AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಸರ್ಕಾರಿ ಆಸ್ಪತ್ರೆಗಳಿಗೆ ಭಾರತ್ ಪೆಟ್ರೋಲಿಯಂ ಸಂಸ್ಥೆಯಿಂದ ದಿನಕ್ಕೆ 1.5 ಟನ್ ಮೆಡಿಕಲ್​​ ಆಕ್ಸಿಜನ್​ ಪೂರೈಕೆ

ಪೆಟ್ರೋಲಿಯಂ ಕ್ಷೇತ್ರದಲ್ಲಿ ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಭಾರತ್ ಪೆಟ್ರೋಲಿಯಂ ಕೊಚ್ಚಿಯ ರಿಫೈನರಿಯಿಂದ ಪ್ರತಿನಿತ್ಯ 1.5 ಟನ್​ ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡಲು ನಿರ್ಧರಿಸಿದೆ. ಮೆಡಿಕಲ್​ ಆಕ್ಸಿಜನ್​ಗೆ ಬೇಡಿಕೆ ಹೆಚ್ಚುತ್ತಿರುವ ಹೊತ್ತಿನಲ್ಲಿಯೇ ಭಾರತ್ ಪೆಟ್ರೋಲಿಯಂನಿಂದ ಇಂಥದ್ದೊಂದು ನಿರ್ಧಾರ ಹೊರಬಿದ್ದಿದೆ.

ಕೇರಳ ಸರ್ಕಾರಿ ಆಸ್ಪತ್ರೆಗಳಿಗೆ ಭಾರತ್ ಪೆಟ್ರೋಲಿಯಂ ಸಂಸ್ಥೆಯಿಂದ ದಿನಕ್ಕೆ 1.5 ಟನ್ ಮೆಡಿಕಲ್​​ ಆಕ್ಸಿಜನ್​ ಪೂರೈಕೆ
ಭಾರತ್​ ಪೆಟ್ರೋಲಿಯಂ
Skanda
| Edited By: |

Updated on: Apr 16, 2021 | 8:12 AM

Share

ಕೊಚ್ಚಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ವೇಗವಾಗಿ ಹಬ್ಬುತ್ತಿದ್ದು ಸೋಂಕಿತರ ಸಂಖ್ಯೆ ದಿನೇ ದಿನೇ ಉಲ್ಬಣಿಸುತ್ತಿದೆ. ಕೊರೊನಾ ಸೋಂಕು ಹಬ್ಬದಂತೆ ಹಲವು ರಾಜ್ಯಗಳು ಈಗಾಗಲೇ ಕಠಿಣ ನಿಯಮಾವಳಿಗಳ ಮೊರೆ ಹೋಗಿವೆಯಾದರೂ ಪರಿಸ್ಥಿತಿ ನಿಯಂತ್ರಿಸುವುದು ಕ್ಲಿಷ್ಟಕರವಾಗುತ್ತಿದೆ. ಹಲವೆಡೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ಬೆಡ್​, ಐಸಿಯು ವ್ಯವಸ್ಥೆ, ಆಕ್ಸಿಜನ್​ ಸೌಲಭ್ಯದಲ್ಲೇ ಕೊರತೆ ಉಂಟಾಗುತ್ತಿದ್ದು ಸೋಂಕಿತರು ಸೂಕ್ತ ಆರೈಕೆ ಸಿಗದ ಕಾರಣ ಪ್ರಾಣತೆರುವಂತಾಗಿದೆ. ಇಂತಹ ಸನ್ನಿವೇಶದಲ್ಲಿ ಕೇರಳದ ಸರ್ಕಾರಿ ಆಸ್ಪತ್ರೆಗಳಿಗೆ ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡಲು ಭಾರತ್ ಪೆಟ್ರೋಲಿಯಂ ಮುಂದೆ ಬಂದಿದೆ.

ಪೆಟ್ರೋಲಿಯಂ ಕ್ಷೇತ್ರದಲ್ಲಿ ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಭಾರತ್ ಪೆಟ್ರೋಲಿಯಂ ಕೊಚ್ಚಿಯ ರಿಫೈನರಿಯಿಂದ ಪ್ರತಿನಿತ್ಯ 1.5 ಟನ್​ ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡಲು ನಿರ್ಧರಿಸಿದೆ. ಮೆಡಿಕಲ್​ ಆಕ್ಸಿಜನ್​ಗೆ ಬೇಡಿಕೆ ಹೆಚ್ಚುತ್ತಿರುವ ಹೊತ್ತಿನಲ್ಲಿಯೇ ಭಾರತ್ ಪೆಟ್ರೋಲಿಯಂನಿಂದ ಇಂಥದ್ದೊಂದು ನಿರ್ಧಾರ ಹೊರಬಿದ್ದಿದ್ದು, ಕೇರಳದ ಸರ್ಕಾರಿ ಆಸ್ಪತ್ರೆಗಳಿಗೆ ಮೆಡಿಕಲ್ ಆಕ್ಸಿಜನ್​ ಪೂರೈಕೆ ಮಾಡುವುದಾಗಿ ತಿಳಿಸಿದೆ.

ಕೊವಿಡ್​ ಲಸಿಕೆ ಕೊರತೆ; ಮುಂಬೈ ಹಾಫ್​ಕೀನ್ಸ್​ ಸಂಸ್ಥೆಗೆ ಲಸಿಕೆ ಉತ್ಪಾದಿಸಲು ಅನುಮತಿ ಮುಂಬೈ: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ಸೋಂಕು ಹಬ್ಬದಂತೆ ತಡೆಯುವ ಒಂದು ಮಾರ್ಗವಾಗಿ ಕೊರೊನಾ ಲಸಿಕೆ ತೆಗೆದುಕೊಳ್ಳಲು ಜನರನ್ನು ಉತ್ತೇಜಿಸಲಾಗುತ್ತಿದೆ. ಆದರೆ, ಸದ್ಯದ ಸ್ಥಿತಿಯಲ್ಲಿ ಕೊವಿಡ್​ ಲಸಿಕೆ ಪೂರೈಕೆಯಲ್ಲೂ ಕೊರತೆ ಕಾಣಿಸಿಕೊಂಡಿದ್ದು, ಮುಂಬೈನ್​ ಹಾಫ್​ಕೀನ್ಸ್​ ಇನ್​ಸ್ಟಿಟ್ಯೂಟ್​ಗೆ ಕೊರೊನಾ ಲಸಿಕೆ ಕೊವ್ಯಾಕ್ಸಿನ್​ ಉತ್ಪಾದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಪೊಲೀಸ್​ ಇಲಾಖೆಯ 388 ಸಿಬ್ಬಂದಿಗೆ ಕೊರೊನಾ ಸೋಂಕು ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬಿದ್ದು, ಸೋಂಕು ನಿಯಂತ್ರಣಕ್ಕೆ ದೆಹಲಿ ಸರ್ಕಾರ ವಾರಾಂತ್ಯದ ಕರ್ಫ್ಯೂ ಮೊರೆ ಹೋಗಿದೆ. ಈ ನಡುವೆಯೇ ದೆಹಲಿ ಪೊಲೀಸ್ ಇಲಾಖೆಯ 388 ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಆರಕ್ಷಕರಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದ ಸರ್ಕಾರ 

Explainer: ವಿದೇಶಿ ಕೊರೊನಾ ಲಸಿಕೆಗಳಿಗೆ ಅನುಮತಿ ನೀಡಲು ತುದಿಗಾಲಲ್ಲಿ ನಿಂತಿದೆ ಭಾರತ ಸರ್ಕಾರ; ಉಂಟಾ ಏನಾದರೂ ಪ್ರಯೋಜನ?

(Bharat Petroleum to supply 1.5 tons of Medical oxygen per day to Kerala government hospitals)

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ