AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru–Vijayawada: ಬೆಂಗಳೂರು-ವಿಜಯವಾಡ ಗ್ರೀನ್‌ಫೀಲ್ಡ್ ಹೈವೇಗೆ ಗಡ್ಕರಿ ಗ್ರೀನ್ ಸಿಗ್ನಲ್

ಬೆಂಗಳೂರು-ವಿಜಯವಾಡ ಗ್ರೀನ್‌ಫೀಲ್ಡ್ ಹೆದ್ದಾರಿ ನಿರ್ಮಿಸಲು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಒಪ್ಪಿಗೆ ನೀಡಿದ್ದಾರೆ.

Bengaluru–Vijayawada: ಬೆಂಗಳೂರು-ವಿಜಯವಾಡ ಗ್ರೀನ್‌ಫೀಲ್ಡ್ ಹೈವೇಗೆ ಗಡ್ಕರಿ ಗ್ರೀನ್ ಸಿಗ್ನಲ್
ನಿತಿನ್​ ಗಡ್ಕರಿ, ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ
Follow us
ರಮೇಶ್ ಬಿ. ಜವಳಗೇರಾ
|

Updated on: Feb 26, 2023 | 12:49 PM

ಬೆಂಗಳೂರು: ಬೆಂಗಳೂರು-ವಿಜಯವಾಡ ಆರ್ಥಿಕ ಕಾರಿಡಾರ್‌ನಲ್ಲಿ ಗ್ರೀನ್‌ಫೀಲ್ಡ್ ಹೆದ್ದಾರಿ ನಿರ್ಮಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಆಂಧ್ರ ಪ್ರದೇಶದ ಚಂದ್ರಶೇಖರಪುರಂ ಮತ್ತು ಪೋಲಾವರಂ ನಡುವೆ 32 ಕಿಮೀ ಉದ್ದದ 6 ಲೇನ್ ಪ್ರವೇಶ ನಿಯಂತ್ರಿತ ಹೆದ್ದಾರಿ ಬರಲಿದೆ. ಇದಕ್ಕೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಒಪ್ಪಿಗೆ ನೀಡಿದ್ದಾರೆ.

ಆಂಧ್ರಪ್ರದೇಶದ ಚಂದ್ರಶೇಖರಪುರಂ ಹಾಗೂ ಪೋಲಾವರಂ ನಡುವೆ ನಿರ್ಮಾಣಗೊಳ್ಳಲಿರುವ 32 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ವಿಜಯವಾಡ ಎಕಾನಮಿಕ್‌ ಕಾರಿಡಾರ್‌ನ ನಿರ್ಮಾಣದ ಮಹತ್ತರ ಘಟ್ಟ ವಾಗಿದ್ದು, ಭಾರತಮಾಲಾ ಪ್ರಯೋಜನ ಯೋಜನೆ ಅನ್ವಯ 1,292.65 ಕೋ. ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಭಾರತಮಾಲಾ ಪರಿಯೋಜನಾ ಯೋಜನೆಯಡಿ ಬರುವ ಈ ಯೋಜನೆಗೆ ಅನುಮೋದನೆ ನೀಡಿದ್ದಾರೆ. 1292.65 ಕೋಟಿ ರೂಪಾಯಿ ಬಜೆಟ್‌ನಲ್ಲಿ ಹೈಬ್ರಿಡ್ ಆನ್ಯೂಟಿ ಮಾದರಿಯಲ್ಲಿ (ಎಚ್‌ಎಎಂ) ಕಾರಿಡಾರ್ ನಿರ್ಮಾಣವಾಗಲಿದೆ ಎಂದು ಸಚಿವಾಲಯ ತಿಳಿಸಿದೆ.

ಈ ಎಕಾನಮಿಕ್‌ ಕಾರಿಡಾರನ್ನು ಭಾರತಮಾಲಾ ಪ್ರಯೋಜನ ಯೋಜನೆ ಅನ್ವಯ 19,200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಯೋಜಿಸಲಾಗಿದ್ದು, ಇನ್ನೂ 14 ಹಂತಗಳ ಮೂಲಕ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ. 2026ರ ವೇಳೆಗೆ ಯೋಜನೆ ಪೂರ್ಣಗೊಳ್ಳುವುದೆಂದು ನಿರೀಕ್ಷಿಸಲಾಗಿದೆ.

ಮೋದಿ ಸರಕಾರದ ಮಹತ್ತರ ಯೋಜನೆಗಳಲ್ಲಿ ಒಂದಾಗಿರುವ ಕಾರಿಡಾರ್‌, ಒಟ್ಟಾರೆ 342.5 ಕಿ.ಮೀ. ವ್ಯಾಪ್ತಿಯನ್ನು ಹೊಂದಿದೆ. ಇಷ್ಟೂ ದೂರ ಪೂರ್ಣಗೊಂಡರೆ ಅನಂತಪುರ, ಕಡಪ, ಗುಂಟೂರು ಸಹಿತ ಆಂಧ್ರಪ್ರದೇಶದ ಹಲವು ಕೈಗಾರಿಕ ಕೇಂದ್ರಗಳನ್ನು ಬೆಂಗಳೂರಿನಿಂದ ನೇರವಾಗಿ ತಲುಪಲು ಯೋಜನೆ ಅನುವು ಮಾಡಿಕೊಡುವ ಮೂಲಕ ಆರ್ಥಿಕ ವ್ಯವಹಾರಗಳಿಗೆ ಉತ್ತೇಜನ ನೀಡಲಿದೆ. ಅಲ್ಲದೇ ಬೆಂಗಳೂರು -ಕಡಪ-ವಿಜಯವಾಡಗಳ ನಡುವಿನ ಸಾರಿಗೆ ಸಮಯವನ್ನೂ ಕಡಿಮೆಗೊಳಿಸಲಿದೆ.

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್