AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Jodo Yatra: ಅಣ್ಣ, ತಂಗಿಯ ಪ್ರೀತಿಗೆ ಸಾಕ್ಷಿ ಈ ವಿಡಿಯೊ: ರಾಹುಲ್ ಗಾಂಧಿ, ಪ್ರಿಯಾಂಕಾ ಸ್ನೋಬಾಲ್ ಫೈಟ್

ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಿದ್ಧತೆ ನಡುವೆ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕ ಗಾಂಧಿ ಇಬ್ಬರೂ ಮಕ್ಕಳಂತೆ ಮುಕ್ತ ಮನಸ್ಸಿನಿಂದ ಸ್ನೋಬಾಲ್​ನ್ನು ಒಬ್ಬರಿಗೊಬ್ಬರು ಎಸೆದುಕೊಂಡಿದ್ದಾರೆ. ಇದೀಗ ಈ ವಿಡಿಯೊ ವೈರಲ್ ಆಗಿದೆ.

Bharat Jodo Yatra: ಅಣ್ಣ, ತಂಗಿಯ ಪ್ರೀತಿಗೆ ಸಾಕ್ಷಿ ಈ ವಿಡಿಯೊ: ರಾಹುಲ್ ಗಾಂಧಿ, ಪ್ರಿಯಾಂಕಾ ಸ್ನೋಬಾಲ್ ಫೈಟ್
ರಾಹುಲ್ ಗಾಂಧಿ, ಪ್ರಿಯಾಂಕಾ ಸ್ನೋಬಾಲ್ ಫೈಟ್Image Credit source: TV9 kannada
TV9 Web
| Edited By: |

Updated on:Jan 30, 2023 | 1:00 PM

Share

ಶ್ರೀನಗರ: ಭಾರತ್ ಜೋಡೋ ಯಾತ್ರೆ(Bharat Jodo Yatra) ಸಮಾರೋಪಕ್ಕೆ ಎಲ್ಲ ರೀತಿಯ ಸಿದ್ಧತೆಗಳು ನಡೆಯುತ್ತಿದೆ. ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕ ಗಾಂಧಿ ಶ್ರೀನಗರದಲ್ಲಿ ಈಗಾಗಲೇ ವಾಸ್ತವ ಹೂಡಿದ್ದಾರೆ. ಇದೀಗ ಈ ಸಮಯದಲ್ಲಿ  ಇಬ್ಬರೂ ಮಕ್ಕಳಂತೆ ಮುಕ್ತ ಮನಸ್ಸಿನಿಂದ ಸ್ನೋಬಾಲ್​ನ್ನು (ಹಿಮ​ ಉಂಡೆ) ಒಬ್ಬರಿಗೊಬ್ಬರು ಎಸೆದುಕೊಂಡಿದ್ದಾರೆ. ಈ ವಿಡಿಯೊ ಸಖತ್ ವೈರಲ್ ಆಗಿದೆ. ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಪ್ರೀತಿಯ ಕ್ಷಣವನ್ನು ಹಂಚಿಕೊಂಡಿದ್ದಾರೆ. ಇಬ್ಬರು ಸ್ನೋಬಾಲ್ ಹೊಡೆದಾಡಿಕೊಂಡಿರುವ ವಿಡಿಯೊ ಮತ್ತು ಫೋಟೋ ವೈರಲ್ ಆಗಿದೆ.

ವಿಡಿಯೋದಲ್ಲಿ ರಾಹುಲ್ ಮತ್ತು ಪ್ರಿಯಾಂಕಾ ತಮಾಷೆಯಾಗಿ ಪರಸ್ಪರ ಹಿಮದ ಉಂಡೆಯನ್ನು ಎಸೆಯುವುದನ್ನು ಕಾಣಬಹುದು. ಕಾಂಗ್ರೆಸ್ ಕಾರ್ಯಕರ್ತರು ನೋಡುತ್ತಿರುವಂತೆ ರಾಹುಲ್ ಪ್ರಿಯಾಂಕಾ ಅವರ ತಲೆಯ ಮೇಲೆ ಹಿಮದ ಮಳೆಗರೆದಿದ್ದಾರೆ. ಪ್ರಿಯಾಂಕಾ ಕೂಡ ತನ್ನ ಸಹೋದರನೊಂದಿಗೆ ತಮಾಷೆಯಾಗಿ ಜಗಳ ಮಾಡುವುದನ್ನು ಈ ವಿಡಿಯೊದಲ್ಲಿ ತೋರಿಸಲಾಗಿದೆ. ರಾಹುಲ್ ಗಾಂಧಿ ತೋಳುಗಳನ್ನು ಹಿಂದಕ್ಕೆ ಹಿಡಿದುಕೊಂಡು ಅವರ ತಲೆಯ ಮೇಲೆ ಸ್ನೋಬಾಲ್‌ಗಳನ್ನು ಎಸೆಯುತ್ತಾರೆ, ಆದರೆ ರಾಹುಲ್ ಗಾಂಧಿ ಅವರಿಂದ ಬಿಡಿಸಿಕೊಳ್ಳಲು ಪ್ರಯತ್ನಿಸುತ್ತಾರೆ.

ಇದನ್ನು ಓದಿ: Bharat Jodo Yatra Highlights: ಸಮಾರೋಪ ಇಂದು; ರಾಹುಲ್ ಪಾದಯಾತ್ರೆಯ ಮುಖ್ಯಾಂಶಗಳಿವು

ಕಾಶ್ಮೀರದಲ್ಲಿ ಶನಿವಾರ ನಡೆದ ಭಾರತ್ ಜೋಡೋ ಯಾತ್ರೆಯ ಕೊನೆಯ ಹಂತದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಸಹೋದರನೊಂದಿಗೆ ಸೇರಿಕೊಂಡರು. ಶ್ರೀನಗರದಲ್ಲಿ ಇಂದು ನಡೆಯಲಿರುವ ಮೆಗಾ ರ್ಯಾಲಿಯೊಂದಿಗೆ ರಾಹುಲ್ ಗಾಂಧಿ ನೇತೃತ್ವದ ಪಾದಯಾತ್ರೆ ಅಂತ್ಯಗೊಳ್ಳಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:59 pm, Mon, 30 January 23

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!