ಧ್ವನಿ ಬದಲಿಸುವ ಆ್ಯಪ್​ ಮೂಲಕ ಮಹಿಳಾ ಪ್ರೊಫೆಸರ್ ಎಂದು ಹೇಳಿ ಕರೆಸಿಕೊಂಡು 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಶಿಕ್ಷಕಿಯಂತೆ ಧ್ವನಿ ಬದಲಾಯಿಸಿಕೊಂಡು ವಿದ್ಯಾರ್ಥಿನಿಯರನ್ನು ಕರೆಸಿಕೊಂಡು ಅತ್ಯಾಚಾರವೆಸಗುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತ ಆ್ಯಪ್​ ಮೂಲಕ ಮಹಿಳೆಯರಂತೆ ಧ್ವನಿ ಬದಲಾಯಿಸಿಕೊಂಡು ವಿದ್ಯಾರ್ಥಿನಿಯರ ಬಳಿ ಮಾತನಾಡುತ್ತಿದ್ದ.

ಧ್ವನಿ ಬದಲಿಸುವ ಆ್ಯಪ್​ ಮೂಲಕ ಮಹಿಳಾ ಪ್ರೊಫೆಸರ್ ಎಂದು ಹೇಳಿ ಕರೆಸಿಕೊಂಡು 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ
Follow us
|

Updated on: May 26, 2024 | 12:19 PM

ವ್ಯಕ್ತಿಯೊಬ್ಬ ಆ್ಯಪ್​ ಮೂಲಕ ಧ್ವನಿ ಬದಲಾಯಿಸಿಕೊಂಡು ಮಹಿಳಾ ಪ್ರೊಫೆಸರ್​ ಎಂದು ಹೇಳಿ ಕರೆಸಿಕೊಂಡು 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಹಿಳಾ ಪ್ರೊಫೆಸರ್​ನಂತೆ ಕರೆ ಮಾಡಿ ವಿದ್ಯಾರ್ಥಿ ವೇತನ ಕೊಡಿಸುತ್ತೇನೆಂದು ಹೇಳಿ ಕರೆಸಿಕೊಂಡು ಅತ್ಯಾಚಾರವೆಸಗಿದ್ದಾನೆ.

ಈ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇದುವರೆಗೆ ನಾಲ್ಕು ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಇತರ ಮೂವರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಈ ಪ್ರಕರಣದಲ್ಲಿ ಅವರ ವಿರುದ್ಧ ಪೋಕ್ಸೊ ಕಾಯ್ದೆಯನ್ನೂ ಹಾಕಲಾಗಿದೆ. ಮೇ 24 ರಂದು ಪ್ರಜಾಪತಿಯ ರಿಮಾಂಡ್ ಮುಗಿದ ನಂತರ, ಪೊಲೀಸರು ಮತ್ತೆ ಆತನನ್ನು ಕಸ್ಟಡಿಗೆ ಕೋರಿದ್ದಾರೆ.

ಎಸ್​​ಸಿಎಸ್​ಟಿ ವಿದ್ಯಾರ್ಥಿ ವೇತನಕ್ಕೆ ಅರ್ಹರಾದ ಬಾಲಕಿಯರಿಗೆ ಆರೋಪಿ ಬೃಜೇಶ್​ ಪ್ರಜಾಪತಿ ಬಲೆ ಬೀಸುತ್ತಿದ್ದ ಎಂದು ಹೇಳಲಾಗಿದೆ. ಧ್ವನಿ ಬದಲಾವಣೆ ಆ್ಯಪ್ ಬಳಸಿಕೊಂಡು ಅರ್ಚನಾ ಮೇಡಂ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಸ್ಕಾಲರ್​ಶಿಪ್​ ಅರ್ಜಿಗಳ ಸಮಸ್ಯೆ ಬಗೆಹರಿಸುವ ಸಲುವಾಗಿ ತನ್ನನ್ನು ಭೇಟಿಯಾಗುವಂತೆ ಹೇಳುತ್ತಿದ್ದ, ಬಾಲಕಿಯರ ಮೇಲೆ ಅತ್ಯಾಚಾರವೆಸಗಿ ಅವರ ಮೊಬೈಲ್​ಗಳನ್ನು ಕಸಿದುಕೊಂಡು ನೆರವಿಗಾಗಿ ಯಾರಿಗೂ ಕರೆ ಮಾಡದಂತೆ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಮತ್ತಷ್ಟು ಓದಿ: ಮಂಡ್ಯ: ವಿಕಲಚೇತನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕನಿಂದ ಮತಾಂತರಕ್ಕೆ ಒತ್ತಾಯ

ಆರೋಪಿಯಿಂದ 16 ಫೋನ್​ಗಳನ್ನು ವಶಪಡಿಸಿಕೊಳ್ಳಲಾಗಿದೆ, ಕೇವಲ ನಾಲ್ಕು ಮಂದಿಯಿಂದ ಮಾತ್ರ ಅಧಿಕೃತ ದೂರು ಬಂದಿದೆ. ನಿರುದ್ಯೋಗಿಯಾಗಿರುವ ಪ್ರಜಾಪತಿ ಈ ದಂಧೆ ಈ ವರ್ಷದ ಏಪ್ರಿಲ್​ನಿಂದ ಆರಂಭಿಸಿದ್ದಾನೆ. ಈತನ ವಿರುದ್ಧ ದೂರು ನೀಡಲು ವಿದ್ಯಾರ್ಥಿನಿಯರು ಹೆದರಿದ್ದರು. ಮೇ 16ರಂದು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಧೈರ್ಯದಿಂದ ಮಜೂಲಿ ಠಾಣೆಗೆ ಬಂದು ದೂರು ದಾಖಲಿಸಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ