AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Express: ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್​ಪ್ರೆಸ್​ಗೆ ಹಸು ಡಿಕ್ಕಿ, ರೈಲಿನ ಮುಂಭಾಗಕ್ಕೆ ಹಾನಿ

ಭೋಪಾಲ್-ದೆಹಲಿ ವಂದೇ ಭಾರತ್​ ಎಕ್ಸ್​ಪ್ರೆಸ್​(Vande Bharat Express)ಗೆ ಹಸು ಡಿಕ್ಕಿ ಹೊಡೆದಿದ್ದು, ರೈಲಿನ ಮುಂಭಾಗಕ್ಕೆ ಹಾನಿಯಂಟಾಗಿದ್ದು, ಮುಗ್ಧ ಹಸು ಕೂಡ ಪ್ರಾಣಬಿಟ್ಟಿದೆ.

Vande Bharat Express: ಭೋಪಾಲ್-ದೆಹಲಿ ವಂದೇ ಭಾರತ್ ಎಕ್ಸ್​ಪ್ರೆಸ್​ಗೆ ಹಸು ಡಿಕ್ಕಿ, ರೈಲಿನ ಮುಂಭಾಗಕ್ಕೆ ಹಾನಿ
ವಂದೇ ಭಾರತ್ ರೈಲು
ನಯನಾ ರಾಜೀವ್
|

Updated on: Apr 28, 2023 | 10:20 AM

Share

ಭೋಪಾಲ್-ದೆಹಲಿ ವಂದೇ ಭಾರತ್​ ಎಕ್ಸ್​ಪ್ರೆಸ್​(Vande Bharat Express)ಗೆ ಹಸು ಡಿಕ್ಕಿ ಹೊಡೆದಿದ್ದು, ರೈಲಿನ ಮುಂಭಾಗಕ್ಕೆ ಹಾನಿಯಂಟಾಗಿದ್ದು, ಮುಗ್ಧ ಹಸು ಕೂಡ ಪ್ರಾಣಬಿಟ್ಟಿದೆ. ಗ್ವಾಲಿಯರ್​ನಲ್ಲಿ ಈ ಘಟನೆ ನಡೆದಿದೆ, ದಿಹಜರತ್ ನಿಜಾಮುದ್ದೀನ್-ರಾಣಿ ಕಮಲಾಪತಿ ವಂದೇ ಭಾರತ್ ರೈಲು ಸಂಜೆ 6.15ರ ಸುಮಾರಿಗೆ ಗ್ವಾಲಿಯರ್​ನ ದಬ್ರಾ ಕಡೆಗೆ ರೈಲು ಪ್ರಯಾಣಿಸುತ್ತಿದ್ದಾಗ, ಏಕಾಏಕಿ ಹಸು ರೈಲಿನ ಎದುರು ಬಂದಿತ್ತು. ರೈಲನ್ನು 15 ನಿಮಿಷಗಳ ಕಾಲ ನಿಲ್ಲಿಸಲಾಯಿತು. ಹಾನಿಗೊಳಗಾಗಿದ್ದ ರೈಲಿನ ಮುಂಭಾಗವನ್ನು ಸರಿಪಡಿಸಿದ ಬಳಿಕ ರೈಲು ಸಂಚಾರ ಪುನರಾರಂಭಗೊಂಡಿದೆ.

ಏಪ್ರಿಲ್ 1ರಂದು ಪ್ರಧಾನಿ ನರೇಂದ್ರ ಮೋದಿ ಈ ಭಾಗದಲ್ಲಿ ಸೆಮಿ ಹೈಸ್ಪೀಡ್​ ರೈಲಿಗೆ ಚಾಲನೆ ನೀಡಿದ್ದರು. ಈ ರೈಲು ಭೋಪಾಲ್ ಹಾಗೂ ದೆಹಲಿಯ ನಡುವೆ ಸಂಚರಿಸುತ್ತದೆ.

ಇತ್ತೀಚೆಗಷ್ಟೇ ರಾಜಸ್ಥಾನದಲ್ಲಿ ವಂದೇ ಭಾರತ್ ರೈಲು ಎರಡು ಜೀವಗಳನ್ನು ಬಲಿ ಪಡೆದಿದೆ. ಅಲ್ವಾರ್​ನಲ್ಲಿ ಹಸುವಿಗೆ ಒಂದೇ ಭಾರತ್ ರೈಲು ಡಿಕ್ಕಿ ಹೊಡೆದು ರೈಲ್ವೆ ಹಳಿಯಿಂದ ಸ್ವಲ್ಪ ದೂರದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ವೃದ್ಧರೊಬ್ಬರ ಮೇಲೆ ಆ ಹಸು ಬಿದ್ದು ಇಬ್ಬರೂ ಸಾವನ್ನಪ್ಪಿರುವ ಘಟನೆ ವರದಿಯಾಗಿತ್ತು.

ಮತ್ತಷ್ಟು ಓದಿ: ಎಂಥಾ ಗ್ರಹಚಾರ ನೋಡಿ, ವಂದೇ ಭಾರತ್ ರೈಲು ಡಿಕ್ಕಿ ಹೊಡೆದಿದ್ದು ಹಸುವಿಗೆ ಆದರೆ ಮೃತಪಟ್ಟಿದ್ದು ಇಬ್ಬರು

ರಾಜಸ್ಥಾನದ ಅಲ್ವಾರ್​ನ ಅರಾವಳಿ ವಿಹಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಶಿವದಯಾಳ್ ಶರ್ಮಾ ಎಂದು ಗುರುತಿಸಲಾಗಿದೆ. ಇವರು 23 ವರ್ಷಗಳ ಹಿಂದೆ ಭಾರತೀಯ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಹುದ್ದೆಯಿಂದ ನಿವೃತ್ತರಾಗಿದ್ದರು.

ಶಿವದಯಾಳ್ ಸಂಬಂಧಿಕರು ನೀಡಿರುವ ಮಾಹಿತಿ ಪ್ರಕಾರ, ಬೆಳಗ್ಗೆ 8.30ರ ಸುಮಾರಿಗೆ ಹೊರಟಿದ್ದ ವಂದೇ ಭಾರತ್ ರೈಲಿಗೆ ಹಸುವೊಂದು ಅಡ್ಡ ಬಂದಿತ್ತು, ರಭಸಕ್ಕೆ ಹಸುವಿನ ದೇಹ ಒಂದು ಭಾಗವು 30 ಮೀಟರ್ ದೂರದಲ್ಲಿರುವ ಹಳಿಯ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಶಿವ ದಯಾಳ್ ಅವರ ಮೇಲೆ ಬಿದ್ದಿದೆ, ಆಗ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!