AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೋಪಾಲ್ – ಉಜ್ಜೈನ್ ರೈಲು ಸ್ಫೋಟ, 7 ಅಪರಾಧಿಗಳಿಗೆ ಮರಣದಂಡನೆ; ಮೋದಿ ರ‍್ಯಾಲಿಯಲ್ಲಿಯೂ ಸ್ಫೋಟಕ್ಕೆ ಸಂಚು ಹೂಡಿದ್ದ ಉಗ್ರರು

ಅಪರಾಧಿಗಳು ಪ್ರಧಾನಿ ನರೇಂದ್ರ ಮೋದಿ ಅವರ ರ‍್ಯಾಲಿಯಲ್ಲಿಯೂ ಸ್ಫೋಟಕ್ಕೆ ಸಂಚು ಹೂಡಿದ್ದರು. ಸಿರಿಯಾ ಮತ್ತು ಇರಾಕ್​ಗೆ ಪಲಾಯನ ಮಾಡಲು ಯತ್ನಿಸಿದ್ದರು ಎನ್ನಲಾಗಿದೆ.

ಭೋಪಾಲ್ - ಉಜ್ಜೈನ್ ರೈಲು ಸ್ಫೋಟ, 7 ಅಪರಾಧಿಗಳಿಗೆ ಮರಣದಂಡನೆ; ಮೋದಿ ರ‍್ಯಾಲಿಯಲ್ಲಿಯೂ ಸ್ಫೋಟಕ್ಕೆ ಸಂಚು ಹೂಡಿದ್ದ ಉಗ್ರರು
ಎನ್​ಐಎ (ಸಾಂದರ್ಭಿಕ ಚಿತ್ರ)Image Credit source: prajavani.net
ಗಣಪತಿ ಶರ್ಮಾ
|

Updated on:Feb 28, 2023 | 9:57 PM

Share

ನವದೆಹಲಿ: ಭೋಪಾಲ್ – ಉಜ್ಜೈನ್ ಪ್ಯಾಸೆಂಜರ್​​ ರೈಲಿನಲ್ಲಿ 2017ರಲ್ಲಿ ಬಾಂಬ್ ಸ್ಫೋಟಿಸಿದ್ದ ಪ್ರಕರಣದ (Bhopal-Ujjain passenger train blast case) 8 ಮಂದಿ ಅಪರಾಧಿಗಳ ಪೈಕಿ 7 ಮಂದಿಗೆ ಉತ್ತರ ಪ್ರದೇಶದ ಎನ್​​ಐಎ ನ್ಯಾಯಾಲಯ ಮರಣದಂಡನೆ ಶಿಕ್ಷೆ (Death Sentence) ವಿಧಿಸಿ ಮಂಗಳವಾರ ತೀರ್ಪು ನೀಡಿದೆ. ಮತ್ತೊಬ್ಬ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ. ಅಪರಾಧಿಗಳಾದ ಮೊಹಮ್ಮದ್ ಫೈಸಲ್, ಗೌಸ್ ಮೊಹಮ್ಮದ್, ಅಝರ್, ಆತಿಫ್​ ಮುಜಾಫರ್, ಡ್ಯಾನಿಶ್, ಮಿರ್ ಹುಸೇನ್ ಮತ್ತು ಆಸಕಿಫ್ ಇಕ್ಬಾಲ್​ಗೆ ಮರಣದಂಡನೆ ವಿಧಿಸಲಾಗಿದೆ. ಮತ್ತೊಬ್ಬ ಅಪರಾಧಿ ಆತಿಫ್​ ಇರಾಕಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ. ಅಪರಾಧಿಗಳು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ರ‍್ಯಾಲಿಯಲ್ಲಿಯೂ ಸ್ಫೋಟಕ್ಕೆ ಸಂಚು ಹೂಡಿದ್ದರು ಎನ್ನಲಾಗಿದೆ.

2017ರ ಮಾರ್ಚ್ 7ರಂದು ಭೋಪಾಲ್ – ಉಜ್ಜೈನ್ ಪ್ಯಾಸೆಂಜರ್​​ ರೈಲಿನಲ್ಲಿ ಬಾಂಬ್ ಸ್ಫೋಟ ಸಂಭವಿಸಿ 10 ಮಂದಿ ಗಾಯಗೊಂಡಿದ್ದರು. ಇಸ್ಲಾಮಿಕ್ ಸ್ಟೇಟ್​ ಬೆಂಬಲಿತ ಉಗ್ರರು ಭಾರತದಲ್ಲಿ ನಡೆಸಿದ ಮೊದಲ ದಾಳಿ ಇದು ಎನ್ನಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಶಂಕಿತ ಉಗ್ರರನ್ನು ಎನ್​ಕೌಂಟರ್​​ನಲ್ಲಿ ಹತ್ಯೆ ಮಾಡಲಾಗಿತ್ತು. ಉಳಿದವರನ್ನು ಬಂಧಿಸಲಾಗಿತ್ತು. ನಂತರ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ಪ್ರಕರಣದ ತನಿಖೆ ಕೈಗೆತ್ತಿಕೊಂಡಿತ್ತು. ಉಗ್ರರು ಸ್ವಯಂಪ್ರೇರಿತರಾಗಿ ದಾಳಿ ನಡೆಸಿದ್ದಾರೆ, ಇಸ್ಲಾಮಿಕ್ ಸ್ಟೇಟ್​ನಿಂದ ಹಣಕಾಸು ನೆರವು ಪಡೆದಿಲ್ಲ ಎಂದು ತನಿಖಾಧಿಕಾರಿಗಳು ತಿಳಿಸಿದ್ದರು.

ಬಂಧಿತ ಉಗ್ರರು ಪ್ರಧಾನಿ ನರೇಂದ್ರ ಮೋದಿ ಅವರ ರ‍್ಯಾಲಿಯಲ್ಲಿಯೂ ಸ್ಫೋಟಕ್ಕೆ ಸಂಚು ಹೂಡಿದ್ದರು ಎಂದು ಎನ್​ಐಎ ನಂತರ ತಿಳಿಸಿತ್ತು. ಅಲ್ಲದೆ, ದಾಳಿಯಲ್ಲಿ ಶಾಮೀಲಾದ ಉಗ್ರರು ಸಿರಿಯಾ ಮತ್ತು ಇರಾಕ್​ಗೆ ಪಲಾಯನ ಮಾಡಲು ಯತ್ನಿಸಿದ್ದರು ಎಂದು ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:56 pm, Tue, 28 February 23

Follow Us
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್