AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhopal: ಗ್ಯಾಸ್​ಸ್ಟವ್​ನಿಂದ ಬೀಡಿಗೆ ಬೆಂಕಿ ಹಚ್ಚಲು ಹೋಗಿ ಸುಟ್ಟು ಕರಕಲಾದ ವ್ಯಕ್ತಿ

ರಾತ್ರಿ ಹೊತ್ತು ಗ್ಯಾಸ್​ ಸ್ಟವ್ ಆನ್ ಮಾಡಿ ಲೈಟರ್​ ಹುಡುಕಿ, ಹಚ್ಚುವಷ್ಟರಲ್ಲಿ ಸ್ಫೋಟ ಸಂಭವಿಸಿ ವೃದ್ಧರೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. ಬೀಡಿ ಸೇದಬೇಕೆಂದೆನಿಸಿ ಸ್ಟವ್​ನಲ್ಲಿ ಹಚ್ಚಿಕೊಳ್ಳಬೇಕೆಂದು ಪ್ರಯತ್ನಿಸಿದಾಗ ಗ್ಯಾಸ್ ಸೋರಿಕೆಯಾಗಿ ಬೆಂಕಿಯ ಜ್ವಾಲೆ ಇಡೀ ಮನೆಗೆ ವ್ಯಾಪಿಸಿ ವೃದ್ಧರೊಬ್ಬರು ಸುಟ್ಟು ಕರಕಲಾಗಿದ್ದಾರೆ.

Bhopal: ಗ್ಯಾಸ್​ಸ್ಟವ್​ನಿಂದ ಬೀಡಿಗೆ ಬೆಂಕಿ ಹಚ್ಚಲು ಹೋಗಿ ಸುಟ್ಟು ಕರಕಲಾದ ವ್ಯಕ್ತಿ
ಬೆಂಕಿ Image Credit source: Frontier Fire Protection
Follow us
ನಯನಾ ರಾಜೀವ್
|

Updated on:Feb 18, 2025 | 10:14 AM

ಗ್ಯಾಸ್​ಸ್ಟವ್​ನಿಂದ ಬೀಡಿಗೆ ಬೆಂಕಿ ಹಚ್ಚಲು ಹೋಗಿದ್ದ ವ್ಯಕ್ತಿ ಬೆಂಕಿಯಲ್ಲಿ ಸುಟ್ಟು ಕರಕಲಾಗಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. ಬೆಂಕಿಯ ಜತೆ ಸರಸವಾಡಬಾರದು ಎಂಬ ಗಾದೆ ಮಾತಿದೆ. ಹಾಗೆಯೇ ಬೆಂಕಿ ಬಳಿ ಇದ್ದಾಗ ಸ್ವಲ್ಪ ಎಚ್ಚರ ತಪ್ಪಿದರೂ ಸಾವು ಸಂಭವಿಸಬಹುದು.

ವೃದ್ಧರೊಬ್ಬರು ಗ್ಯಾಸ್​ ಸ್ಟವ್ ಆನ್​ ಮಾಡಿ ಬೀಡಿಗೆ ಬೆಂಕಿ ಹಚ್ಚಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ. ರಾತ್ರಿ ಬೀಡಿ ಸೇದಬೇಕೆನಿಸಿತು, ಬೆಂಕಿ ಕಡ್ಡಿಯನ್ನು ಹುಡುಕುತ್ತಾ ಹೋಗಿದ್ದರು. ಅದು ಸಿಗಲಿಲ್ಲ, ನಂತರ ಬೀಡಿಯನ್ನು ಹೊತ್ತಿಸಲು ಗ್ಯಾಸ್​ಸ್ಟವ್ ಬಳಸುವ ಉದ್ದೇಶದಿಂದ ಅಡುಗೆ ಮನೆಗೆ ಹೋಗಿದ್ದರು.

ಗ್ಯಾಸ್ ಆನ್ ಮಾಡಿ ಲೈಟರ್​ಗಾಗಿ ಹುಡುಕಾಡುದರು, ಒಲೆಯ ಮೂಲಕ ಗ್ಯಾಸ್ ಸೋರಿಕೆಯಾಗುತ್ತಲೇ ಇತ್ತು. ಸ್ವಲ್ಪ ಸಮಯದ ನಂತರ ಲೈಟರ್ ಸಿಕ್ಕಿತ್ತು. ಆದರೆ ಆ ಹೊತ್ತಿಗೆ ಅಡುಗೆ ಮನೆಯಾದ್ಯಂತ ಗ್ಯಾಸ್ ಸಂಗ್ರಹವಾಗಿತ್ತು. ಲೈಟರ್ ಹಚ್ಚಿದ ಕ್ಷಣ ಬೆಂಕಿ ಇಡೀ ಮನೆಯನ್ನೇ ಆವರಿಸಿತ್ತು. ವ್ಯಕ್ತಿ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ.

ಮತ್ತಷ್ಟು ಓದಿ; ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ ಅವಘಡ: ಇಬ್ಬರು ಕಾರ್ಮಿಕರು ದುರ್ಮರಣ

ಆ ವ್ಯಕ್ತಿ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಮತ್ತು ಅವನ ದೇಹದಾದ್ಯಂತ ತೀವ್ರವಾದ ಸುಟ್ಟಗಾಯಗಳು ಉಂಟಾದವು. ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಅವರ ಇಬ್ಬರು ಗಂಡು ಮಕ್ಕಳು ಸ್ಫೋಟದ ಶಬ್ದ ಕೇಳಿ ಓಡಿ ಬಂದರು, ಅವರು ಕುಟುಂಬದ ಉಳಿದವರನ್ನು ಕರೆದು ಆ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ದರು, ಆದರೆ ಸುಟ್ಟಗಾಯಗಳ ಪ್ರಮಾಣ ಹೆಚ್ಚಾದ ಕಾರಣ ಅವರು ಸಾವನ್ನಪ್ಪಿದ್ದಾರೆ. ಎಂದೂ ಕೂಡ ಬೆಂಕಿ ಹಾಗೂ ಗ್ಯಾಸ್ ಬಳಸಬೇಕಿದ್ದರೆ ತುಂಬಾ ಎಚ್ಚರಿಕೆಯಿಂದಬೇಕು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:19 am, Tue, 18 February 25

ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್