AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ವರ್ಷಗಳಿಂದ ಗಂಡನ ಮನೆಯಲ್ಲಿ ಬಂಧಿಯಾಗಿದ್ದ ಮಹಿಳೆ ಆಸ್ಪತ್ರೆಯಲ್ಲಿ ಸಾವು

ಗಂಡನ ಮನೆಯಲ್ಲಿ ಕಳೆದ 16 ವರ್ಷಗಳಿಂದ ಬಂಧಿಯಾಗಿದ್ದ ಮಹಿಳೆ ಸಾವನ್ನಪ್ಪಿದ್ದಾರೆ, ಕಳೆದ ವಾರವಷ್ಟೇ ಆಕೆಯನ್ನು ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

16 ವರ್ಷಗಳಿಂದ ಗಂಡನ ಮನೆಯಲ್ಲಿ ಬಂಧಿಯಾಗಿದ್ದ ಮಹಿಳೆ ಆಸ್ಪತ್ರೆಯಲ್ಲಿ ಸಾವು
ಮಹಿಳೆ Image Credit source: Naidunia
ನಯನಾ ರಾಜೀವ್
|

Updated on: Oct 15, 2024 | 2:26 PM

Share

ಕಳೆದ 16 ವರ್ಷಗಳಿಂದ ಗಂಡನ ಮನೆಯಲ್ಲಿ ಬಂಧಿಯಾಗಿದ್ದ ಮಹಿಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಧ್ಯಪ್ರದೇಶದ ಭೋಪಾಲ್​ನಲ್ಲಿ ಘಟನೆ ನಡೆದಿದೆ, ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಅಕ್ಟೋಬರ್ 05 ರಂದು ಮಹಿಳೆಯ ತಂದೆಯ ದೂರಿನ ಮೇರೆಗೆ ಪೊಲೀಸರು ಅವರ ಮನೆಗೆ ತೆರಳಿ ಆಕೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಮಹಿಳೆಯ ತಾಯಿಯ ಕಡೆಯವರು ಆಕೆಯ ಅತ್ತೆಯ ಮೇಲೆ ಕಿರುಕುಳದ ಆರೋಪ ಮಾಡಿದ್ದರು. 40 ನೇ ವಯಸ್ಸಿನಲ್ಲಿ, ಮಹಿಳೆಯ ತೂಕವು 25 ಕೆಜಿಗೆ ಇಳಿದಿತ್ತು. ಮಹಿಳೆ ನಡೆಯಲು ಸಾಧ್ಯವಾಗುತ್ತಿರಲಿಲ್ಲ ಮತ್ತು ಮಾತನಾಡಲು ಸಹ ಸಾಧ್ಯವಾಗಿರಲಿಲ್ಲ. ಮಹಿಳೆಯನ್ನು ಹಗ್ಗದಿಂದ ಕಟ್ಟಿ ಹಾಕಲಾಗಿತ್ತು.

ರಕ್ಷಣೆಯ ಸಮಯದಲ್ಲಿ, ಮಹಿಳೆಯನ್ನು ಎತ್ತಿಕೊಂಡು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಮಹಿಳೆಯ ಪತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಮಂಗಳವಾರ ಹಮೀದಿಯಾ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ತಂಡ ಮಹಿಳೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸುತ್ತಿದೆ. ಮಹಿಳೆಯ ತಾಯಿಯ ಮನೆಯವರೂ ಭೋಪಾಲ್‌ನಲ್ಲಿದ್ದಾರೆ.

ಮತ್ತಷ್ಟು ಓದಿ:16 ವರ್ಷಗಳಿಂದ ಗಂಡನ ಮನೆಯಲ್ಲಿ ಬಂಧಿಯಾಗಿದ್ದ ಮಹಿಳೆಯ ರಕ್ಷಣೆ

ಅತ್ತೆಯ ಮನೆಯಲ್ಲಿ ತನ್ನ ಮಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಮಹಿಳೆ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಅತ್ತೆಯ ಮನೆಯಿಂದ ರಕ್ಷಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಹಾಗೂ ಆಕೆಯ ಅತ್ತೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದರು.

ಪ್ರಕರಣದ ದೂರನ್ನು ಸ್ವೀಕರಿಸಿದ ಮಹಿಳಾ ಠಾಣಾ ಪೊಲೀಸರು ಜಹಾಂಗೀರಾಬಾದ್ ಪೊಲೀಸ್ ಸಿಬ್ಬಂದಿಯ ಸಹಾಯದಿಂದ ರಾನು ಸಾಹುಳನ್ನು ಆಕೆಯ ಅತ್ತೆಯ ಮನೆಯಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, 9 ದಿನಗಳ ಚಿಕಿತ್ಸೆ ನಂತರ ಸಾವನ್ನಪ್ಪಿದ್ದಾರೆ.

ಈ ಪ್ರಕರಣದ ತನಿಖೆಯ ಹೊಣೆಯನ್ನು ಪೊಲೀಸರ ವಿಶೇಷ ತಂಡಕ್ಕೆ ವಹಿಸಲಾಗಿದೆ. ಮಹಿಳೆಯ ವೈದ್ಯಕೀಯ ಪರೀಕ್ಷೆ ವರದಿ ಹಾಗೂ ಸಂಬಂಧಿಕರ ಹೇಳಿಕೆ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸದ್ಯ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ