AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ವನಿ ಬದಲಿಸುವ ಆ್ಯಪ್​ ಮೂಲಕ ಮಹಿಳಾ ಪ್ರೊಫೆಸರ್ ಎಂದು ಹೇಳಿ ಕರೆಸಿಕೊಂಡು 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಶಿಕ್ಷಕಿಯಂತೆ ಧ್ವನಿ ಬದಲಾಯಿಸಿಕೊಂಡು ವಿದ್ಯಾರ್ಥಿನಿಯರನ್ನು ಕರೆಸಿಕೊಂಡು ಅತ್ಯಾಚಾರವೆಸಗುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತ ಆ್ಯಪ್​ ಮೂಲಕ ಮಹಿಳೆಯರಂತೆ ಧ್ವನಿ ಬದಲಾಯಿಸಿಕೊಂಡು ವಿದ್ಯಾರ್ಥಿನಿಯರ ಬಳಿ ಮಾತನಾಡುತ್ತಿದ್ದ.

ಧ್ವನಿ ಬದಲಿಸುವ ಆ್ಯಪ್​ ಮೂಲಕ ಮಹಿಳಾ ಪ್ರೊಫೆಸರ್ ಎಂದು ಹೇಳಿ ಕರೆಸಿಕೊಂಡು 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ
ನಯನಾ ರಾಜೀವ್
|

Updated on: May 26, 2024 | 12:19 PM

Share

ವ್ಯಕ್ತಿಯೊಬ್ಬ ಆ್ಯಪ್​ ಮೂಲಕ ಧ್ವನಿ ಬದಲಾಯಿಸಿಕೊಂಡು ಮಹಿಳಾ ಪ್ರೊಫೆಸರ್​ ಎಂದು ಹೇಳಿ ಕರೆಸಿಕೊಂಡು 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಹಿಳಾ ಪ್ರೊಫೆಸರ್​ನಂತೆ ಕರೆ ಮಾಡಿ ವಿದ್ಯಾರ್ಥಿ ವೇತನ ಕೊಡಿಸುತ್ತೇನೆಂದು ಹೇಳಿ ಕರೆಸಿಕೊಂಡು ಅತ್ಯಾಚಾರವೆಸಗಿದ್ದಾನೆ.

ಈ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಇದುವರೆಗೆ ನಾಲ್ಕು ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಇತರ ಮೂವರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಈ ಪ್ರಕರಣದಲ್ಲಿ ಅವರ ವಿರುದ್ಧ ಪೋಕ್ಸೊ ಕಾಯ್ದೆಯನ್ನೂ ಹಾಕಲಾಗಿದೆ. ಮೇ 24 ರಂದು ಪ್ರಜಾಪತಿಯ ರಿಮಾಂಡ್ ಮುಗಿದ ನಂತರ, ಪೊಲೀಸರು ಮತ್ತೆ ಆತನನ್ನು ಕಸ್ಟಡಿಗೆ ಕೋರಿದ್ದಾರೆ.

ಎಸ್​​ಸಿಎಸ್​ಟಿ ವಿದ್ಯಾರ್ಥಿ ವೇತನಕ್ಕೆ ಅರ್ಹರಾದ ಬಾಲಕಿಯರಿಗೆ ಆರೋಪಿ ಬೃಜೇಶ್​ ಪ್ರಜಾಪತಿ ಬಲೆ ಬೀಸುತ್ತಿದ್ದ ಎಂದು ಹೇಳಲಾಗಿದೆ. ಧ್ವನಿ ಬದಲಾವಣೆ ಆ್ಯಪ್ ಬಳಸಿಕೊಂಡು ಅರ್ಚನಾ ಮೇಡಂ ಎಂದು ಪರಿಚಯಿಸಿಕೊಳ್ಳುತ್ತಿದ್ದ. ಸ್ಕಾಲರ್​ಶಿಪ್​ ಅರ್ಜಿಗಳ ಸಮಸ್ಯೆ ಬಗೆಹರಿಸುವ ಸಲುವಾಗಿ ತನ್ನನ್ನು ಭೇಟಿಯಾಗುವಂತೆ ಹೇಳುತ್ತಿದ್ದ, ಬಾಲಕಿಯರ ಮೇಲೆ ಅತ್ಯಾಚಾರವೆಸಗಿ ಅವರ ಮೊಬೈಲ್​ಗಳನ್ನು ಕಸಿದುಕೊಂಡು ನೆರವಿಗಾಗಿ ಯಾರಿಗೂ ಕರೆ ಮಾಡದಂತೆ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಮತ್ತಷ್ಟು ಓದಿ: ಮಂಡ್ಯ: ವಿಕಲಚೇತನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕನಿಂದ ಮತಾಂತರಕ್ಕೆ ಒತ್ತಾಯ

ಆರೋಪಿಯಿಂದ 16 ಫೋನ್​ಗಳನ್ನು ವಶಪಡಿಸಿಕೊಳ್ಳಲಾಗಿದೆ, ಕೇವಲ ನಾಲ್ಕು ಮಂದಿಯಿಂದ ಮಾತ್ರ ಅಧಿಕೃತ ದೂರು ಬಂದಿದೆ. ನಿರುದ್ಯೋಗಿಯಾಗಿರುವ ಪ್ರಜಾಪತಿ ಈ ದಂಧೆ ಈ ವರ್ಷದ ಏಪ್ರಿಲ್​ನಿಂದ ಆರಂಭಿಸಿದ್ದಾನೆ. ಈತನ ವಿರುದ್ಧ ದೂರು ನೀಡಲು ವಿದ್ಯಾರ್ಥಿನಿಯರು ಹೆದರಿದ್ದರು. ಮೇ 16ರಂದು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಧೈರ್ಯದಿಂದ ಮಜೂಲಿ ಠಾಣೆಗೆ ಬಂದು ದೂರು ದಾಖಲಿಸಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್