AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾ ಕೋರೆಗಾಂವ್ ಎಲ್ಗಾರ್ ಪರಿಷತ್ ಪ್ರಕರಣ: ವೆರ್ನಾನ್ ಗೊನ್ಸಾಲ್ವಿಸ್, ಅರುಣ್ ಫೆರೇರಾಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್

ಬಾಂಬೆ ಹೈಕೋರ್ಟ್ ಈ ಹಿಂದೆ ಡಿಸೆಂಬರ್ 2021 ರಲ್ಲಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಸುಪ್ರೀಂ ಮೆಟ್ಟಿಲೇರಿದ್ದರು. ಈ ಕಾರ್ಯಕರ್ತರು ಐದು ವರ್ಷಗಳ ಕಾಲ ಬಂಧನದಲ್ಲಿದ್ದರು ಎಂಬ ಅಂಶವನ್ನು ಸುಪ್ರೀಂಕೋರ್ಟ್ ಜಾಮೀನು ನೀಡುವ ವೇಳೆ ಉಲ್ಲೇಖಿಸಿದೆ.

ಭೀಮಾ ಕೋರೆಗಾಂವ್ ಎಲ್ಗಾರ್ ಪರಿಷತ್ ಪ್ರಕರಣ: ವೆರ್ನಾನ್ ಗೊನ್ಸಾಲ್ವಿಸ್, ಅರುಣ್ ಫೆರೇರಾಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Follow us
ರಶ್ಮಿ ಕಲ್ಲಕಟ್ಟ
|

Updated on: Jul 28, 2023 | 3:14 PM

ದೆಹಲಿ ಜುಲೈ 28: ಭೀಮಾ ಕೋರೆಗಾಂವ್ ಎಲ್ಗಾರ್ ಪರಿಷತ್ ಪ್ರಕರಣದಲ್ಲಿ (Bhima Koregaon Elgar Parishad case) ಸಾಮಾಜಿಕ ಕಾರ್ಯಕರ್ತ, ಎಲ್ಗಾರ್ ಪರಿಷತ್ ಸದಸ್ಯರಾದ ವೆರ್ನಾನ್ ಗೊನ್ಸಾಲ್ವಿಸ್ (Vernon Gonsalves) ಮತ್ತು ಅರುಣ್ ಫೆರೇರಾ (Arun Ferreira) ಅವರಿಗೆ ಸುಪ್ರೀಂಕೋರ್ಟ್ (Supreme Court) ಶುಕ್ರುವಾರ ಜಾಮೀನು ನೀಡಿದೆ. 2018ರ ಆಗಸ್ಟ್‌ನಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದ ಮೇಲೆ ಕಟ್ಟುನಿಟ್ಟಾದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (UAPA) ಅಡಿಯಲ್ಲಿ ಈ ಕಾರ್ಯಕರ್ತರನ್ನು ಬಂಧಿಸಲಾಗಿತ್ತು.

ಬಾಂಬೆ ಹೈಕೋರ್ಟ್ ಈ ಹಿಂದೆ ಡಿಸೆಂಬರ್ 2021 ರಲ್ಲಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಸುಪ್ರೀಂ ಮೆಟ್ಟಿಲೇರಿದ್ದರು. ಈ ಕಾರ್ಯಕರ್ತರು ಐದು ವರ್ಷಗಳ ಕಾಲ ಬಂಧನದಲ್ಲಿದ್ದರು ಎಂಬ ಅಂಶವನ್ನು ಸುಪ್ರೀಂಕೋರ್ಟ್ ಜಾಮೀನು ನೀಡುವ ವೇಳೆ ಉಲ್ಲೇಖಿಸಿದೆ.

ಆದಾಗ್ಯೂ, ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಗೊನ್ಸಾಲ್ವೆಸ್ ಮತ್ತು ಫೆರೇರಾ ಮಹಾರಾಷ್ಟ್ರವನ್ನು ಬಿಟ್ಟು ಹೋಗಬಾರದು. ಅದೇ ವೇಳೆ ತಮ್ಮ ಪಾಸ್‌ಪೋರ್ಟ್‌ಗಳನ್ನು ಪೊಲೀಸರಿಗೆ ಒಪ್ಪಿಸಬೇಕು ಎಂದು ಹೇಳಿದ್ದಾರೆ.

ಇಬ್ಬರು ಕಾರ್ಯಕರ್ತರು ತಲಾ ಒಂದು ಮೊಬೈಲ್ ಬಳಸಬೇಕು.ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಅವರ ವಿಳಾಸಗಳನ್ನು ತಿಳಿಸುವಂತೆ ಅದು ನಿರ್ದೇಶಿಸಿದೆ.  ಆಗಸ್ಟ್ 2022 ರಲ್ಲಿ, ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ, ಭೀಮಾ ಕೋರೆಗಾಂವ್ ಎಲ್ಗಾರ್ ಪರಿಷತ್ ಪ್ರಕರಣದ ಇನ್ನೊಬ್ಬ ಆರೋಪಿ ಡಾ.ಪಿ.ವರವರ ರಾವ್ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿತ್ತು.

ಏನಿದು ಭೀಮಾ ಕೋರೆಗಾಂವ್ ಎಲ್ಗಾರ್ ಪರಿಷತ್ ಪ್ರಕರಣ?

ಈ ಪ್ರಕರಣವು 2017 ರ ಡಿಸೆಂಬರ್ 31 ರಂದು ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಸಮಾವೇಶಕ್ಕೆ ಸಂಬಂಧಿಸಿದೆ. ಪುಣೆ ಪೊಲೀಸರ ಪ್ರಕಾರ ಮಾವೋವಾದಿಗಳು ಇದಕ್ಕೆ ಹಣ ನೀಡಿದ್ದಾರೆ. ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಸೇರಿದಂತೆ 14 ಮಂದಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಆರೋಪಿಸಿದೆ.

ಈ ಪ್ರಕರಣವು ಡಿಸೆಂಬರ್ 31, 2017 ರಂದು ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಆಪಾದಿತ ಪ್ರಚೋದಕ ಭಾಷಣಗಳಿಗೆ ಸಂಬಂಧಿಸಿದ್ದಾಗಿದೆ. ಮರುದಿನ ಪಶ್ಚಿಮ ಮಹಾರಾಷ್ಟ್ರ ನಗರದ ಹೊರವಲಯದಲ್ಲಿರುವ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ನಡೆದ ಹಿಂಸಾಚಾರವನ್ನು ಪ್ರಚೋದಿಸಿದ್ದು ಇದೇ ಭಾಷಣ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Maharashtra: ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ, ಕಾಪಾಡಿದ ಮತ್ತೊಂದು ಶ್ವಾನ

ಎಲ್ಗಾರ್ ಪರಿಷತ್ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಮುಂಬೈ, ನಾಗ್ಪುರ ಮತ್ತು ದೆಹಲಿಯಿಂದ ಜೂನ್ 2018 ರಲ್ಲಿ ನಿಕಟ ಮಾವೋವಾದಿ ಸಂಪರ್ಕವನ್ನು ಹೊಂದಿರುವ ಐದು ಜನರನ್ನು ಬಂಧಿಸಲಾಯಿತು. ಮಾವೋವಾದಿ ನಂಟು ಹೊಂದಿರುವವರು ಈ ಸಮಾವೇಶವನ್ನು ಆಯೋಜಿಸಿದ್ದರು ಎಂದು ಪುಣೆ ಪೊಲೀಸರು ಹೇಳಿದ್ದು, ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಹಿಸಿಕೊಂಡಿತ್ತು.

ಜೆಸ್ಯೂಟ್ ಪಾದ್ರಿ ಮತ್ತು ಸ್ಥಳೀಯ ಸಮುದಾಯದ ಕಾರ್ಯಕರ್ತ, ಯುಎಪಿಎ ಅಡಿಯಲ್ಲಿ ಭಯೋತ್ಪಾದಕ ಎಂದು ಆರೋಪಿಸಲಾದ ಅತ್ಯಂತ ಹಿರಿಯ ಭಾರತೀಯ ಪ್ರಜೆ ಸ್ಟಾನ್ ಸ್ವಾಮಿಯನ್ನೂ ಈ ಪ್ರಕರಣದಲ್ಲಿ ಫೆರೇರಾ, ಗೊನ್ಸಾಲ್ವಿಸ್ ಮತ್ತು ವರವರ ರಾವ್ ಅವರನ್ನು ಅಕ್ಟೋಬರ್ ಮತ್ತು ನವೆಂಬರ್ 2018 ರ ನಡುವೆ ಬಂಧಿಸಿ ಪುಣೆಗೆ ಕರೆದೊಯ್ಯಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ