AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru–Vijayawada: ಬೆಂಗಳೂರು-ವಿಜಯವಾಡ ಗ್ರೀನ್‌ಫೀಲ್ಡ್ ಹೈವೇಗೆ ಗಡ್ಕರಿ ಗ್ರೀನ್ ಸಿಗ್ನಲ್

ಬೆಂಗಳೂರು-ವಿಜಯವಾಡ ಗ್ರೀನ್‌ಫೀಲ್ಡ್ ಹೆದ್ದಾರಿ ನಿರ್ಮಿಸಲು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಒಪ್ಪಿಗೆ ನೀಡಿದ್ದಾರೆ.

Bengaluru–Vijayawada: ಬೆಂಗಳೂರು-ವಿಜಯವಾಡ ಗ್ರೀನ್‌ಫೀಲ್ಡ್ ಹೈವೇಗೆ ಗಡ್ಕರಿ ಗ್ರೀನ್ ಸಿಗ್ನಲ್
ನಿತಿನ್​ ಗಡ್ಕರಿ, ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ
ರಮೇಶ್ ಬಿ. ಜವಳಗೇರಾ
|

Updated on: Feb 26, 2023 | 12:49 PM

Share

ಬೆಂಗಳೂರು: ಬೆಂಗಳೂರು-ವಿಜಯವಾಡ ಆರ್ಥಿಕ ಕಾರಿಡಾರ್‌ನಲ್ಲಿ ಗ್ರೀನ್‌ಫೀಲ್ಡ್ ಹೆದ್ದಾರಿ ನಿರ್ಮಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಆಂಧ್ರ ಪ್ರದೇಶದ ಚಂದ್ರಶೇಖರಪುರಂ ಮತ್ತು ಪೋಲಾವರಂ ನಡುವೆ 32 ಕಿಮೀ ಉದ್ದದ 6 ಲೇನ್ ಪ್ರವೇಶ ನಿಯಂತ್ರಿತ ಹೆದ್ದಾರಿ ಬರಲಿದೆ. ಇದಕ್ಕೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಒಪ್ಪಿಗೆ ನೀಡಿದ್ದಾರೆ.

ಆಂಧ್ರಪ್ರದೇಶದ ಚಂದ್ರಶೇಖರಪುರಂ ಹಾಗೂ ಪೋಲಾವರಂ ನಡುವೆ ನಿರ್ಮಾಣಗೊಳ್ಳಲಿರುವ 32 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ವಿಜಯವಾಡ ಎಕಾನಮಿಕ್‌ ಕಾರಿಡಾರ್‌ನ ನಿರ್ಮಾಣದ ಮಹತ್ತರ ಘಟ್ಟ ವಾಗಿದ್ದು, ಭಾರತಮಾಲಾ ಪ್ರಯೋಜನ ಯೋಜನೆ ಅನ್ವಯ 1,292.65 ಕೋ. ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಭಾರತಮಾಲಾ ಪರಿಯೋಜನಾ ಯೋಜನೆಯಡಿ ಬರುವ ಈ ಯೋಜನೆಗೆ ಅನುಮೋದನೆ ನೀಡಿದ್ದಾರೆ. 1292.65 ಕೋಟಿ ರೂಪಾಯಿ ಬಜೆಟ್‌ನಲ್ಲಿ ಹೈಬ್ರಿಡ್ ಆನ್ಯೂಟಿ ಮಾದರಿಯಲ್ಲಿ (ಎಚ್‌ಎಎಂ) ಕಾರಿಡಾರ್ ನಿರ್ಮಾಣವಾಗಲಿದೆ ಎಂದು ಸಚಿವಾಲಯ ತಿಳಿಸಿದೆ.

ಈ ಎಕಾನಮಿಕ್‌ ಕಾರಿಡಾರನ್ನು ಭಾರತಮಾಲಾ ಪ್ರಯೋಜನ ಯೋಜನೆ ಅನ್ವಯ 19,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಯೋಜಿಸಲಾಗಿದ್ದು, ಇನ್ನೂ 14 ಹಂತಗಳ ಮೂಲಕ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ. 2026ರ ವೇಳೆಗೆ ಯೋಜನೆ ಪೂರ್ಣಗೊಳ್ಳುವುದೆಂದು ನಿರೀಕ್ಷಿಸಲಾಗಿದೆ.

ಮೋದಿ ಸರಕಾರದ ಮಹತ್ತರ ಯೋಜನೆಗಳಲ್ಲಿ ಒಂದಾಗಿರುವ ಕಾರಿಡಾರ್‌, ಒಟ್ಟಾರೆ 342.5 ಕಿ.ಮೀ. ವ್ಯಾಪ್ತಿಯನ್ನು ಹೊಂದಿದೆ. ಇಷ್ಟೂ ದೂರ ಪೂರ್ಣಗೊಂಡರೆ ಅನಂತಪುರ, ಕಡಪ, ಗುಂಟೂರು ಸಹಿತ ಆಂಧ್ರಪ್ರದೇಶದ ಹಲವು ಕೈಗಾರಿಕ ಕೇಂದ್ರಗಳನ್ನು ಬೆಂಗಳೂರಿನಿಂದ ನೇರವಾಗಿ ತಲುಪಲು ಯೋಜನೆ ಅನುವು ಮಾಡಿಕೊಡುವ ಮೂಲಕ ಆರ್ಥಿಕ ವ್ಯವಹಾರಗಳಿಗೆ ಉತ್ತೇಜನ ನೀಡಲಿದೆ. ಅಲ್ಲದೇ ಬೆಂಗಳೂರು -ಕಡಪ-ವಿಜಯವಾಡಗಳ ನಡುವಿನ ಸಾರಿಗೆ ಸಮಯವನ್ನೂ ಕಡಿಮೆಗೊಳಿಸಲಿದೆ.

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!