AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟಿಕ್ ಟ್ಯಾಂಕ್​​ನಲ್ಲಿದ್ದಿದ್ದು ಸಿಯಾಳ ಶವ, ಕೊಲೆ ಮಾಡಿದ್ದು ಆಕೆಯ ಪ್ರೇಮಿ, ಅಂತೂ ಪ್ರಕರಣ ಇತ್ಯರ್ಥ

ಭೋಪಾಲ್‌ನಲ್ಲಿ ವಿವಾಹಿತ ಪ್ರೇಮಿ ಸಮೀರ್ ತನ್ನ ಪ್ರೇಯಸಿ ಸಿಯಾಳನ್ನು ಹತ್ಯೆಗೈದು ಶವವನ್ನು ಸೆಪ್ಟಿಕ್ ಟ್ಯಾಂಕ್‌ಗೆ ಎಸೆದಿದ್ದಾನೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಿತರಾಗಿದ್ದ ಇವರಿಬ್ಬರ ಸಂಬಂಧ ಬ್ಲಾಕ್‌ಮೇಲ್ ಹಾಗೂ ಮದುವೆಗೆ ಒತ್ತಾಯದ ಕಾರಣ ಕೊಲೆಗೆ ತಿರುಗಿದೆ. ಸಮೀರ್ ತನ್ನ ಕುಟುಂಬ ಸದಸ್ಯರ ಸಹಾಯದಿಂದ ಸಿಯಾಳನ್ನು ಕತ್ತು ಹಿಸುಕಿ ಕೊಂದ ನಂತರ ಶವವನ್ನು ಕಬ್ಬಿಣದ ಪೆಟ್ಟಿಗೆಯಲ್ಲಿ ಹಾಕಿ ವಿಲೇವಾರಿ ಮಾಡಿದ್ದಾನೆ. ಮಕ್ಕಳು ದುರ್ವಾಸನೆ ಬಗ್ಗೆ ದೂರು ನೀಡಿದಾಗ ಶವ ಪತ್ತೆಯಾಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಸೆಪ್ಟಿಕ್ ಟ್ಯಾಂಕ್​​ನಲ್ಲಿದ್ದಿದ್ದು ಸಿಯಾಳ ಶವ, ಕೊಲೆ ಮಾಡಿದ್ದು ಆಕೆಯ ಪ್ರೇಮಿ, ಅಂತೂ ಪ್ರಕರಣ ಇತ್ಯರ್ಥ
ಸಿಯಾImage Credit source: NDTV
ನಯನಾ ರಾಜೀವ್
|

Updated on: Feb 15, 2026 | 11:16 AM

Share

ಭೋಪಾಲ್, ಫೆಬ್ರವರಿ 15:  ವಿವಾಹಿತ ಪ್ರೇಮಿಯೊಬ್ಬ ಪ್ರೇಯಸಿಯನ್ನು ಹತ್ಯೆ(Murder) ಮಾಡಿ ಸೆಪ್ಟಿಕ್ ಟ್ಯಾಂಕ್​​ಗೆ ಎಸೆದಿದ್ದ ಘಟನೆ ಭೋಪಾಲ್​​ನಲ್ಲಿ ನಡೆದಿದೆ. ಘಟನೆ ನಡೆದು 24 ಗಂಟೆಯೊಳಗೆ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್​ನಲ್ಲಿ ಯುವತಿಯ ಶವ ಪತ್ತೆಯಾಗಿತ್ತು. ಪ್ರೀತಿ, ದ್ರೋಹ, ಬ್ಲ್ಯಾಕ್​ಮೇಲ್ ಹಾಗೂ ಕೊಲೆ ಪ್ರಕರಣ ಬಹಿರಂಗಗೊಂಡಿದೆ.

ಮೃತ ಯುವತಿಯನ್ನು ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ನಿವಾಸಿ ಅಶ್ರಫಿ ಅಲಿಯಾಸ್ ಸಿಯಾ ಎಂದು ಗುರುತಿಸಲಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಸೋಮವಾರ ಸಿಯಾಳನ್ನು ಆಕೆಯ ವಿವಾಹಿತ ಪ್ರಿಯಕರ ಸಮೀರ್ ತನ್ನ ಕುಟುಂಬ ಸದಸ್ಯರ ಸಹಾಯದಿಂದ ಕತ್ತು ಹಿಸುಕಿ ಕೊಂದಿದ್ದಾನೆ. ಆಕೆಯ ಶವವನ್ನು ಕಬ್ಬಿಣದ ಪೆಟ್ಟಿಗೆಯಲ್ಲಿ ತುಂಬಿಸಿ, ಅಪರಾಧದ ಎಲ್ಲಾ ಕುರುಹುಗಳನ್ನು ಅಳಿಸಲು ಕಮಲಾ ನಗರದ ಅವರ ಮನೆಯ ಬಳಿಯ ಸೆಪ್ಟಿಕ್ ಟ್ಯಾಂಕ್‌ಗೆ ಎಸೆದಿದ್ದಾನೆ.

ಸುಮಾರು ಒಂದು ವರ್ಷದ ಹಿಂದೆ, ಸಿಯಾ ಮತ್ತು ಸಮೀರ್ ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದರು. ಚಾಟ್​ನಿಂದ ಪ್ರಾರಂಭವಾಗಿದದ ಸ್ನೇಹ ಪ್ರೀತಿಗೆ ಪ್ರೀತಿಗೆ ತಿರುಗಿತ್ತು. ಬಳಿಕ ಅವರಿಬ್ಬರ ನಡುವೆ ಸಂಬಂಧವೂ ಕೂಡ ಇತ್ತು. ಸಿಯಾ ಮಹಾರಾಷ್ಟ್ರದಲ್ಲಿರುವ ತನ್ನ ಮನೆಯನ್ನು ತೊರೆದು ಸಮೀರ್ ಜೊತೆ ವಾಸಿಸಲು ಸುಮಾರು ಮೂರು ತಿಂಗಳ ಹಿಂದೆ ಭೋಪಾಲ್‌ಗೆ ತೆರಳಿದರು. ತಾನು ಜೀವನದ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದೇನೆ ಎಂದು ಅವಳು ನಂಬಿದ್ದಳು.ಆದರೆ ಸಮೀರ್ ಈಗಾಗಲೇ ವಿವಾಹಿತನಾಗಿದ್ದು ಇಬ್ಬರು ಮಕ್ಕಳ ತಂದೆಯಾಗಿದ್ದ. ಸಿಯಾ ಕಮಲಾ ನಗರದ ತನ್ನ ಮನೆಯಲ್ಲಿ ವಾಸಿಸಲು ಪ್ರಾರಂಭಿಸುತ್ತಿದ್ದಂತೆ ನಿತ್ಯ ಜಗಳಗಳು ಶುರುವಾಗಿದ್ದವು.

ಮತ್ತಷ್ಟು ಓದಿ: ಸೆಪ್ಟಿಕ್ ಟ್ಯಾಂಕ್ ಒಳಗೆ ಕಬ್ಬಿಣದ ಟ್ರಂಕ್​ನಲ್ಲಿ ಮಹಿಳೆಯ ಶವ ಪತ್ತೆ

ಸಿಯಾ ಮತ್ತು ಸಮೀರ್ ಅವರ ಪತ್ನಿಯ ನಡುವೆ ಆಗಾಗ ಜಗಳಗಳು ನಡೆಯುತ್ತಿದ್ದವು.ಅದು ಅಕ್ಕಪಕ್ಕದ ಮನೆಯವರೆಗೂ ಹೋಗಿತ್ತು. ಸಮೀರ್ ಸಿಯಾ ಅವರಿಂದ ಹಲವಾರು ಸಂಗತಿಗಳನ್ನು ಮರೆಮಾಡಿದ್ದ ಮತ್ತು ಕೌಟುಂಬಿಕ ಅಶಾಂತಿ ಹೆಚ್ಚಾಗತೊಡಗಿತ್ತು.

ತನಿಖಾಧಿಕಾರಿಗಳು ಹೇಳುವಂತೆ ಸಿಯಾ ಸಮೀರ್ ಮೇಲೆ ತನ್ನನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದಳು. ಅವನು ನಿರಾಕರಿಸಿದರೆ 5 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಳು .ಕಾನೂನು ಕ್ರಮ ಜರುಗಿಸುವಂತೆ ಬೆದರಿಕೆ ಹಾಕಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸೋಮವಾರ ಸಂಜೆ, ಸಿಯಾ ಮತ್ತು ಸಮೀರ್ ನಡುವೆ ಮತ್ತೊಂದು ಬಿಸಿ ವಾಗ್ವಾದ ನಡೆಯಿತು. ಪೊಲೀಸರ ಪ್ರಕಾರ, ಕೋಪದ ಭರದಲ್ಲಿ ಸಮೀರ್ ಸಿಯಾಳನ್ನು ಕತ್ತು ಹಿಸುಕಿ ಕೊಂದಿದ್ದಾನೆ. ಸಾಕ್ಷ್ಯಗಳನ್ನು ನಾಶಮಾಡಲು ಸಮೀರ್ ತನ್ನ ಸಹೋದರ, ತಾಯಿ ಮತ್ತು ಸಹೋದರಿಯಿಂದ ಸಹಾಯ ಪಡೆದಿದ್ದ ಎನ್ನಲಾಗಿದೆ. ಮೃತದೇಹವನ್ನು ಕಬ್ಬಿಣದ ಪೆಟ್ಟಿಗೆಯಲ್ಲಿ ಮುಚ್ಚಿ ಸೋಮವಾರ ಮತ್ತು ಮಂಗಳವಾರದ ಮಧ್ಯರಾತ್ರಿಯ ನೆಪದಲ್ಲಿ ಅವರ ಮನೆಯ ಸಮೀಪವಿರುವ ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್‌ಗೆ ಎಸೆದಿದ್ದ.

ಗುರುವಾರ ಸಂಜೆ, ಹತ್ತಿರದಲ್ಲಿ ಆಟವಾಡುತ್ತಿದ್ದ ಮಕ್ಕಳು ಟ್ಯಾಂಕ್‌ನಿಂದ ಕೆಟ್ಟ ವಾಸನೆ ಬರುತ್ತಿದೆ ಎಂದು ದೂರು ನೀಡಿದ್ದರು. ಒಳಗೆ ಕಬ್ಬಿಣದ ಪೆಟ್ಟಿಗೆ ತೇಲುತ್ತಿರುವುದನ್ನು ನಿವಾಸಿಗಳು ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಅಧಿಕಾರಿಗಳು ಸ್ಥಳಕ್ಕೆ ತಲುಪಿ ಟ್ಯಾಂಕ್ ಅನ್ನು ಹುಡುಕಿದಾಗ, ಪೆಟ್ಟಿಗೆಯೊಳಗೆ ಸಿಯಾಳ ಕೊಳೆತ ದೇಹವು ಪತ್ತೆಯಾಗಿತ್ತು.

ಸಮೀರ್ ತಲೆಮರೆಸಿಕೊಂಡಿದ್ದರೂ, ಶವವನ್ನು ವಿಲೇವಾರಿ ಮಾಡಲು ಸಹಾಯ ಮಾಡಿದ ಆರೋಪದ ಮೇಲೆ ಪೊಲೀಸರು ಆತನ ಸಹೋದರ, ತಾಯಿ ಮತ್ತು ಸಹೋದರಿಯನ್ನು ಬಂಧಿಸಿದ್ದಾರೆ. ಸಮೀರ್ ಅವರ ಪತ್ನಿ ಕೂಡ ನಿಗಾದಲ್ಲಿದ್ದಾರೆ. ಅಪರಾಧದ ಬಗ್ಗೆ ಹೆಚ್ಚಿನ ಕುಟುಂಬ ಸದಸ್ಯರಿಗೆ ಮಾಹಿತಿ ಇದ್ದಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಸಿಯಾ ಮಹಾರಾಷ್ಟ್ರ ಮತ್ತು ರಾಜಸ್ಥಾನದಲ್ಲಿ ಮೂರು ಬಾರಿ ಮದುವೆಯಾಗಿದ್ದಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಕ್ಕಳು ಬೀಚ್​​ನಲ್ಲಿ ಆಟವಾಡುತ್ತಿದ್ದಾಗ ಬಂದೇ ಬಿಡ್ತು ಭಯಾನಕ ಅಲೆ
ಮಕ್ಕಳು ಬೀಚ್​​ನಲ್ಲಿ ಆಟವಾಡುತ್ತಿದ್ದಾಗ ಬಂದೇ ಬಿಡ್ತು ಭಯಾನಕ ಅಲೆ
ನಾಪತ್ತೆಯಾದ ಮಹಿಳೆ ಪರಪುರುಷನ ಜೊತೆ ಪತ್ತೆ: ಘಟನೆ ಬಿಚ್ಚಿಟ್ಟ ಮನೆ ಮಾಲೀಕ
ನಾಪತ್ತೆಯಾದ ಮಹಿಳೆ ಪರಪುರುಷನ ಜೊತೆ ಪತ್ತೆ: ಘಟನೆ ಬಿಚ್ಚಿಟ್ಟ ಮನೆ ಮಾಲೀಕ
ಆಂಧ್ರಪ್ರದೇಶದಲ್ಲಿ ಕಾರಿನ ಮೇಲೆ ಮಗುಚಿ ಬಿದ್ದ ಲಾರಿ, ಟೆಕ್ಕಿ ಸಾವು
ಆಂಧ್ರಪ್ರದೇಶದಲ್ಲಿ ಕಾರಿನ ಮೇಲೆ ಮಗುಚಿ ಬಿದ್ದ ಲಾರಿ, ಟೆಕ್ಕಿ ಸಾವು
ಬಸ್​​ಗೆ ಕಾರು ಗುದ್ದಿ ಐವರ ಸಾವು: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಬಸ್​​ಗೆ ಕಾರು ಗುದ್ದಿ ಐವರ ಸಾವು: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಮಹಾಶಿವರಾತ್ರಿ ಆಚರಣೆ ಯಾಕೆ ಮಾಡಬೇಕು? ಇಲ್ಲಿದೆ ಮಾಹಿತಿ
ಮಹಾಶಿವರಾತ್ರಿ ಆಚರಣೆ ಯಾಕೆ ಮಾಡಬೇಕು? ಇಲ್ಲಿದೆ ಮಾಹಿತಿ
ಈ ರಾಶಿಯವರಿಗೆ ಇಂದು ಸಿಗಲಿದೆ ಐದು ಗ್ರಹಗಳ ಶುಭ ಫಲ
ಈ ರಾಶಿಯವರಿಗೆ ಇಂದು ಸಿಗಲಿದೆ ಐದು ಗ್ರಹಗಳ ಶುಭ ಫಲ
ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ