AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನ್ಯಾಪ್​ಚಾಟ್ ಬಳಸುತ್ತಿದ್ದ ಚಾಲಕ, ನಿಯಂತ್ರಣ ತಪ್ಪಿ ನದಿಗೆ ಉರುಳಿದ ಕಾರು, ಇಬ್ಬರು ಸಾವು

ಮೊಬೈಲ್​ ನೋಡುತ್ತಾ ಕಾರಿನ ನಿಯಂತ್ರಣ ಕಳೆದುಕೊಂಡು ನದಿಗೆ ಹಾರಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಓರ್ವ ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮೃತರನ್ನು ಕಾರು ಚಲಾಯಿಸುತ್ತಿದ್ದ ವಿನೀತ್ (22) ಮತ್ತು ಪಲಾಶ್ ಗಾಯಕ್ವಾಡ್ (22) ಎಂದು ಗುರುತಿಸಲಾಗಿದೆ. ಪಿಯೂಷ್ ಎಂಬುವವರು ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ನ್ಯಾಪ್​ಚಾಟ್ ಬಳಸುತ್ತಿದ್ದ ಚಾಲಕ, ನಿಯಂತ್ರಣ ತಪ್ಪಿ ನದಿಗೆ ಉರುಳಿದ ಕಾರು, ಇಬ್ಬರು ಸಾವು
ಕಾರು Image Credit source: India Today
ನಯನಾ ರಾಜೀವ್
|

Updated on: Jan 17, 2025 | 8:46 AM

Share

ಕಾರು ಚಲಾಯಿಸುವ ಸಂದರ್ಭದಲ್ಲಿ ಮೊಬೈಲ್​ ಬಳಕೆ ಮಾಡುವುದರಿಂದ ಜೀವಕ್ಕೇ ಕುತ್ತುಬರಬಹುದು. ಕೆಲವರು ವಿಡಿಯೋ ಕಾಲ್​ನಲ್ಲಿ ಮಾತನಾಡುತ್ತಿರುತ್ತಾರೆ, ಇನ್ನೂ ಕೆಲವರು ವಾಟ್ಸಾಪ್​ನಲ್ಲಿ ಚಾಟ್ ಮಾಡುತ್ತಾ ಹೋಗುತ್ತಾರೆ. ಇದರಿಂದ ಚಾಲಕನ ಪ್ರಾಣವೇ ಹೋಗಬಹುದು. ಭೋಪಾಲ್​ನ ಕೋಲಾರ ಪ್ರದೇಶದಲ್ಲಿ ಘಟನೆ ನಡೆದಿದೆ. ಚಾಲಕ ಸ್ನ್ಯಾಪ್​ಚಾಟ್​ ಮಾಡುತ್ತಾ ಹೋಗಿ ಕಾರು ಸಮೇತ ನದಿಗೆ ಹಾರಿದ್ದಾರೆ.

ಆರು ಲೇನ್ ಸೇತುವೆಯ ಮೇಲೆ ತಿರುವಿನಲ್ಲಿ ನ್ಯಾವಿಗೇಟ್ ಮಾಡುವಾಗ ವಾಹನದ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ. ಮೃತರನ್ನು ಕಾರು ಚಲಾಯಿಸುತ್ತಿದ್ದ ವಿನೀತ್ (22) ಮತ್ತು ಪಲಾಶ್ ಗಾಯಕ್ವಾಡ್ (22) ಎಂದು ಗುರುತಿಸಲಾಗಿದೆ. ಪಿಯೂಷ್ ಎಂಬುವವರು ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸ್ ವರದಿಗಳ ಪ್ರಕಾರ, ಅಪಘಾತದ ಸಮಯದಲ್ಲಿ ವಿನೀತ್ ಹೆಚ್ಚಿನ ವೇಗದಲ್ಲಿ ಇದ್ದಿದ್ದಷ್ಟೇ ಅಲ್ಲದೆ ಸ್ನ್ಯಾಪ್‌ಚಾಟ್ ಬಳಸುತ್ತಿದ್ದ, ಸೇತುವೆಯ ಮೇಲೆ ತಿರುವು ಪಡೆಯಲು ಪ್ರಯತ್ನಿಸುವಾಗ ಅವರು ವಾಹನದ ನಿಯಂತ್ರಣ ಕಳೆದುಕೊಂಡಿದ್ದ. ಇದರಿಂದಾಗಿ ಕಾರು ತಡೆಗೋಡೆಯಿಂದ ಡಿಕ್ಕಿ ಹೊಡೆದು ಕೆಳಗಿನ ನದಿಗೆ ಬಿದ್ದಿತ್ತು.

ಮತ್ತಷ್ಟು ಓದಿ: Kerala: ಗೂಗಲ್ ಮ್ಯಾಪ್ ನಂಬಿ ಕಾರು ಓಡಿಸಿ, ತುಂಬಿ ಹರಿಯುತ್ತಿದ್ದ ಹಳ್ಳದೊಳಗೆ ಮುಳುಗಿದ ಕಾರು

ಡಿಕ್ಕಿ ಹೊಡೆದ ನಂತರ ಕಾರಿನ ಬಾಗಿಲು ಲಾಕ್ ಆಗಿದ್ದು, ಮೂವರು ಒಳಗಡೆ ಸಿಲುಕಿದ್ದಾರೆ. ಈ ವೇಳೆ ಪಿಯೂಷ್ ಕಿಟಕಿ ಒಡೆದು ಪರಾರಿಯಾಗಿದ್ದು, ಗಾಯಗೊಂಡಿದ್ದಾರೆ. ಕೂಡಲೇ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾರಿನ ಗಾಜುಗಳನ್ನು ಒಡೆದು ವಿನೀತ್ ಮತ್ತು ಪಲಾಶ್ ಅವರ ಮೃತದೇಹಗಳನ್ನು ಹೊರತೆಗೆಯಲು ಪ್ರಯತ್ನಿಸಿದರು. ಸ್ಥಳದಲ್ಲೇ ಇಬ್ಬರೂ ಮೃತಪಟ್ಟಿದ್ದು, ಅವರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪಿಯೂಷ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ