AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೋಪಾಲ್ – ಉಜ್ಜೈನ್ ರೈಲು ಸ್ಫೋಟ, 7 ಅಪರಾಧಿಗಳಿಗೆ ಮರಣದಂಡನೆ; ಮೋದಿ ರ‍್ಯಾಲಿಯಲ್ಲಿಯೂ ಸ್ಫೋಟಕ್ಕೆ ಸಂಚು ಹೂಡಿದ್ದ ಉಗ್ರರು

ಅಪರಾಧಿಗಳು ಪ್ರಧಾನಿ ನರೇಂದ್ರ ಮೋದಿ ಅವರ ರ‍್ಯಾಲಿಯಲ್ಲಿಯೂ ಸ್ಫೋಟಕ್ಕೆ ಸಂಚು ಹೂಡಿದ್ದರು. ಸಿರಿಯಾ ಮತ್ತು ಇರಾಕ್​ಗೆ ಪಲಾಯನ ಮಾಡಲು ಯತ್ನಿಸಿದ್ದರು ಎನ್ನಲಾಗಿದೆ.

ಭೋಪಾಲ್ - ಉಜ್ಜೈನ್ ರೈಲು ಸ್ಫೋಟ, 7 ಅಪರಾಧಿಗಳಿಗೆ ಮರಣದಂಡನೆ; ಮೋದಿ ರ‍್ಯಾಲಿಯಲ್ಲಿಯೂ ಸ್ಫೋಟಕ್ಕೆ ಸಂಚು ಹೂಡಿದ್ದ ಉಗ್ರರು
ಎನ್​ಐಎ (ಸಾಂದರ್ಭಿಕ ಚಿತ್ರ)Image Credit source: prajavani.net
Ganapathi Sharma
|

Updated on:Feb 28, 2023 | 9:57 PM

Share

ನವದೆಹಲಿ: ಭೋಪಾಲ್ – ಉಜ್ಜೈನ್ ಪ್ಯಾಸೆಂಜರ್​​ ರೈಲಿನಲ್ಲಿ 2017ರಲ್ಲಿ ಬಾಂಬ್ ಸ್ಫೋಟಿಸಿದ್ದ ಪ್ರಕರಣದ (Bhopal-Ujjain passenger train blast case) 8 ಮಂದಿ ಅಪರಾಧಿಗಳ ಪೈಕಿ 7 ಮಂದಿಗೆ ಉತ್ತರ ಪ್ರದೇಶದ ಎನ್​​ಐಎ ನ್ಯಾಯಾಲಯ ಮರಣದಂಡನೆ ಶಿಕ್ಷೆ (Death Sentence) ವಿಧಿಸಿ ಮಂಗಳವಾರ ತೀರ್ಪು ನೀಡಿದೆ. ಮತ್ತೊಬ್ಬ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ. ಅಪರಾಧಿಗಳಾದ ಮೊಹಮ್ಮದ್ ಫೈಸಲ್, ಗೌಸ್ ಮೊಹಮ್ಮದ್, ಅಝರ್, ಆತಿಫ್​ ಮುಜಾಫರ್, ಡ್ಯಾನಿಶ್, ಮಿರ್ ಹುಸೇನ್ ಮತ್ತು ಆಸಕಿಫ್ ಇಕ್ಬಾಲ್​ಗೆ ಮರಣದಂಡನೆ ವಿಧಿಸಲಾಗಿದೆ. ಮತ್ತೊಬ್ಬ ಅಪರಾಧಿ ಆತಿಫ್​ ಇರಾಕಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ಅಪರಾಧಿಗಳು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ರ‍್ಯಾಲಿಯಲ್ಲಿಯೂ ಸ್ಫೋಟಕ್ಕೆ ಸಂಚು ಹೂಡಿದ್ದರು ಎನ್ನಲಾಗಿದೆ.

2017ರ ಮಾರ್ಚ್ 7ರಂದು ಭೋಪಾಲ್ – ಉಜ್ಜೈನ್ ಪ್ಯಾಸೆಂಜರ್​​ ರೈಲಿನಲ್ಲಿ ಬಾಂಬ್ ಸ್ಫೋಟ ಸಂಭವಿಸಿ 10 ಮಂದಿ ಗಾಯಗೊಂಡಿದ್ದರು. ಇಸ್ಲಾಮಿಕ್ ಸ್ಟೇಟ್​ ಬೆಂಬಲಿತ ಉಗ್ರರು ಭಾರತದಲ್ಲಿ ನಡೆಸಿದ ಮೊದಲ ದಾಳಿ ಇದು ಎನ್ನಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಶಂಕಿತ ಉಗ್ರರನ್ನು ಎನ್​ಕೌಂಟರ್​​ನಲ್ಲಿ ಹತ್ಯೆ ಮಾಡಲಾಗಿತ್ತು. ಉಳಿದವರನ್ನು ಬಂಧಿಸಲಾಗಿತ್ತು. ನಂತರ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಪ್ರಕರಣದ ತನಿಖೆ ಕೈಗೆತ್ತಿಕೊಂಡಿತ್ತು. ಉಗ್ರರು ಸ್ವಯಂಪ್ರೇರಿತರಾಗಿ ದಾಳಿ ನಡೆಸಿದ್ದಾರೆ, ಇಸ್ಲಾಮಿಕ್ ಸ್ಟೇಟ್​ನಿಂದ ಹಣಕಾಸು ನೆರವು ಪಡೆದಿಲ್ಲ ಎಂದು ತನಿಖಾಧಿಕಾರಿಗಳು ತಿಳಿಸಿದ್ದರು.

ಬಂಧಿತ ಉಗ್ರರು ಪ್ರಧಾನಿ ನರೇಂದ್ರ ಮೋದಿ ಅವರ ರ‍್ಯಾಲಿಯಲ್ಲಿಯೂ ಸ್ಫೋಟಕ್ಕೆ ಸಂಚು ಹೂಡಿದ್ದರು ಎಂದು ಎನ್​ಐಎ ನಂತರ ತಿಳಿಸಿತ್ತು. ಅಲ್ಲದೆ, ದಾಳಿಯಲ್ಲಿ ಶಾಮೀಲಾದ ಉಗ್ರರು ಸಿರಿಯಾ ಮತ್ತು ಇರಾಕ್​ಗೆ ಪಲಾಯನ ಮಾಡಲು ಯತ್ನಿಸಿದ್ದರು ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:56 pm, Tue, 28 February 23

ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​