AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru–Vijayawada: ಬೆಂಗಳೂರು-ವಿಜಯವಾಡ ಗ್ರೀನ್‌ಫೀಲ್ಡ್ ಹೈವೇಗೆ ಗಡ್ಕರಿ ಗ್ರೀನ್ ಸಿಗ್ನಲ್

ಬೆಂಗಳೂರು-ವಿಜಯವಾಡ ಗ್ರೀನ್‌ಫೀಲ್ಡ್ ಹೆದ್ದಾರಿ ನಿರ್ಮಿಸಲು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಒಪ್ಪಿಗೆ ನೀಡಿದ್ದಾರೆ.

Bengaluru–Vijayawada: ಬೆಂಗಳೂರು-ವಿಜಯವಾಡ ಗ್ರೀನ್‌ಫೀಲ್ಡ್ ಹೈವೇಗೆ ಗಡ್ಕರಿ ಗ್ರೀನ್ ಸಿಗ್ನಲ್
ನಿತಿನ್​ ಗಡ್ಕರಿ, ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ
ರಮೇಶ್ ಬಿ. ಜವಳಗೇರಾ
|

Updated on: Feb 26, 2023 | 12:49 PM

Share

ಬೆಂಗಳೂರು: ಬೆಂಗಳೂರು-ವಿಜಯವಾಡ ಆರ್ಥಿಕ ಕಾರಿಡಾರ್‌ನಲ್ಲಿ ಗ್ರೀನ್‌ಫೀಲ್ಡ್ ಹೆದ್ದಾರಿ ನಿರ್ಮಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಆಂಧ್ರ ಪ್ರದೇಶದ ಚಂದ್ರಶೇಖರಪುರಂ ಮತ್ತು ಪೋಲಾವರಂ ನಡುವೆ 32 ಕಿಮೀ ಉದ್ದದ 6 ಲೇನ್ ಪ್ರವೇಶ ನಿಯಂತ್ರಿತ ಹೆದ್ದಾರಿ ಬರಲಿದೆ. ಇದಕ್ಕೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಒಪ್ಪಿಗೆ ನೀಡಿದ್ದಾರೆ.

ಆಂಧ್ರಪ್ರದೇಶದ ಚಂದ್ರಶೇಖರಪುರಂ ಹಾಗೂ ಪೋಲಾವರಂ ನಡುವೆ ನಿರ್ಮಾಣಗೊಳ್ಳಲಿರುವ 32 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ವಿಜಯವಾಡ ಎಕಾನಮಿಕ್‌ ಕಾರಿಡಾರ್‌ನ ನಿರ್ಮಾಣದ ಮಹತ್ತರ ಘಟ್ಟ ವಾಗಿದ್ದು, ಭಾರತಮಾಲಾ ಪ್ರಯೋಜನ ಯೋಜನೆ ಅನ್ವಯ 1,292.65 ಕೋ. ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಭಾರತಮಾಲಾ ಪರಿಯೋಜನಾ ಯೋಜನೆಯಡಿ ಬರುವ ಈ ಯೋಜನೆಗೆ ಅನುಮೋದನೆ ನೀಡಿದ್ದಾರೆ. 1292.65 ಕೋಟಿ ರೂಪಾಯಿ ಬಜೆಟ್‌ನಲ್ಲಿ ಹೈಬ್ರಿಡ್ ಆನ್ಯೂಟಿ ಮಾದರಿಯಲ್ಲಿ (ಎಚ್‌ಎಎಂ) ಕಾರಿಡಾರ್ ನಿರ್ಮಾಣವಾಗಲಿದೆ ಎಂದು ಸಚಿವಾಲಯ ತಿಳಿಸಿದೆ.

ಈ ಎಕಾನಮಿಕ್‌ ಕಾರಿಡಾರನ್ನು ಭಾರತಮಾಲಾ ಪ್ರಯೋಜನ ಯೋಜನೆ ಅನ್ವಯ 19,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಯೋಜಿಸಲಾಗಿದ್ದು, ಇನ್ನೂ 14 ಹಂತಗಳ ಮೂಲಕ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ. 2026ರ ವೇಳೆಗೆ ಯೋಜನೆ ಪೂರ್ಣಗೊಳ್ಳುವುದೆಂದು ನಿರೀಕ್ಷಿಸಲಾಗಿದೆ.

ಮೋದಿ ಸರಕಾರದ ಮಹತ್ತರ ಯೋಜನೆಗಳಲ್ಲಿ ಒಂದಾಗಿರುವ ಕಾರಿಡಾರ್‌, ಒಟ್ಟಾರೆ 342.5 ಕಿ.ಮೀ. ವ್ಯಾಪ್ತಿಯನ್ನು ಹೊಂದಿದೆ. ಇಷ್ಟೂ ದೂರ ಪೂರ್ಣಗೊಂಡರೆ ಅನಂತಪುರ, ಕಡಪ, ಗುಂಟೂರು ಸಹಿತ ಆಂಧ್ರಪ್ರದೇಶದ ಹಲವು ಕೈಗಾರಿಕ ಕೇಂದ್ರಗಳನ್ನು ಬೆಂಗಳೂರಿನಿಂದ ನೇರವಾಗಿ ತಲುಪಲು ಯೋಜನೆ ಅನುವು ಮಾಡಿಕೊಡುವ ಮೂಲಕ ಆರ್ಥಿಕ ವ್ಯವಹಾರಗಳಿಗೆ ಉತ್ತೇಜನ ನೀಡಲಿದೆ. ಅಲ್ಲದೇ ಬೆಂಗಳೂರು -ಕಡಪ-ವಿಜಯವಾಡಗಳ ನಡುವಿನ ಸಾರಿಗೆ ಸಮಯವನ್ನೂ ಕಡಿಮೆಗೊಳಿಸಲಿದೆ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!