AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನ ಸಾಮಾನ್ಯರಿಂದಲೂ ಸಂವಿಧಾನ ಕರ್ತೃವಿನ ಸ್ಮರಣೆ: #BharathRatna ಟ್ರೆಂಡಿಂಗ್

ಬದುಕಿನುದ್ದಕ್ಕೂ ಸಾಮಾಜಿಕ ಸಮಾನತೆಯನ್ನು ಸಾರಿದ ಅಂಬೇಡ್ಕರರನ್ನು ವಿಧ ವಿಧವಾಗಿ ಸ್ಮರಿಸಿದ ನಾಗರಿಕರು, ಮರಣೋತ್ತರ ಭಾರತ ರತ್ನ ಗೌರವವಕ್ಕೆ ಪ್ರಾಪ್ತವಾದ ನಾಯಕನಿಗೆ #BharathRatna ಹ್ಯಾಷ್​ಟ್ಯಾಗ್​ನೊಂದಿಗೆ ಕೃತಜ್ಞತೆ ವ್ಯಕ್ತಪಡಿಸಿದರು.

ಜನ ಸಾಮಾನ್ಯರಿಂದಲೂ ಸಂವಿಧಾನ ಕರ್ತೃವಿನ ಸ್ಮರಣೆ: #BharathRatna ಟ್ರೆಂಡಿಂಗ್
ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 06, 2020 | 4:14 PM

Share

ಬೆಂಗಳೂರು: ಡಾ.ಬಿ.ಆರ್. ಅಂಬೇಡ್ಕರ್ ಅವರ 64ನೇ ಮಹಾ ಪರಿನಿರ್ವಾಣ ದಿನದಂದು ರಾಜಕೀಯ ನಾಯಕರ ಜೊತೆ ದೇಶದ ಜನತೆಯೂ ಸಂವಿಧಾನ ಕರ್ತೃವನ್ನು ಗೌರವದಿಂದ ಸ್ಮರಿಸಿದ್ದಾರೆ.

ಟ್ವಿಟರ್​​ನಲ್ಲಿ #BharathRatna ಹ್ಯಾಷ್​ಟ್ಯಾಗ್ ಟ್ರೆಂಡ್ ಆಗಿತ್ತು. ಬದುಕಿನುದ್ದಕ್ಕೂ ಸಾಮಾಜಿಕ ಸಮಾನತೆಯನ್ನು ಸಾರಿದ ಅಂಬೇಡ್ಕರರನ್ನು ವಿಧ ವಿಧವಾಗಿ ಸ್ಮರಿಸಿದ ನಾಗರಿಕರು, ಮರಣೋತ್ತರ ಭಾರತ ರತ್ನ ಗೌರವವಕ್ಕೆ ಪ್ರಾಪ್ತವಾದ ನಾಯಕನಿಗೆ ಕೃತಜ್ಞತೆ ವ್ಯಕ್ತಪಡಿಸಿದರು.

ವಕೀಲರಾಗಿ, ಆರ್ಥಿಕ ತಜ್ಞರಾಗಿ, ರಾಜಕಾರಣಿಯಾಗಿ, ಸಾಮಾಜಿಕ ಹೋರಾಟಗಾರನಾಗಿಯೂ ಸೇವೆ ಸಲ್ಲಿಸಿದ ಬಾಬಾ ಸಾಹೇಬರ ಕುರಿತು ಮಧ್ಯಾಹ್ನದ ವೇಳೆಗೆ 1000ಕ್ಕೂ ಅಧಿಕ ಮಂದಿ #BharathRatna ಬಳಸಿ ಟ್ವೀಟ್ ಮಾಡಿದ್ದರು.

ಸಂವಿಧಾನ ಕರ್ತೃವಿನ ಹೆಸರಲ್ಲಿದೆ ಸಾವಿರಾರು ಸಂಸ್ಥೆಗಳು.. ಅಂಬೇಡ್ಕರ್ ಹೆಸರಿನ ಸಂಘ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು ದೇಶದುದ್ದಕ್ಕೂ ಇವೆ. ನಾಗ್ಪುರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಹೆಸರಿಡಲಾಗಿದೆ. ದೆಹಲಿಯಲ್ಲಿ ಅಂಬೇಡ್ಕರ್ ವಿಶ್ವವಿದ್ಯಾಲಯವಿದೆ. ಜಲಂಧರ್​​ನಲ್ಲಿ ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿದೆ. ಅಷ್ಟೇ ಅಲ್ಲದೇ, ದೇಶದ ಉದ್ದಗಲಕ್ಕೂ ಸಾವಿರಾರು ಸಂಸ್ಥೆಗಳಿಗೆ ಅಂಬೇಡ್ಕರ್ ಹೆಸರಿಡಲಾಗಿದೆ.

ಸಂವಿಧಾನವನ್ನು ಬದಲಿಸುವ ಮಾತುಗಳು ಕೇಳಿಬರುತ್ತಿರುವ ಈ ದುರಿತ ಕಾಲದಲ್ಲಿ ಅಂಬೇಡ್ಕರ್ ಪದೇಪದೇ ನೆನಪಾಗುತ್ತಾರೆ. ಸದಾಕಾಲ ನಾವು ಅನುಸರಿಸುವ ಸಂವಿಧಾನದ ಮೂಲಕ ಅವರು ಭಾರತೀಯರ ಜೊತೆಗಿರುತ್ತಾರೆ ಎಂಬುದಂತೂ ದಿಟ ಎಂದು ಹಲವರು ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.

ಇಂದು ಅಂಬೇಡ್ಕರ್​ ಮಹಾ ಪರಿನಿರ್ವಾಣ ದಿನ: ಸಂವಿಧಾನ ಕರ್ತೃವಿಗೆ ನಾಯಕರ ಕೃತಜ್ಞತೆ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!