AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ಭದ್ರತಾ ಲೋಪ, ಗೃಹ ಸಚಿವ ಅಮಿತ್ ಶಾಗೆ ಕಾಂಗ್ರೆಸ್​​​ ಪತ್ರ

ಇಂಟಲಿಜೆನ್ಸ್ ಬ್ಯೂರೋ ಕಿರುಕುಳ ನೀಡುತ್ತಿದೆ ಎಂದು ಪಕ್ಷ ಆರೋಪಿಸಿದ್ದು ಯಾತ್ರೆಯಲ್ಲಿ ಭಾಗವಹಿಸಿದ ಕೆಲವರನ್ನು ಪ್ರಶ್ನಿಸಲಾಗಿದೆ ಎಂದು ಹೇಳಿದೆ. ಪರಿಸ್ಥಿತಿ ಎಷ್ಟು ತೀವ್ರವಾಗಿತ್ತೆಂದರೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಭಾರತ್ ಜೋಡೋ ಯಾತ್ರಿಗಳು ರಾಹುಲ್ ಗಾಂಧಿಯ ಸುತ್ತ ವಲಯವನ್ನು ರಚಿಸಬೇಕಾಯಿತು

ದೆಹಲಿಯಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ಭದ್ರತಾ ಲೋಪ, ಗೃಹ ಸಚಿವ ಅಮಿತ್ ಶಾಗೆ ಕಾಂಗ್ರೆಸ್​​​ ಪತ್ರ
ದೆಹಲಿಯಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Dec 28, 2022 | 4:38 PM

Share

ಡಿಸೆಂಬರ್ 24ಕ್ಕೆ ಭಾರತ್ ಜೋಡೋ ಯಾತ್ರೆ (Bharat Jodo Yatra) ದೆಹಲಿಗೆ ಬಂದಾಗಿನಿಂದ ಹಲವು ಭಾರಿ ಭದ್ರತಾ ಲೋಪ (security breaches) ಉಂಟಾಗಿದೆ. ದೆಹಲಿ ಪೊಲೀಸರು ಜನರ ಗುಂಪನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದು ಮಾತ್ರವಲ್ಲದೆ ರಾಹುಲ್ ಗಾಂಧಿಗೆ (Rahul Gandhi) ಭದ್ರತೆ ನೀಡುವಲ್ಲಿಯೂ ವಿಫಲರಾಗಿದ್ದಾರೆ ಎಂದು ಕಾಂಗ್ರೆಸ್ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ (Amit Shah)ಪತ್ರ ಬರೆದಿದೆ. ಇಂಟಲಿಜೆನ್ಸ್ ಬ್ಯೂರೋ ಕಿರುಕುಳ ನೀಡುತ್ತಿದೆ ಎಂದು ಪಕ್ಷ ಆರೋಪಿಸಿದ್ದು ಯಾತ್ರೆಯಲ್ಲಿ ಭಾಗವಹಿಸಿದ ಕೆಲವರನ್ನು ಪ್ರಶ್ನಿಸಲಾಗಿದೆ ಎಂದು ಹೇಳಿದೆ. ಪರಿಸ್ಥಿತಿ ಎಷ್ಟು ತೀವ್ರವಾಗಿತ್ತೆಂದರೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಭಾರತ್ ಜೋಡೋ ಯಾತ್ರಿಗಳು ರಾಹುಲ್ ಗಾಂಧಿಯ ಸುತ್ತ ವಲಯವನ್ನು ರಚಿಸಬೇಕಾಯಿತು. ದೆಹಲಿ ಪೊಲೀಸರು ಮೂಕಪ್ರೇಕ್ಷಕರಾಗಿ ನಿಂತುಕೊಂಡಿದ್ದರು ಎಂದು ಪತ್ರದಲ್ಲಿ ಹೇಳಲಾಗಿದೆ. ರಾಹುಲ್ ಗಾಂಧಿಯವರಿಗೆ Z+ ಭದ್ರತೆ ಇದೆ ಎಂಬುದನ್ನೂ ಪತ್ರದಲ್ಲಿ ಸೂಚಿಸಲಾಗಿದೆ. Z+ ವರ್ಗದ ಭದ್ರತೆ ಅಂದರೆ ಬುಲೆಟ್ ಪ್ರೂಫ್ ವಾಹನ, ಪೈಲಟ್ ವಾಹನ, ರಸ್ತೆಗಳಲ್ಲಿ ಆದ್ಯತೆ ಮತ್ತು ಅವರ ನಿವಾಸಗಳು, ಕೆಲಸದ ಸ್ಥಳಗಳು ಅಥವಾ ಅವರು ಭೇಟಿ ನೀಡುವ ಯಾವುದೇ ಸ್ಥಳದಲ್ಲಿ 24/7 ಭದ್ರತೆಯನ್ನು ಪಡೆಯುತ್ತಾರೆ. ಯಾತ್ರೆಯ ಸಂದರ್ಭದಲ್ಲಿ.

ಕಿರುಕುಳದ ಆರೋಪವನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ,ಇದು ದಶಕಗಳಲ್ಲಿ ಕಾಂಗ್ರೆಸ್‌ನ ಅತಿದೊಡ್ಡ ಸಾರ್ವಜನಿಕ ಸಂಪರ್ಕವಾಗಿದೆ. ಹರ್ಯಾಣ ರಾಜ್ಯದ ಗುಪ್ತಚರ ಸಂಸ್ಥೆಗೆ ಸೇರಿದ ಅಪರಿಚಿತ ದುಷ್ಕರ್ಮಿಗಳು ಹರಿಯಾಣದಲ್ಲಿ ಭಾರತ್ ಜೋಡೋ ಯಾತ್ರಾ ಕಂಟೇನರ್‌ಗಳನ್ನು ಅಕ್ರಮವಾಗಿ ಪ್ರವೇಶಿಸಿದ ಬಗ್ಗೆ ನಾವು 23 ಡಿಸೆಂಬರ್ 2022 ರಂದು ಸೋಹ್ನಾ ಸಿಟಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ.” ಸೇಡಿನ ರಾಜಕೀಯದಲ್ಲಿ ತೊಡಗಬೇಡಿ. ಗಾಂಧಿಯವರ ಸುರಕ್ಷತೆ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳಿ ಎ ಎಂದು ಕಾಂಗ್ರೆಸ್, ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಭಾರತದಾದ್ಯಂತ ಸ್ವತಂತ್ರವಾಗಿ ಒಟ್ಟುಗೂಡುವ ಮತ್ತು ಚಲಿಸುವ ಹಕ್ಕು ಪ್ರತಿಯೊಬ್ಬ ನಾಗರಿಕನಿಗೂ ಇದೆ ಎಂದು ಅದು ಹೇಳಿದೆ. “ಭಾರತ್ ಜೋಡೋ ಯಾತ್ರೆಯು ದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ತರಲಿರುವ ಪಾದಯಾತ್ರೆ ಆಗಿದೆ ಎಂದು ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್ ಸಹಿ ಮಾಡಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Covishield Vaccine: ಬೆಂಗಳೂರಲ್ಲಿ ಕೋವಿಶೀಲ್ಡ್ ಲಸಿಕೆ ನೋ ಸ್ಟಾಕ್: ಬೂಸ್ಟರ್ ಡೋಸ್ ತೆಗೆದುಕೊಳ್ಳಲು ಜನರು ಪರದಾಟ

ರಾಹುಲ್ ಗಾಂಧಿಯವರು ಶನಿವಾರ ರಾಷ್ಟ್ರ ರಾಜಧಾನಿಯ ಪ್ರಮುಖ ಪ್ರದೇಶಗಳಲ್ಲಿ ಯಾತ್ರೆಯನ್ನು ನಡೆಸಿದರು. ಮಾರ್ಚ್ 7 ರಿಂದ 9 ರಾಜ್ಯಗಳಾದ ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಹರಿಯಾಣದಾದ್ಯಂತ 3,000 ಕಿಲೋಮೀಟರ್‌ಗಳಷ್ಟು ದೂರವನ್ನು ಇದುವರೆಗೆ ಕ್ರಮಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Wed, 28 December 22

Follow Us
TV9 Web
TV9 Web

TV9 Kannada

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ