AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ವನಿ ಬದಲಿಸುವ ಆ್ಯಪ್​ ಮೂಲಕ ಮಹಿಳಾ ಪ್ರೊಫೆಸರ್ ಎಂದು ಹೇಳಿ ಕರೆಸಿಕೊಂಡು 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಶಿಕ್ಷಕಿಯಂತೆ ಧ್ವನಿ ಬದಲಾಯಿಸಿಕೊಂಡು ವಿದ್ಯಾರ್ಥಿನಿಯರನ್ನು ಕರೆಸಿಕೊಂಡು ಅತ್ಯಾಚಾರವೆಸಗುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತ ಆ್ಯಪ್​ ಮೂಲಕ ಮಹಿಳೆಯರಂತೆ ಧ್ವನಿ ಬದಲಾಯಿಸಿಕೊಂಡು ವಿದ್ಯಾರ್ಥಿನಿಯರ ಬಳಿ ಮಾತನಾಡುತ್ತಿದ್ದ.

ಧ್ವನಿ ಬದಲಿಸುವ ಆ್ಯಪ್​ ಮೂಲಕ ಮಹಿಳಾ ಪ್ರೊಫೆಸರ್ ಎಂದು ಹೇಳಿ ಕರೆಸಿಕೊಂಡು 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ
ನಯನಾ ರಾಜೀವ್
|

Updated on: May 26, 2024 | 12:19 PM

Share

ವ್ಯಕ್ತಿಯೊಬ್ಬ ಆ್ಯಪ್​ ಮೂಲಕ ಧ್ವನಿ ಬದಲಾಯಿಸಿಕೊಂಡು ಮಹಿಳಾ ಪ್ರೊಫೆಸರ್​ ಎಂದು ಹೇಳಿ ಕರೆಸಿಕೊಂಡು 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಹಿಳಾ ಪ್ರೊಫೆಸರ್​ನಂತೆ ಕರೆ ಮಾಡಿ ವಿದ್ಯಾರ್ಥಿ ವೇತನ ಕೊಡಿಸುತ್ತೇನೆಂದು ಹೇಳಿ ಕರೆಸಿಕೊಂಡು ಅತ್ಯಾಚಾರವೆಸಗಿದ್ದಾನೆ.

ಈ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇದುವರೆಗೆ ನಾಲ್ಕು ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಇತರ ಮೂವರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಈ ಪ್ರಕರಣದಲ್ಲಿ ಅವರ ವಿರುದ್ಧ ಪೋಕ್ಸೊ ಕಾಯ್ದೆಯನ್ನೂ ಹಾಕಲಾಗಿದೆ. ಮೇ 24 ರಂದು ಪ್ರಜಾಪತಿಯ ರಿಮಾಂಡ್ ಮುಗಿದ ನಂತರ, ಪೊಲೀಸರು ಮತ್ತೆ ಆತನನ್ನು ಕಸ್ಟಡಿಗೆ ಕೋರಿದ್ದಾರೆ.

ಎಸ್​​ಸಿಎಸ್​ಟಿ ವಿದ್ಯಾರ್ಥಿ ವೇತನಕ್ಕೆ ಅರ್ಹರಾದ ಬಾಲಕಿಯರಿಗೆ ಆರೋಪಿ ಬೃಜೇಶ್​ ಪ್ರಜಾಪತಿ ಬಲೆ ಬೀಸುತ್ತಿದ್ದ ಎಂದು ಹೇಳಲಾಗಿದೆ. ಧ್ವನಿ ಬದಲಾವಣೆ ಆ್ಯಪ್ ಬಳಸಿಕೊಂಡು ಅರ್ಚನಾ ಮೇಡಂ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಸ್ಕಾಲರ್​ಶಿಪ್​ ಅರ್ಜಿಗಳ ಸಮಸ್ಯೆ ಬಗೆಹರಿಸುವ ಸಲುವಾಗಿ ತನ್ನನ್ನು ಭೇಟಿಯಾಗುವಂತೆ ಹೇಳುತ್ತಿದ್ದ, ಬಾಲಕಿಯರ ಮೇಲೆ ಅತ್ಯಾಚಾರವೆಸಗಿ ಅವರ ಮೊಬೈಲ್​ಗಳನ್ನು ಕಸಿದುಕೊಂಡು ನೆರವಿಗಾಗಿ ಯಾರಿಗೂ ಕರೆ ಮಾಡದಂತೆ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಮತ್ತಷ್ಟು ಓದಿ: ಮಂಡ್ಯ: ವಿಕಲಚೇತನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕನಿಂದ ಮತಾಂತರಕ್ಕೆ ಒತ್ತಾಯ

ಆರೋಪಿಯಿಂದ 16 ಫೋನ್​ಗಳನ್ನು ವಶಪಡಿಸಿಕೊಳ್ಳಲಾಗಿದೆ, ಕೇವಲ ನಾಲ್ಕು ಮಂದಿಯಿಂದ ಮಾತ್ರ ಅಧಿಕೃತ ದೂರು ಬಂದಿದೆ. ನಿರುದ್ಯೋಗಿಯಾಗಿರುವ ಪ್ರಜಾಪತಿ ಈ ದಂಧೆ ಈ ವರ್ಷದ ಏಪ್ರಿಲ್​ನಿಂದ ಆರಂಭಿಸಿದ್ದಾನೆ. ಈತನ ವಿರುದ್ಧ ದೂರು ನೀಡಲು ವಿದ್ಯಾರ್ಥಿನಿಯರು ಹೆದರಿದ್ದರು. ಮೇ 16ರಂದು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಧೈರ್ಯದಿಂದ ಮಜೂಲಿ ಠಾಣೆಗೆ ಬಂದು ದೂರು ದಾಖಲಿಸಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ