AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಸರ್ಕಾರಿ ಆಸ್ಪತ್ರೆಗಳಿಗೆ ಭಾರತ್ ಪೆಟ್ರೋಲಿಯಂ ಸಂಸ್ಥೆಯಿಂದ ದಿನಕ್ಕೆ 1.5 ಟನ್ ಮೆಡಿಕಲ್​​ ಆಕ್ಸಿಜನ್​ ಪೂರೈಕೆ

ಪೆಟ್ರೋಲಿಯಂ ಕ್ಷೇತ್ರದಲ್ಲಿ ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಭಾರತ್ ಪೆಟ್ರೋಲಿಯಂ ಕೊಚ್ಚಿಯ ರಿಫೈನರಿಯಿಂದ ಪ್ರತಿನಿತ್ಯ 1.5 ಟನ್​ ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡಲು ನಿರ್ಧರಿಸಿದೆ. ಮೆಡಿಕಲ್​ ಆಕ್ಸಿಜನ್​ಗೆ ಬೇಡಿಕೆ ಹೆಚ್ಚುತ್ತಿರುವ ಹೊತ್ತಿನಲ್ಲಿಯೇ ಭಾರತ್ ಪೆಟ್ರೋಲಿಯಂನಿಂದ ಇಂಥದ್ದೊಂದು ನಿರ್ಧಾರ ಹೊರಬಿದ್ದಿದೆ.

ಕೇರಳ ಸರ್ಕಾರಿ ಆಸ್ಪತ್ರೆಗಳಿಗೆ ಭಾರತ್ ಪೆಟ್ರೋಲಿಯಂ ಸಂಸ್ಥೆಯಿಂದ ದಿನಕ್ಕೆ 1.5 ಟನ್ ಮೆಡಿಕಲ್​​ ಆಕ್ಸಿಜನ್​ ಪೂರೈಕೆ
ಭಾರತ್​ ಪೆಟ್ರೋಲಿಯಂ
Skanda
| Edited By: |

Updated on: Apr 16, 2021 | 8:12 AM

Share

ಕೊಚ್ಚಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ವೇಗವಾಗಿ ಹಬ್ಬುತ್ತಿದ್ದು ಸೋಂಕಿತರ ಸಂಖ್ಯೆ ದಿನೇ ದಿನೇ ಉಲ್ಬಣಿಸುತ್ತಿದೆ. ಕೊರೊನಾ ಸೋಂಕು ಹಬ್ಬದಂತೆ ಹಲವು ರಾಜ್ಯಗಳು ಈಗಾಗಲೇ ಕಠಿಣ ನಿಯಮಾವಳಿಗಳ ಮೊರೆ ಹೋಗಿವೆಯಾದರೂ ಪರಿಸ್ಥಿತಿ ನಿಯಂತ್ರಿಸುವುದು ಕ್ಲಿಷ್ಟಕರವಾಗುತ್ತಿದೆ. ಹಲವೆಡೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಯಲ್ಲಿ ಬೆಡ್​, ಐಸಿಯು ವ್ಯವಸ್ಥೆ, ಆಕ್ಸಿಜನ್​ ಸೌಲಭ್ಯದಲ್ಲೇ ಕೊರತೆ ಉಂಟಾಗುತ್ತಿದ್ದು ಸೋಂಕಿತರು ಸೂಕ್ತ ಆರೈಕೆ ಸಿಗದ ಕಾರಣ ಪ್ರಾಣತೆರುವಂತಾಗಿದೆ. ಇಂತಹ ಸನ್ನಿವೇಶದಲ್ಲಿ ಕೇರಳದ ಸರ್ಕಾರಿ ಆಸ್ಪತ್ರೆಗಳಿಗೆ ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡಲು ಭಾರತ್ ಪೆಟ್ರೋಲಿಯಂ ಮುಂದೆ ಬಂದಿದೆ.

ಪೆಟ್ರೋಲಿಯಂ ಕ್ಷೇತ್ರದಲ್ಲಿ ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಭಾರತ್ ಪೆಟ್ರೋಲಿಯಂ ಕೊಚ್ಚಿಯ ರಿಫೈನರಿಯಿಂದ ಪ್ರತಿನಿತ್ಯ 1.5 ಟನ್​ ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡಲು ನಿರ್ಧರಿಸಿದೆ. ಮೆಡಿಕಲ್​ ಆಕ್ಸಿಜನ್​ಗೆ ಬೇಡಿಕೆ ಹೆಚ್ಚುತ್ತಿರುವ ಹೊತ್ತಿನಲ್ಲಿಯೇ ಭಾರತ್ ಪೆಟ್ರೋಲಿಯಂನಿಂದ ಇಂಥದ್ದೊಂದು ನಿರ್ಧಾರ ಹೊರಬಿದ್ದಿದ್ದು, ಕೇರಳದ ಸರ್ಕಾರಿ ಆಸ್ಪತ್ರೆಗಳಿಗೆ ಮೆಡಿಕಲ್ ಆಕ್ಸಿಜನ್​ ಪೂರೈಕೆ ಮಾಡುವುದಾಗಿ ತಿಳಿಸಿದೆ.

ಕೊವಿಡ್​ ಲಸಿಕೆ ಕೊರತೆ; ಮುಂಬೈ ಹಾಫ್​ಕೀನ್ಸ್​ ಸಂಸ್ಥೆಗೆ ಲಸಿಕೆ ಉತ್ಪಾದಿಸಲು ಅನುಮತಿ ಮುಂಬೈ: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆಯೇ ಸೋಂಕು ಹಬ್ಬದಂತೆ ತಡೆಯುವ ಒಂದು ಮಾರ್ಗವಾಗಿ ಕೊರೊನಾ ಲಸಿಕೆ ತೆಗೆದುಕೊಳ್ಳಲು ಜನರನ್ನು ಉತ್ತೇಜಿಸಲಾಗುತ್ತಿದೆ. ಆದರೆ, ಸದ್ಯದ ಸ್ಥಿತಿಯಲ್ಲಿ ಕೊವಿಡ್​ ಲಸಿಕೆ ಪೂರೈಕೆಯಲ್ಲೂ ಕೊರತೆ ಕಾಣಿಸಿಕೊಂಡಿದ್ದು, ಮುಂಬೈನ್​ ಹಾಫ್​ಕೀನ್ಸ್​ ಇನ್​ಸ್ಟಿಟ್ಯೂಟ್​ಗೆ ಕೊರೊನಾ ಲಸಿಕೆ ಕೊವ್ಯಾಕ್ಸಿನ್​ ಉತ್ಪಾದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಪೊಲೀಸ್​ ಇಲಾಖೆಯ 388 ಸಿಬ್ಬಂದಿಗೆ ಕೊರೊನಾ ಸೋಂಕು ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬಿದ್ದು, ಸೋಂಕು ನಿಯಂತ್ರಣಕ್ಕೆ ದೆಹಲಿ ಸರ್ಕಾರ ವಾರಾಂತ್ಯದ ಕರ್ಫ್ಯೂ ಮೊರೆ ಹೋಗಿದೆ. ಈ ನಡುವೆಯೇ ದೆಹಲಿ ಪೊಲೀಸ್ ಇಲಾಖೆಯ 388 ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಆರಕ್ಷಕರಲ್ಲಿ ಆತಂಕ ಮೂಡಿಸಿದೆ.

ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗೆ ದರ ನಿಗದಿ ಮಾಡಿದ ಸರ್ಕಾರ 

Explainer: ವಿದೇಶಿ ಕೊರೊನಾ ಲಸಿಕೆಗಳಿಗೆ ಅನುಮತಿ ನೀಡಲು ತುದಿಗಾಲಲ್ಲಿ ನಿಂತಿದೆ ಭಾರತ ಸರ್ಕಾರ; ಉಂಟಾ ಏನಾದರೂ ಪ್ರಯೋಜನ?

(Bharat Petroleum to supply 1.5 tons of Medical oxygen per day to Kerala government hospitals)

Follow Us
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ