AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ವನಿ ಬದಲಿಸುವ ಆ್ಯಪ್​ ಮೂಲಕ ಮಹಿಳಾ ಪ್ರೊಫೆಸರ್ ಎಂದು ಹೇಳಿ ಕರೆಸಿಕೊಂಡು 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಶಿಕ್ಷಕಿಯಂತೆ ಧ್ವನಿ ಬದಲಾಯಿಸಿಕೊಂಡು ವಿದ್ಯಾರ್ಥಿನಿಯರನ್ನು ಕರೆಸಿಕೊಂಡು ಅತ್ಯಾಚಾರವೆಸಗುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತ ಆ್ಯಪ್​ ಮೂಲಕ ಮಹಿಳೆಯರಂತೆ ಧ್ವನಿ ಬದಲಾಯಿಸಿಕೊಂಡು ವಿದ್ಯಾರ್ಥಿನಿಯರ ಬಳಿ ಮಾತನಾಡುತ್ತಿದ್ದ.

ಧ್ವನಿ ಬದಲಿಸುವ ಆ್ಯಪ್​ ಮೂಲಕ ಮಹಿಳಾ ಪ್ರೊಫೆಸರ್ ಎಂದು ಹೇಳಿ ಕರೆಸಿಕೊಂಡು 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ
ನಯನಾ ರಾಜೀವ್
|

Updated on: May 26, 2024 | 12:19 PM

Share

ವ್ಯಕ್ತಿಯೊಬ್ಬ ಆ್ಯಪ್​ ಮೂಲಕ ಧ್ವನಿ ಬದಲಾಯಿಸಿಕೊಂಡು ಮಹಿಳಾ ಪ್ರೊಫೆಸರ್​ ಎಂದು ಹೇಳಿ ಕರೆಸಿಕೊಂಡು 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಹಿಳಾ ಪ್ರೊಫೆಸರ್​ನಂತೆ ಕರೆ ಮಾಡಿ ವಿದ್ಯಾರ್ಥಿ ವೇತನ ಕೊಡಿಸುತ್ತೇನೆಂದು ಹೇಳಿ ಕರೆಸಿಕೊಂಡು ಅತ್ಯಾಚಾರವೆಸಗಿದ್ದಾನೆ.

ಈ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇದುವರೆಗೆ ನಾಲ್ಕು ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಇತರ ಮೂವರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಈ ಪ್ರಕರಣದಲ್ಲಿ ಅವರ ವಿರುದ್ಧ ಪೋಕ್ಸೊ ಕಾಯ್ದೆಯನ್ನೂ ಹಾಕಲಾಗಿದೆ. ಮೇ 24 ರಂದು ಪ್ರಜಾಪತಿಯ ರಿಮಾಂಡ್ ಮುಗಿದ ನಂತರ, ಪೊಲೀಸರು ಮತ್ತೆ ಆತನನ್ನು ಕಸ್ಟಡಿಗೆ ಕೋರಿದ್ದಾರೆ.

ಎಸ್​​ಸಿಎಸ್​ಟಿ ವಿದ್ಯಾರ್ಥಿ ವೇತನಕ್ಕೆ ಅರ್ಹರಾದ ಬಾಲಕಿಯರಿಗೆ ಆರೋಪಿ ಬೃಜೇಶ್​ ಪ್ರಜಾಪತಿ ಬಲೆ ಬೀಸುತ್ತಿದ್ದ ಎಂದು ಹೇಳಲಾಗಿದೆ. ಧ್ವನಿ ಬದಲಾವಣೆ ಆ್ಯಪ್ ಬಳಸಿಕೊಂಡು ಅರ್ಚನಾ ಮೇಡಂ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಸ್ಕಾಲರ್​ಶಿಪ್​ ಅರ್ಜಿಗಳ ಸಮಸ್ಯೆ ಬಗೆಹರಿಸುವ ಸಲುವಾಗಿ ತನ್ನನ್ನು ಭೇಟಿಯಾಗುವಂತೆ ಹೇಳುತ್ತಿದ್ದ, ಬಾಲಕಿಯರ ಮೇಲೆ ಅತ್ಯಾಚಾರವೆಸಗಿ ಅವರ ಮೊಬೈಲ್​ಗಳನ್ನು ಕಸಿದುಕೊಂಡು ನೆರವಿಗಾಗಿ ಯಾರಿಗೂ ಕರೆ ಮಾಡದಂತೆ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಮತ್ತಷ್ಟು ಓದಿ: ಮಂಡ್ಯ: ವಿಕಲಚೇತನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕನಿಂದ ಮತಾಂತರಕ್ಕೆ ಒತ್ತಾಯ

ಆರೋಪಿಯಿಂದ 16 ಫೋನ್​ಗಳನ್ನು ವಶಪಡಿಸಿಕೊಳ್ಳಲಾಗಿದೆ, ಕೇವಲ ನಾಲ್ಕು ಮಂದಿಯಿಂದ ಮಾತ್ರ ಅಧಿಕೃತ ದೂರು ಬಂದಿದೆ. ನಿರುದ್ಯೋಗಿಯಾಗಿರುವ ಪ್ರಜಾಪತಿ ಈ ದಂಧೆ ಈ ವರ್ಷದ ಏಪ್ರಿಲ್​ನಿಂದ ಆರಂಭಿಸಿದ್ದಾನೆ. ಈತನ ವಿರುದ್ಧ ದೂರು ನೀಡಲು ವಿದ್ಯಾರ್ಥಿನಿಯರು ಹೆದರಿದ್ದರು. ಮೇ 16ರಂದು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಧೈರ್ಯದಿಂದ ಮಜೂಲಿ ಠಾಣೆಗೆ ಬಂದು ದೂರು ದಾಖಲಿಸಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ