AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೇಹಿತೆಯ ಸಾಕು ನಾಯಿಯನ್ನು ಕಾಪಾಡಲು ಹೋಗಿ ನೀರಿನಲ್ಲಿ ಮುಳುಗಿ ಪ್ರಾಣಬಿಟ್ಟ ಯುವಕ

ನೀರಿನಲ್ಲಿ ಮುಳುಗುತ್ತಿದ್ದ ಸ್ನೇಹಿತೆಯ ಸಾಕು ನಾಯಿಯನ್ನು ಕಾಪಾಡಲು ಹೋಗಿ ಯುವಕನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. ನಾಯಿ ಸುರಕ್ಷಿತವಾಗಿ ಈಜಿ ದಡ ಸೇರಿತು ಆದರೆ ಅದನ್ನು ರಕ್ಷಿಸಲು ಹೋಗಿದ್ದ ಯುವಕನ ಪ್ರಾಣಪಕ್ಷಿ ಹಾರಿಹೋಗಿತ್ತು.

ಸ್ನೇಹಿತೆಯ ಸಾಕು ನಾಯಿಯನ್ನು ಕಾಪಾಡಲು ಹೋಗಿ ನೀರಿನಲ್ಲಿ ಮುಳುಗಿ ಪ್ರಾಣಬಿಟ್ಟ ಯುವಕ
ನಯನಾ ರಾಜೀವ್
|

Updated on: Jan 05, 2024 | 3:01 PM

Share

ನೀರಿನಲ್ಲಿ ಮುಳುಗುತ್ತಿದ್ದ ಸ್ನೇಹಿತೆಯ ಸಾಕು ನಾಯಿಯನ್ನು ಕಾಪಾಡಲು ಹೋಗಿ ಯುವಕನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. ನಾಯಿ ಸುರಕ್ಷಿತವಾಗಿ ಈಜಿ ದಡ ಸೇರಿತು ಆದರೆ ಅದನ್ನು ರಕ್ಷಿಸಲು ಹೋಗಿದ್ದ ಯುವಕನ ಪ್ರಾಣಪಕ್ಷಿ ಹಾರಿಹೋಗಿತ್ತು.

ಯುವಕ ಸರಳ್​ ನಿಗಮ್ ಎನ್​ಐಟಿ ಭೋಪಾಲ್​ನಲ್ಲಿ ಬಿ.ಟೆಕ್ ಪಧವೀಧರನಾಗಿದ್ದಾನೆ. ತಂದೆ ತಾಯಿಗೆ ನಿಗಮ್ ಒಬ್ಬನೇ ಮಗ. MANITನಿಂದ ಎಂಜಿನಿಯರಿಂಗ್ ಪದವಿ ಪಡೆದ ಬಳಿಕ ಯುಪಿಎಸ್​ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಎನ್ನಲಾಗಿದೆ. ಸರಳ್ ಇಬ್ಬರು ಮಹಿಳಾ ಸ್ನೇಹಿತರ ಜತೆ ಬೆಳಗ್ಗೆ 7.30ರ ಸುಮಾರಿಗೆ ಕೆರ್ವಾ ಅಣೆಕಟ್ಟು ಪ್ರದೇಶದ ಜಂಗಲ್ ಕ್ಯಾಂಪ್​ಗೆ ಹೋಗಿದ್ದರು. ಆ ಮೂವರ ಜತೆಗೆ ನಾಯಿಯೂ ಕೂಡ ಬಂದಿತ್ತು.

ಸುಮಾರು ಒಂದು ಗಂಟೆಯ ನಂತರ ಬೆಳಗ್ಗೆ 8:30 ರ ಸುಮಾರಿಗೆ, ಮೂವರು ಜಲಮೂಲದ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ನಾಯಿಯು ಆಕಸ್ಮಿಕವಾಗಿ ನೀರಿಗೆ ಬಿದ್ದಿತು. ನಾಯಿಯನ್ನು ರಕ್ಷಿಸಲು ಗೆಳೆಯರ ಗುಂಪು ಪರಸ್ಪರ ಕೈ ಹಿಡಿದು ನೀರಿಗೆ ಹಾರಿದ್ದಾರೆ.

ಮತ್ತಷ್ಟು ಓದಿ: ನೆಲಮಂಗಲ: ಹಬ್ಬದ ದಿನವೇ ಈಜಲು ಹೋಗಿದ್ದ ಯುವಕ, ನೀರಿನಲ್ಲಿ ಮುಳುಗಿ ಸಾವು

ಹುಡುಗಿಯರು ನೀರಿನಿಂದ ಹೊರಬರುವಲ್ಲಿ ಯಶಸ್ವಿಯಾದರು ಆದರೆ ಬಲವಾದ ಪ್ರವಾಹದಿಂದ ಸರಳ್ ಆಳವಾದ ನೀರಿನಲ್ಲಿ ಮುಳುಗಿದ್ದಾನೆ. ನಂತರ ಯುವತಿಯರು ಓಡಿ ಹೋಗಿ ಸಹಾಯಕ್ಕಾಗಿ ಕೂಗಿದ್ದಾರೆ,ಕಿರುಚಾಟವನ್ನು ಕೇಳಿದ ಜಂಗಲ್ ಕ್ಯಾಂಪ್‌ನ ವಾಚ್‌ಮನ್ ದಡಕ್ಕೆ ಓಡಿ ಬಂದು ರಾತಿಬಾದ್ ಪೊಲೀಸರಿಗೆ ಮಾಹಿತಿ ನೀಡಿದರು.

ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಸರಳ್​ನ ಸುಳಿವು ಕಾಣಿಸಲಿಲ್ಲ, ಒಂದು ಗಂಟೆಯ ನಂತರ ಆತನ ಶವ ಪತ್ತೆಯಾಗಿದೆ. 10-15 ಅಡಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ. ಸ್ನೇಹಿತೆಯರ ಪೊಲೀಸರು ಮನೆಗೆ ಕಳುಹಿಸಿದ್ದಾರೆ. ಅವರ ಹೇಳಿಕೆಗಳನ್ನು ಇನ್ನೂ ದಾಖಲಿಸಿಕೊಳ್ಳಬೇಕಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ