AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ವರ್ಷಗಳಿಂದ ಗಂಡನ ಮನೆಯಲ್ಲಿ ಬಂಧಿಯಾಗಿದ್ದ ಮಹಿಳೆ ಆಸ್ಪತ್ರೆಯಲ್ಲಿ ಸಾವು

ಗಂಡನ ಮನೆಯಲ್ಲಿ ಕಳೆದ 16 ವರ್ಷಗಳಿಂದ ಬಂಧಿಯಾಗಿದ್ದ ಮಹಿಳೆ ಸಾವನ್ನಪ್ಪಿದ್ದಾರೆ, ಕಳೆದ ವಾರವಷ್ಟೇ ಆಕೆಯನ್ನು ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

16 ವರ್ಷಗಳಿಂದ ಗಂಡನ ಮನೆಯಲ್ಲಿ ಬಂಧಿಯಾಗಿದ್ದ ಮಹಿಳೆ ಆಸ್ಪತ್ರೆಯಲ್ಲಿ ಸಾವು
ಮಹಿಳೆ Image Credit source: Naidunia
ನಯನಾ ರಾಜೀವ್
|

Updated on: Oct 15, 2024 | 2:26 PM

Share

ಕಳೆದ 16 ವರ್ಷಗಳಿಂದ ಗಂಡನ ಮನೆಯಲ್ಲಿ ಬಂಧಿಯಾಗಿದ್ದ ಮಹಿಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಧ್ಯಪ್ರದೇಶದ ಭೋಪಾಲ್​ನಲ್ಲಿ ಘಟನೆ ನಡೆದಿದೆ, ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಅಕ್ಟೋಬರ್ 05 ರಂದು ಮಹಿಳೆಯ ತಂದೆಯ ದೂರಿನ ಮೇರೆಗೆ ಪೊಲೀಸರು ಅವರ ಮನೆಗೆ ತೆರಳಿ ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಮಹಿಳೆಯ ತಾಯಿಯ ಕಡೆಯವರು ಆಕೆಯ ಅತ್ತೆಯ ಮೇಲೆ ಕಿರುಕುಳದ ಆರೋಪ ಮಾಡಿದ್ದರು. 40 ನೇ ವಯಸ್ಸಿನಲ್ಲಿ, ಮಹಿಳೆಯ ತೂಕವು 25 ಕೆಜಿಗೆ ಇಳಿದಿತ್ತು. ಮಹಿಳೆ ನಡೆಯಲು ಸಾಧ್ಯವಾಗುತ್ತಿರಲಿಲ್ಲ ಮತ್ತು ಮಾತನಾಡಲು ಸಹ ಸಾಧ್ಯವಾಗಿರಲಿಲ್ಲ. ಮಹಿಳೆಯನ್ನು ಹಗ್ಗದಿಂದ ಕಟ್ಟಿ ಹಾಕಲಾಗಿತ್ತು.

ರಕ್ಷಣೆಯ ಸಮಯದಲ್ಲಿ, ಮಹಿಳೆಯನ್ನು ಎತ್ತಿಕೊಂಡು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಮಹಿಳೆಯ ಪತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಮಂಗಳವಾರ ಹಮೀದಿಯಾ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ತಂಡ ಮಹಿಳೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸುತ್ತಿದೆ. ಮಹಿಳೆಯ ತಾಯಿಯ ಮನೆಯವರೂ ಭೋಪಾಲ್‌ನಲ್ಲಿದ್ದಾರೆ.

ಮತ್ತಷ್ಟು ಓದಿ:16 ವರ್ಷಗಳಿಂದ ಗಂಡನ ಮನೆಯಲ್ಲಿ ಬಂಧಿಯಾಗಿದ್ದ ಮಹಿಳೆಯ ರಕ್ಷಣೆ

ಅತ್ತೆಯ ಮನೆಯಲ್ಲಿ ತನ್ನ ಮಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಹಿಳೆ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಅತ್ತೆಯ ಮನೆಯಿಂದ ರಕ್ಷಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಹಾಗೂ ಆಕೆಯ ಅತ್ತೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದರು.

ಪ್ರಕರಣದ ದೂರನ್ನು ಸ್ವೀಕರಿಸಿದ ಮಹಿಳಾ ಠಾಣಾ ಪೊಲೀಸರು ಜಹಾಂಗೀರಾಬಾದ್ ಪೊಲೀಸ್ ಸಿಬ್ಬಂದಿಯ ಸಹಾಯದಿಂದ ರಾನು ಸಾಹುಳನ್ನು ಆಕೆಯ ಅತ್ತೆಯ ಮನೆಯಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, 9 ದಿನಗಳ ಚಿಕಿತ್ಸೆ ನಂತರ ಸಾವನ್ನಪ್ಪಿದ್ದಾರೆ.

ಈ ಪ್ರಕರಣದ ತನಿಖೆಯ ಹೊಣೆಯನ್ನು ಪೊಲೀಸರ ವಿಶೇಷ ತಂಡಕ್ಕೆ ವಹಿಸಲಾಗಿದೆ. ಮಹಿಳೆಯ ವೈದ್ಯಕೀಯ ಪರೀಕ್ಷೆ ವರದಿ ಹಾಗೂ ಸಂಬಂಧಿಕರ ಹೇಳಿಕೆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸದ್ಯ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ