AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhima Koregaon Case: ಭೀಮಾ ಕೊರೆಗಾಂವ್ ಪ್ರಕರಣ; ಆರೋಪಿ ವರವರ ರಾವ್​ಗೆ ಜಾಮೀನು ವಿಸ್ತರಣೆ

ವೈದ್ಯಕೀಯ ಕಾರಣಗಳ ಆಧಾರದ ಮೇಲೆ ಭೀಮಾ ಕೊರೆಗಾಂವ್ ಪ್ರಕರಣದ ಆರೋಪಿ ವರವರ ರಾವ್​ಗೆ ಜಾಮೀನು ನೀಡಲಾಗಿತ್ತು. ಮುಂದಿನ ಆದೇಶದವರೆಗೆ ಮಧ್ಯಂತರ ಜಾಮೀನು ಮುಂದುವರಿಕೆ ಮಾಡಲು ಸುಪ್ರೀಂಕೋರ್ಟ್​​ ಆದೇಶ ನೀಡಿದೆ.

Bhima Koregaon Case: ಭೀಮಾ ಕೊರೆಗಾಂವ್ ಪ್ರಕರಣ; ಆರೋಪಿ ವರವರ ರಾವ್​ಗೆ ಜಾಮೀನು ವಿಸ್ತರಣೆ
ಭೀಮಾ ಕೊರೆಗಾಂವ್ ಪ್ರಕರಣದ ಅರೋಪಿ ವರವರ ರಾವ್
TV9 Web
| Edited By: |

Updated on:Jul 12, 2022 | 12:12 PM

Share

ಮುಂಬೈ: ಭೀಮಾ ಕೋರೆಗಾಂವ್- ಎಲ್ಗಾರ್ ಪರಿಷತ್ ಪ್ರಕರಣಕ್ಕೆ (Bhima Koregaon case) ಸಂಬಂಧಿಸಿದಂತೆ ಪ್ರಮುಖ ಆರೋಪಿ ವರವರ ರಾವ್​ಗೆ (Varavara Rao) ಜಾಮೀನು ಮುಂದುವರಿಸಲಾಗಿದೆ. ಮುಂದಿನ ಆದೇಶದವರೆಗೆ ಮಧ್ಯಂತರ ಜಾಮೀನು ಮುಂದುವರಿಕೆ ಮಾಡಲು ಸುಪ್ರೀಂಕೋರ್ಟ್​​ (Supreme Court) ಆದೇಶ ನೀಡಿದೆ. ವೈದ್ಯಕೀಯ ಕಾರಣಗಳ ಆಧಾರದ ಮೇಲೆ ವರವರ ರಾವ್​ಗೆ ಜಾಮೀನು ನೀಡಲಾಗಿತ್ತು.

2018ರ ಭೀಮಾ ಕೊರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಯಾಗಿರುವ ಡಾ. ಪಿ. ವರವರ ರಾವ್ ವೈದ್ಯಕೀಯ ಕಾರಣಗಳಿಗಾಗಿ ಶಾಶ್ವತ ಜಾಮೀನು ಕೋರಿದ್ದರು. ಕವಿ ಮತ್ತು ಸಾಮಾಜಿಕ ಕಾರ್ಯಕರ್ತರಾಗಿರುವ ವರವರ ರಾವ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಾಲಯವು ಜುಲೈ 19ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.

ಈ ವಿಚಾರದಲ್ಲಿ ಶಾಶ್ವತ ವೈದ್ಯಕೀಯ ಜಾಮೀನು ಕೋರಿ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ಬಾಂಬೆ ಹೈಕೋರ್ಟ್​ನ ಏಪ್ರಿಲ್ 13ರ ಆದೇಶವನ್ನು ವರವರ ರಾವ್ ಪ್ರಶ್ನಿಸಿದ್ದರು. ಆದರೆ, ನ್ಯಾಯಾಲಯವು ವರವರ ರಾವ್ ಅವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಲು, ತಲೋಜಾ ಜೈಲು ಅಧಿಕಾರಿಗಳ ಮುಂದೆ ಶರಣಾಗಲು ಮೂರು ತಿಂಗಳ ಕಾಲಾವಕಾಶವನ್ನು ನೀಡಿತ್ತು.

ಇದನ್ನೂ ಓದಿ: Bhima Koregaon Case ಭೀಮಾ ಕೊರೆಗಾಂವ್- ಎಲ್ಗಾರ್ ಪರಿಷದ್ ಪ್ರಕರಣ: ವರವರ ರಾವ್​​ ಜಾಮೀನು ಅರ್ಜಿ ವಿಚಾರಣೆ ನಾಳೆ

2018ರ ಆಗಸ್ಟ್ 28ರಂದು ವರವರ ರಾವ್ ಅವರನ್ನು ಹೈದರಾಬಾದ್​ನಲ್ಲಿರುವ ಅವರ ನಿವಾಸದಿಂದ ಬಂಧಿಸಲಾಗಿತ್ತು. ಭೀಮಾ ಕೊರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸರು 2018ರ ಜನವರಿ 8ರಂದು ಐಪಿಸಿಯ ವಿವಿಧ ಸೆಕ್ಷನ್ ಮತ್ತು ಯುಎಪಿಎ ಅಡಿ ಪ್ರಕರಣ ದಾಖಲಿಸಿದ್ದರು. ಸುಪ್ರೀಕೋರ್ಟ್ ಆದೇಶದನ್ವಯ ವರವರ ರಾವ್ ಅವರನ್ನು ಮೊದಲಿಗೆ ಗೃಹ ಬಂಧನದಲ್ಲಿರಿಸಲಾಗಿತ್ತು. 2018ರ ನವೆಂಬರ್ 17ರಂದು ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ನಂತರ ತಲೋಜಾ ಜೈಲಿಗೆ ಹಾಕಲಾಗಿತ್ತು. 2021ರ ಫೆಬ್ರವರಿ 22ರಂದು ವೈದ್ಯಕೀಯ ಆಧಾರದ ಮೇಲೆ ಅವರಿಗೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.

Published On - 12:00 pm, Tue, 12 July 22

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ