AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhima Koregaon Case: ಭೀಮಾ ಕೊರೆಗಾಂವ್ ಪ್ರಕರಣ; ಆರೋಪಿ ವರವರ ರಾವ್​ಗೆ ಜಾಮೀನು ವಿಸ್ತರಣೆ

ವೈದ್ಯಕೀಯ ಕಾರಣಗಳ ಆಧಾರದ ಮೇಲೆ ಭೀಮಾ ಕೊರೆಗಾಂವ್ ಪ್ರಕರಣದ ಆರೋಪಿ ವರವರ ರಾವ್​ಗೆ ಜಾಮೀನು ನೀಡಲಾಗಿತ್ತು. ಮುಂದಿನ ಆದೇಶದವರೆಗೆ ಮಧ್ಯಂತರ ಜಾಮೀನು ಮುಂದುವರಿಕೆ ಮಾಡಲು ಸುಪ್ರೀಂಕೋರ್ಟ್​​ ಆದೇಶ ನೀಡಿದೆ.

Bhima Koregaon Case: ಭೀಮಾ ಕೊರೆಗಾಂವ್ ಪ್ರಕರಣ; ಆರೋಪಿ ವರವರ ರಾವ್​ಗೆ ಜಾಮೀನು ವಿಸ್ತರಣೆ
ಭೀಮಾ ಕೊರೆಗಾಂವ್ ಪ್ರಕರಣದ ಅರೋಪಿ ವರವರ ರಾವ್
TV9 Web
| Edited By: |

Updated on:Jul 12, 2022 | 12:12 PM

Share

ಮುಂಬೈ: ಭೀಮಾ ಕೋರೆಗಾಂವ್- ಎಲ್ಗಾರ್ ಪರಿಷತ್ ಪ್ರಕರಣಕ್ಕೆ (Bhima Koregaon case) ಸಂಬಂಧಿಸಿದಂತೆ ಪ್ರಮುಖ ಆರೋಪಿ ವರವರ ರಾವ್​ಗೆ (Varavara Rao) ಜಾಮೀನು ಮುಂದುವರಿಸಲಾಗಿದೆ. ಮುಂದಿನ ಆದೇಶದವರೆಗೆ ಮಧ್ಯಂತರ ಜಾಮೀನು ಮುಂದುವರಿಕೆ ಮಾಡಲು ಸುಪ್ರೀಂಕೋರ್ಟ್​​ (Supreme Court) ಆದೇಶ ನೀಡಿದೆ. ವೈದ್ಯಕೀಯ ಕಾರಣಗಳ ಆಧಾರದ ಮೇಲೆ ವರವರ ರಾವ್​ಗೆ ಜಾಮೀನು ನೀಡಲಾಗಿತ್ತು.

2018ರ ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಯಾಗಿರುವ ಡಾ. ಪಿ. ವರವರ ರಾವ್ ವೈದ್ಯಕೀಯ ಕಾರಣಗಳಿಗಾಗಿ ಶಾಶ್ವತ ಜಾಮೀನು ಕೋರಿದ್ದರು. ಕವಿ ಮತ್ತು ಸಾಮಾಜಿಕ ಕಾರ್ಯಕರ್ತರಾಗಿರುವ ವರವರ ರಾವ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಾಲಯವು ಜುಲೈ 19ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.

ಈ ವಿಚಾರದಲ್ಲಿ ಶಾಶ್ವತ ವೈದ್ಯಕೀಯ ಜಾಮೀನು ಕೋರಿ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್​ನ ಏಪ್ರಿಲ್ 13ರ ಆದೇಶವನ್ನು ವರವರ ರಾವ್ ಪ್ರಶ್ನಿಸಿದ್ದರು. ಆದರೆ, ನ್ಯಾಯಾಲಯವು ವರವರ ರಾವ್ ಅವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು, ತಲೋಜಾ ಜೈಲು ಅಧಿಕಾರಿಗಳ ಮುಂದೆ ಶರಣಾಗಲು ಮೂರು ತಿಂಗಳ ಕಾಲಾವಕಾಶವನ್ನು ನೀಡಿತ್ತು.

ಇದನ್ನೂ ಓದಿ: Bhima Koregaon Case ಭೀಮಾ ಕೊರೆಗಾಂವ್- ಎಲ್ಗಾರ್ ಪರಿಷದ್ ಪ್ರಕರಣ: ವರವರ ರಾವ್​​ ಜಾಮೀನು ಅರ್ಜಿ ವಿಚಾರಣೆ ನಾಳೆ

2018ರ ಆಗಸ್ಟ್ 28ರಂದು ವರವರ ರಾವ್ ಅವರನ್ನು ಹೈದರಾಬಾದ್​ನಲ್ಲಿರುವ ಅವರ ನಿವಾಸದಿಂದ ಬಂಧಿಸಲಾಗಿತ್ತು. ಭೀಮಾ ಕೊರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸರು 2018ರ ಜನವರಿ 8ರಂದು ಐಪಿಸಿಯ ವಿವಿಧ ಸೆಕ್ಷನ್ ಮತ್ತು ಯುಎಪಿಎ ಅಡಿ ಪ್ರಕರಣ ದಾಖಲಿಸಿದ್ದರು. ಸುಪ್ರೀಕೋರ್ಟ್ ಆದೇಶದನ್ವಯ ವರವರ ರಾವ್ ಅವರನ್ನು ಮೊದಲಿಗೆ ಗೃಹ ಬಂಧನದಲ್ಲಿರಿಸಲಾಗಿತ್ತು. 2018ರ ನವೆಂಬರ್ 17ರಂದು ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ನಂತರ ತಲೋಜಾ ಜೈಲಿಗೆ ಹಾಕಲಾಗಿತ್ತು. 2021ರ ಫೆಬ್ರವರಿ 22ರಂದು ವೈದ್ಯಕೀಯ ಆಧಾರದ ಮೇಲೆ ಅವರಿಗೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.

Published On - 12:00 pm, Tue, 12 July 22

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ