AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಬಗ್ಗೆ ಜನರ ದಾರಿ ತಪ್ಪಿಸಬೇಡಿ: ಸೋನಿಯಾ ಗಾಂಧಿಗೆ ಜೆ.ಪಿ.ನಡ್ಡಾ ಪತ್ರ

JP Nadda: ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೊವಿಡ್ -19 ಅಲೆಯು ಮೋದಿ ಸರ್ಕಾರದ ಉದಾಸೀನತೆ, ಸೂಕ್ಷ್ಮತೆ ಮತ್ತು ಅಸಮರ್ಥತೆಯ ನೇರ ಪರಿಣಾಮ ಎಂದು ಕರೆಯುವ ನಿರ್ಣಯವನ್ನು ಅಂಗೀಕರಿಸಿದ ಬೆನ್ನಲ್ಲೇ ನಡ್ಡಾ ಕಾಂಗ್ರೆಸ್​ಗೆ ಈ ಪತ್ರ ಬರೆದಿದ್ದಾರೆ.

ಕೊವಿಡ್ ಬಗ್ಗೆ ಜನರ ದಾರಿ ತಪ್ಪಿಸಬೇಡಿ: ಸೋನಿಯಾ ಗಾಂಧಿಗೆ ಜೆ.ಪಿ.ನಡ್ಡಾ ಪತ್ರ
ಜೆ.ಪಿ. ನಡ್ಡಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 11, 2021 | 1:49 PM

Share

ದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಂಗಳವಾರ ತಮ್ಮ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರವೊಂದನ್ನು ಬರೆದಿದ್ದಾರೆ. ಜನರನ್ನು ದಾರಿತಪ್ಪಿಸುವುದನ್ನು ನಿಲ್ಲಿಸಿ, ಸುಳ್ಳು ಭೀತಿಯನ್ನು ಸೃಷ್ಟಿಸಿ ಮತ್ತು ಲಸಿಕೆ ನೀತಿಯ ನಿಲುವುಗಳಿಗೆ ವಿರುದ್ಧವಾಗಿ ವರ್ತಿಸುವುದನ್ನು ನಿಲ್ಲಿಸಿ ಎಂದು ಪ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳಲ್ಲಿ ಪತ್ರದಲ್ಲಿ ನಡ್ಡಾ ಮನವಿ ಮಾಡಿದ್ದಾರೆ.

ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೊವಿಡ್ -19 ಅಲೆಯು ಮೋದಿ ಸರ್ಕಾರದ ಉದಾಸೀನತೆ, ಸೂಕ್ಷ್ಮತೆ ಮತ್ತು ಅಸಮರ್ಥತೆಯ ನೇರ ಪರಿಣಾಮ ಎಂದು ಕರೆಯುವ ನಿರ್ಣಯವನ್ನು ಅಂಗೀಕರಿಸಿದ ಬೆನ್ನಲ್ಲೇ ನಡ್ಡಾ ಕಾಂಗ್ರೆಸ್​ಗೆ ಈ ಪತ್ರ ಬರೆದಿದ್ದಾರೆ.

ನಾಲ್ಕು ಪುಟಗಳ ಪತ್ರದಲ್ಲಿ ನಡ್ಡಾ, ಲಸಿಕೆ ಹಿಂಜರಿಕೆಗೆ ಕಾಂಗ್ರೆಸ್ ನಾಯಕರು ಕೊಡುಗೆ ನೀಡಿದ್ದಾರೆ ಎಂದು ಆರೋಪಿಸಿದರು. ಭಾರತದಲ್ಲಿ ತಯಾರಿಸಿದ ಲಸಿಕೆ ರಾಷ್ಟ್ರೀಯ ಹೆಮ್ಮೆಯ ವಿಷಯವಾಗಿರಬೇಕು. ಬದಲಾಗಿ ಕಾಂಗ್ರೆಸ್ ನಾಯಕರು ಅದನ್ನು ಅಪಹಾಸ್ಯ ಮಾಡಲು ಮತ್ತು ಜನರ ಮನಸ್ಸಿನಲ್ಲಿ ಅನುಮಾನಗಳನ್ನು ಸೃಷ್ಟಿಸಲು ಪ್ರಯತ್ನಿಸಿದರು. ನಿಮ್ಮ ಪಕ್ಷಕ್ಕೆ ಸೇರಿದ ಮುಖ್ಯಮಂತ್ರಿ ಕೂಡ ಇಂತಹ ವರ್ತನೆಗಳಲ್ಲಿ ತೊಡಗಿದ್ದರು. ಲಸಿಕೆ ಹಿಂಜರಿಕೆಯ ಇತ್ತೀಚಿನ ಇತಿಹಾಸವಿಲ್ಲದ ರಾಷ್ಟ್ರದಲ್ಲಿ, ನಿಮ್ಮ ಪಕ್ಷವು ಅದನ್ನು ಸಕ್ರಿಯವಾಗಿ ರಚಿಸಲು ಪ್ರಯತ್ನಿಸುವ ಸಂಶಯಾಸ್ಪದ ದಾಖಲೆಯನ್ನು ಹೊಂದಿದೆ ಎಂದಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಮೋದಿ ಸರ್ಕಾರವು ವ್ಯಾಕ್ಸಿನೇಷನ್ ಬಗ್ಗೆ ತನ್ನ ಜವಾಬ್ದಾರಿಯನ್ನು ತ್ಯಜಿಸುವ ಬಗ್ಗೆ ಮಾತನಾಡುತ್ತದೆ. ಕಾಂಗ್ರೆಸ್ ಪಕ್ಷ ಮತ್ತು ಅದು ಅಧಿಕಾರ ನಡೆಸುವ ರಾಜ್ಯಗಳ ನಡುವೆ ಸಂವಹನ ಅಂತರವಿದೆಯೇ? ಏಪ್ರಿಲ್‌ನಲ್ಲಿಯೇ, ಉನ್ನತ ಮಟ್ಟದ ಕಾಂಗ್ರೆಸ್ ನಾಯಕರು ವ್ಯಾಕ್ಸಿನೇಷನ್ ವಿಕೇಂದ್ರೀಕರಣಕ್ಕೆ ಕರೆ ನೀಡುತ್ತಿದ್ದರು ಎಂದಿದ್ದಾರೆ ನಡ್ಡಾ.

ಲಸಿಕೆ ನೀತಿಯನ್ನು ಸಮರ್ಥಿಸಿಕೊಂಡ ನಡ್ಡಾ ಮೊದಲ ಎರಡು ಹಂತಗಳಲ್ಲಿ ರಾಜ್ಯಗಳಿಗೆ 160 ಮಿಲಿಯನ್ ಲಸಿಕೆಗಳನ್ನು ನೀಡುವ ಮೂಲಕ ಆದ್ಯತೆಯ ಗುಂಪುಗಳಲ್ಲಿ ಈಗಾಗಲೇ ಸಾಕಷ್ಟು ವ್ಯಾಪ್ತಿಯನ್ನು ಖಾತ್ರಿಪಡಿಸಿದೆ ಎಂದು ಹೇಳಿದರು.

ಲಸಿಕೆ ಕಾರ್ಯಕ್ರಮದ ನ್ಯೂನತೆಗಳು, ಲಸಿಕೆಗಳ ಕೊರತೆ ಮತ್ತು 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಅವುಗಳ ಬೆಲೆಗಳ ಬಗ್ಗೆ ರಾಜ್ಯಗಳಿಂದ ದೂರುಗಳು ಬಂದಿವೆ.

ಬಿಜೆಪಿ ಆಡಳಿತದ ರಾಜ್ಯಗಳು ಉಚಿತವಾಗಿ ಲಸಿಕೆಗಳನ್ನು ನೀಡುವ ಮೂಲಕ ಬಡ ಮತ್ತು ದೀನದಲಿತರಿಗೆ ಸಹಾಯ ಮಾಡುವ ಸಂಕಲ್ಪವನ್ನು ಘೋಷಿಸಿವೆ ಎಂದು ನಡ್ಡಾ ಹೇಳಿದರು. ವಿವಿಧ ರಾಜ್ಯಗಳಲ್ಲಿನ ಕಾಂಗ್ರೆಸ್ ಸರ್ಕಾರಗಳು ಬಡವರ ಪರವಾಗಿದೆ , ಉಚಿತವಾಗಿ ಲಸಿಕೆಗಳನ್ನು ನೀಡುವ ನಿರ್ಧಾರವನ್ನೂ ಅವರು ತರಬಹುದೇ? ಎಂದು ಪ್ರಶ್ನಿಸಿದ್ದಾರೆ.

ಸಾಂಕ್ರಾಮಿಕ ಮತ್ತು ವ್ಯಾಕ್ಸಿನೇಷನ್ ನೀತಿಯನ್ನು ಕಾಂಗ್ರೆಸ್ ರಾಜಕೀಯಗೊಳಿಸುತ್ತಿದೆ ಎಂದು ನಡ್ಡಾ ಆರೋಪಿಸಿದರು. ಸಾಂಕ್ರಾಮಿಕ ರೋಗದ ವಿರುದ್ಧದ ಈ ಹೋರಾಟದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಅಗ್ರಗಣ್ಯ ಕಾಂಗ್ರೆಸ್ ನಾಯಕರ ನಡವಳಿಕೆಯನ್ನು ದ್ವಂದ್ವತೆ ಮತ್ತು ಕ್ಷುಲ್ಲಕತೆಗಾಗಿ ನೆನಪಿಸಿಕೊಳ್ಳಲಾಗುವುದು ಅವರು ಹೇಳಿದರು.

ನಿಮ್ಮ ನಾಯಕತ್ವದಲ್ಲಿ, ನಿಮ್ಮ ಪಕ್ಷವು ಲಾಕ್‌ಡೌನ್‌ಗಳನ್ನು ವಿರೋಧಿಸುವ ಯಾವುದೇ ರೀತಿಯ ಸಹಾಯ ಮಾಡುತ್ತಿಲ್ಲ. ನಂತರ ಲಾಕ್ ಡೌನ್ ಮಾಡಿ ಎಂದು ಒತ್ತಾಯಿಸುತ್ತಿದೆ. ಕೊವಿಡ್‌ನ ಎರಡನೇ ಅಲೆಬಗ್ಗೆ ಕೇಂದ್ರದ ಸಲಹೆಗಳನ್ನು ನಿರ್ಲಕ್ಷಿಸಿ ನಂತರ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ಹೇಳುತ್ತಾ ಕೇರಳದಲ್ಲಿ ಬೃಹತ್ ಚುನಾವಣಾ ಕಾರ್ಯಕ್ರಮಗಳನ್ನು ನಡೆಸಿದೆ. ಬೇರೆಡೆ ಚುನಾವಣಾ ಕಾರ್ಯಕ್ರಮಗಳನ್ನು ನಡೆಸಿ ಕೊವಿಡ್ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿದೆ. ಒಂದೆಡೆ ಪ್ರತಿಭಟನೆಯನ್ನು ಬೆಂಬಲಿಸುತ್ತದೆ ಇನ್ನೊಂದೆಡೆ ಕೊವಿಡ್ ಮಾರ್ಗಸೂಚಿಗಳ ಬಗ್ಗೆ ಮಾತನಾಡುತ್ತಿದೆ ಎಂದು ನಡ್ಡಾ ಪತ್ರದಲ್ಲಿ ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಾದ ಪಂಜಾಬ್‌ನಲ್ಲಿ ಕೊವಿಡ್ -19 ಪ್ರಕರಣಗಳ ಹೆಚ್ಚಳವನ್ನೂ ನಡ್ಡಾ ಉಲ್ಲೇಖಿಸಿದ್ದಾರೆ.

ಸೆಂಟ್ರಲ್ ವಿಸ್ತಾಗೆ ಕಾಂಗ್ರೆಸ್ ವಿರೋಧದ ಬಗ್ಗೆ ಪ್ರತಿಕ್ರಿಯಿಸಿದ ನಡ್ಡಾ, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲಯನ್ಸ್ ಅಧಿಕಾರದಲ್ಲಿದ್ದಾಗ ಹೊಸ ಸಂಸತ್ತಿನ ಅಗತ್ಯವನ್ನು ಮುಂದಿಡಲಾಗಿದೆ. ಆಗಿನ ಸ್ಪೀಕರ್ ಮೀರಾ ಕುಮಾರ್ ಅವರು ಹೊಸ ಸಂಸತ್ತಿನ ಕಟ್ಟಡದ ಅಗತ್ಯವನ್ನು ಒತ್ತಿಹೇಳಿದ್ದಾರೆ ಎಂದು ಅವರು ಹೇಳಿದರು. ಕಾಂಗ್ರೆಸ್ ನೇತೃತ್ವದ ಛತ್ತೀಸಗಡ ಸರ್ಕಾರವು ಹೊಸ ವಿಧಾನಸಭೆ ಸಂಕೀರ್ಣವನ್ನು ನಿರ್ಮಿಸುವ ಯೋಜನೆಗಳೊಂದಿಗೆ ಮುಂದುವರಿಯುತ್ತಿದೆ ಎಂದು ನಡ್ಡಾ ಹೇಳಿದರು. ಈ ಪತ್ರಕ್ಕೆ ಕಾಂಗ್ರೆಸ್ ನಿಂದ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ  ಓದಿ: ಕೊರೊನಾ ಸಂದರ್ಭದಲ್ಲಿ ಸೆಂಟ್ರಲ್ ವಿಸ್ತಾ ಯೋಜನೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕಾರಿಣಿ ನಿರ್ಣಯ

(Bharatiya Janata Party president JP Nadda wrote a letter Sonia Gandhi asks her to stop misleading people over Coronavirus)

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!