ಅನೇಕ ನಾಯಕರು, ಕಾರ್ಯಕರ್ತರು ಹಾಗೂ ಗಣ್ಯರ ಜತೆ ಕಾಣಿಸಿಕೊಳ್ಳುತ್ತಿದ್ದ ರಾಹುಲ್ ಗಾಂಧಿ ಈ ಬಾರಿ ಹೊಸ ಅತಿಥಿ ಜತೆ ಕಾಣಿಸಿಕೊಂಡಿದ್ದಾರೆ. ಹೌದು, ಗೋಲ್ಡನ್ ರಿಟ್ರೈವರ್ ನಾಯಿಯೊಂದರ ಜತೆ ರಾಹುಲ್ ಹೆಜ್ಜೆ ಹಾಕುತ್ತಿರುವ ಚಿತ್ರವೀಗ ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲೂ ವೈರಲ್ ಆಗುತ್ತಿದೆ. ಮಾಮೂಲಿಯಂತೆ ಬಿಳಿ ಟಿ-ಶರ್ಟ್ ಧರಿಸಿರುವ ರಾಹುಲ್ ಗಾಂಧಿ, ನಸು ನಗುತ್ತಾ ನಾಯಿಯ ಕೊರಳಿಗೆ ಹಾಕಿರುವ ಹಗ್ಗ ಹಿಡಿದು ಮುನ್ನಡೆಯುತ್ತಿರುವುದು ಚಿತ್ರದಲ್ಲಿದೆ.

ನಿಗದಿಯಂತೆ ಯಾತ್ರೆಯು ಘರೋಂಡ, ಮಧುಬನ್ ಮೂಲಕ ಹಾದುಹೋಗಲಿದೆ. ಸಂಜೆ ವೇಳೆಗೆ ಉಚ್ಚಾನಾದಲ್ಲಿ ದಿನದ ಯಾತ್ರೆ ಮುಕ್ತಾಯಗೊಳ್ಳಲಿದ್ದು, ನಾಳೆ ಮುಂದುವರಿಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಭಾರತ್​ ಜೋಡೋ ಯಾತ್ರೆ ಶುಕ್ರವಾರ ಹರಿಯಾಣದ ಪಾಣಿಪತ್‌ ಜಿಲ್ಲೆಗೆ ಪ್ರವೇಶಿಸಿತ್ತು. ಯಾತ್ರೆಯಲ್ಲಿ ಈ ಹಿಂದೆಯೂ ಹಲವು ಬಾರಿ ವಿಭಿನ್ನವಾಗಿ ಕಾಣಿಸಿಕೊಳ್ಳುವ ಮೂಲಕ ರಾಹುಲ್ ಗಾಂಧಿ ಗಮನ ಸೆಳೆದಿದ್ದರು. ದೆಹಲಿಯ ಕೊರೆಯುವ ಚಳಿಯಲ್ಲಿ ರಾಹುಲ್ ಗಾಂಧಿ ಟೀ ಶರ್ಟ್ ಮಾತ್ರ ಧರಿಸಿ ಜಾಕೆಟ್, ಸ್ವೆಟರ್ ಹಾಕದೆ ಹೆಜ್ಜೆ ಹಾಕುವ ಮೂಲಕ ಇತ್ತೀಚೆಗೆ ಗಮನ ಸೆಳೆದಿದ್ದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ