ಹೆಣ್ಣುಮಕ್ಕಳ ಹೆತ್ತಿದ್ದಕ್ಕೆ ನಿತ್ಯ ಚಿತ್ರಹಿಂಸೆ, ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ

ಗಂಡು ಮಗು ಹೆರಲಿಲ್ಲ ಎನ್ನುವ ಕಾರಣಕ್ಕೆ ಪತಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಮಹಿಳೆಯೊಬ್ಬರು ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿದೆ. ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದರೆ, ಮೂರನೇ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಹೆಣ್ಣುಮಕ್ಕಳ ಹೆತ್ತಿದ್ದಕ್ಕೆ ನಿತ್ಯ ಚಿತ್ರಹಿಂಸೆ, ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಮಹಿಳೆ
ಸಾವು

Updated on: Mar 27, 2024 | 11:30 AM

ಗಂಡು ಮಗು ಹೆರಲಿಲ್ಲ ಎನ್ನುವ ಕಾರಣಕ್ಕೆ ಪತಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಮಹಿಳೆಯೊಬ್ಬರು ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿದೆ. ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದರೆ, ಮೂರನೇ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಆತ್ಮಹತ್ಯೆಗೂ ಮುನ್ನ ಮಹಿಳೆ ತನ್ನ ಸಹೋದರಿನಿಗೆ ವಾಯ್ಸ್​ ಮೆಸೇಜ್ ಕಳುಹಿಸಿದ್ದಳು. ತಾನು ಗಂಡು ಮಗು ಹೆತ್ತಿಲ್ಲ ಎನ್ನುವ ಕಾರಣಕ್ಕೆ ಅತ್ತೆಯ ಮನೆಯಲ್ಲಿ ಎಲ್ಲರೂ ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿದ್ದಳು. ಮಹಿಳೆ ಹಾಗೂ ಇಬ್ಬರು ಪುತ್ರಿಯರು ಸಾವನ್ನಪ್ಪಿದ್ದು, ಅಮಾಯಕ ಮಗಳು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ.

ಭೋಪಾಲ್ ಜಿಲ್ಲೆಯ ಗುಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ರೋಡಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಜತ್ ಯಾದವ್ ಅವರ ಪತ್ನಿ 28 ವರ್ಷದ ಸಂಗೀತಾ ಯಾದವ್ ಅವರು ರೋಡಿಯಾ ಗ್ರಾಮದ ನಿವಾಸಿಯಾಗಿದ್ದರು. ಅವರು ತಮ್ಮ 5 ವರ್ಷದ ಮಗಳು ಆರಾಧ್ಯ ಮತ್ತು ಎರಡೂವರೆ ವರ್ಷದ ಸೃಷ್ಟಿಯನ್ನು ಕಳೆದುಕೊಂಡಿದ್ದಾರೆ. ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತಷ್ಟು ಓದಿ: ಬೆಂಗಳೂರು; ವಿಶೇಷ ಚೇತನಳನ್ನ ಮದುವೆ ಆಗುವುದಾಗಿ ನಂಬಿಸಿ ಹಣ ಪಡೆದು ವಂಚನೆ, ದೂರು ದಾಖಲು

ಸಂಗೀತಾ ಯಾದವ್ ತಡರಾತ್ರಿ ಅಣ್ಣನಿಗೆ ಸಂದೇಶ ಕಳುಹಿಸಿದ್ದು, ಅವರು ನಿದ್ರೆಯಲ್ಲಿದ್ದ ಕಾರಣ ನೋಡಿರಲಿಲ್ಲ. ಬೆಳಗ್ಗೆ ಎದ್ದು ಮೆಸೇಜ್ ನೋಡುವಷ್ಟರಲ್ಲಿ ಕಾಲ ಮಿಂಚಿತ್ತು.

ಮೆಸೇಜ್ ನೋಡಿದ ನೀರಜ್ ಸಹೋದರಿ ಸಂಗೀತಾ ಯಾದವ್ ಗೆ ಕರೆ ಮಾಡಿದರೂ ಫೋನ್ ರಿಸೀವ್ ಮಾಡಿರಲಿಲ್ಲ. ಇದಾದ ನಂತರ ಸಂಗೀತಾ ಅವರ ಸೋದರ ಮಾವನಿಗೆ ಕರೆ ಮಾಡಿದಾಗ ಅವರು ಸರಿಯಾದ ಉತ್ತರ ನೀಡಲಿಲ್ಲ. ಘಟನೆ ಸ್ಥಳದಲ್ಲಿ ಪತ್ರವೊಂದು ಸಿಕ್ಕಿದ್ದು ಅದರ ತನಿಖೆ ಮಾಡಲಾಗುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us