AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭುವನೇಶ್ವರ: ಬೈಕ್​ಗೆ ಡಿಕ್ಕಿ ಹೊಡೆದು ಒಂದು ಕಿ.ಮೀವರೆಗೆ ಎಳೆದೊಯ್ದ ಕಾರು, ಎದೆ ಝಲ್ಲೆನಿಸುವ ವಿಡಿಯೋ

ಭುವನೇಶ್ವರದ ಜನನಿಬಿಡ ಪ್ರದೇಶದಲ್ಲಿ ನಡೆದ ಅಪಘಾತವೊಂದು ಎದೆ ಝಲ್ಲೆನಿಸುವಂತಿತ್ತು. ಕಾರೊಂದು ವೇಗವಾಗಿ ಬಂದು ಬೈಕ್​ ಒಂದಕ್ಕೆ ಡಿಕ್ಕಿ ಹೊಡೆದು ಸುಮಾರು ಒಂದು ಕಿಲೋಮೀಟರ್​ವರೆಗೆ ಎಳೆದೊಯ್ದಿತ್ತು. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಆದರೆ ಬೈಕ್ ಸವಾರನ ಪರಿಸ್ಥಿತಿ ಏನಾಗಿದೆ ಎಂಬುದರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಭುವನೇಶ್ವರ: ಬೈಕ್​ಗೆ ಡಿಕ್ಕಿ ಹೊಡೆದು ಒಂದು ಕಿ.ಮೀವರೆಗೆ ಎಳೆದೊಯ್ದ ಕಾರು, ಎದೆ ಝಲ್ಲೆನಿಸುವ ವಿಡಿಯೋ
ಅಪಘಾತ
ನಯನಾ ರಾಜೀವ್
|

Updated on: Feb 02, 2024 | 11:24 AM

Share

ವೇಗವಾಗಿ ಬಂದ ಕಾರೊಂದು ಬೈಕ್​ಗೆ ಡಿಕ್ಕಿ ಹೊಡೆದು ಒಂದು ಕಿ.ಮೀ ಎಳೆದೊಯ್ದಿರುವ ಘಟನೆ ಭುವನೇಶ್ವರದಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನವರಿ 31ರ ರಾತ್ರಿ ನಡೆದ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಸುಮಾರು ಒಂದು ಕಿಲೋಮೀಟರ್ ದೂರ ಬೈಕ್ ಅನ್ನು ಎಳೆದುಕೊಂಡು ಹೋಗುತ್ತಿದ್ದಾಗ ಕಾರಿನ ಕೆಳಗಡೆ ಬೆಂಕಿ ಕಿಡಿಗಳು ಹೊರಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಆ ಘಟನೆ ನೋಡಿದರೆ ಬೈಕ್​ ಸವಾರ ಬದುಕುಳಿದಂತೆ ಕಾಣುತ್ತಿಲ್ಲ, ಬೈಕ್ ಸವಾರನ ಮೇಲೆ ಹಳೆಯ ವೈಷಮ್ಯ ಏನಾದರೂ ಇತ್ತೇ, ಅಥವಾ ಕಾರು ಚಾಲಕ ಮದ್ಯದ ನಶೆಯಲ್ಲಿದ್ದನೇ ಎನ್ನುವ ಪ್ರಶ್ನೆ ಕಾಡುತ್ತಿದೆ. ಕಾರು ಬೈಕ್​ಗೆ ಡಿಕ್ಕಿಯಾದಾಗ ನಿಲ್ಲಿಸುವುದು ಬಿಟ್ಟು ಕಿಲೋಮೀಟರ್​ಗಳಷ್ಟು ದೂರ ಏಕೆ ಎಳೆದುಕೊಂಡು ಹೋಗಿದ್ದಾರೆ ಎನ್ನುವ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹಿಟ್​ ಆ್ಯಂಡ್​ ರನ್ ಪ್ರಕರಣಗಳು ಹೆಚ್ಚಾಗುತ್ತಿವೆ. ದೆಹಲಿಯಲ್ಲಿ ಕಳೆದ ವರ್ಷ ನ್ಯೂ ಇಯರ್ ಸಂದರ್ಭದಲ್ಲಿ ಸ್ಕೂಟಿಗೆ ಕಾರೊಂದು ಡಿಕ್ಕಿ ಹೊಡೆದು ಯುವತಿಯೊನ್ನು ಕಿಲೋಮೀಟರ್​ಗಳವರೆಗೆ ಎಳೆದೊಯ್ದ ಘಟನೆಯೂ ನಡೆದಿತ್ತು.

ಮತ್ತಷ್ಟು ಓದಿ: ಹಿಟ್​​​ ಆ್ಯಂಡ್​​​​ ರನ್ ಪ್ರಕರಣ: ವ್ಯಕ್ತಿಯೊಬ್ಬರನ್ನು ಬಾನೆಟ್‌ ಮೇಲೆ ಎಳೆದೊಯ್ದ ಟಿಟಿ ಚಾಲಕ

ಮತ್ತೊಂದು ಘಟನೆ ಡಿಕ್ಕಿ ಹೊಡೆದು ವ್ಯಕ್ತಿಯನ್ನು ಹಲವು ಮೀಟರ್ ದೂರ ಎಳೆದೊಯ್ದ ಕಾರು ಚಾಲಕ ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಪ್ರಕರಣ ಒಂದು ವಾರದ ಹಿಂದಷ್ಟೇ ನಡೆದಿದೆ. ಡಿಕ್ಕಿಯ ರಭಸಕ್ಕೆ ಬ್ಯಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಕಾರು ಚಾಲಕ ಹಲವು ಮೀಟರ್​ಗಳಷ್ಟು ದೂರಕ್ಕೆ ಎಳೆದೊಯ್ದ ಘಟನೆ ಬೆಂಗಳೂರು ನಗರದ ಮಲ್ಲೇಶ್ವರಂ ಬಳಿ ನಡೆದಿದೆ. ಘಟನೆಯ ದೃಶ್ಯವಾಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗುತ್ತಿದೆ.

ಮಲ್ಲೇಶ್ವರಂನ ಮಾರಮ್ಮ ದೇವಸ್ಥಾನದ ವೃತ್ತದಲ್ಲಿ ಜನವರಿ 15 ರಂದು ನಡೆದ ಘಟನೆ ಇದಾಗಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಬೆಚ್ಚಿಬೀಳಿಸುವ ದೃಶ್ಯಾವಳಿಗಳು ಸೆರೆಯಾಗಿವೆ. ಕಾರಿನ ಬಾನೆಟ್‌ ಮೇಲೆ ಬಿದ್ದ ವ್ಯಕ್ತಿಯನ್ನು ಕಾರು ಚಾಲಕ ಹಲವು ಮೀಟರ್​ಗಳಷ್ಟು ದೂರಕ್ಕೆ ಕೊಂಡೊಯ್ಯವುದನ್ನು ವಿಡಿಯೋದಲ್ಲಿ ಕಾಣಬಹುದು. ಅಲ್ಲದೆ, ಇತರ ವಾಹನಗಳು ಮತ್ತು ಮತ್ತಿಬ್ಬರು ವ್ಯಕ್ತಿಗಳು ಕ್ಯಾಬ್ ಅನ್ನು ಬೆನ್ನಟ್ಟುತ್ತಿರುವುದನ್ನು ನೋಡಬಹುದು.

ಭುವನೇಶ್ವರ ಅಪಘಾತದ ವಿಡಿಯೋ

ಬೆಂಗಳೂರು ನಗರದಲ್ಲಿ ಈ ಹಿಂದೆ ಅನೇಕ ಹಿಟ್​ ಆ್ಯಂಡ್ ರನ್​ ಪ್ರಕರಣಗಳು ನಡೆದಿವೆ. ಘಟನೆಯಲ್ಲಿ ಕೆಲವರು ಸಾವನ್ನಪ್ಪಿದ್ದು, ಇನ್ನೂ ಕೆಲವರು ಗಾಯಗೊಂಡಿದ್ದಾರೆ. ಈ ಘಟನೆಯಲ್ಲೂ ವ್ಯಕ್ತಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಇಂತಹ ಹಿಟ್ ಆ್ಯಂಡ್ ರನ್​ ಪ್ರಕರಣಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರವು ಮಹತ್ವದ ಕಾಯ್ದೆ ಜಾರಿಗೊಳಿಸಲು ಮುಂದಾಗಿತ್ತು.

ಈ ಕಾಯ್ದೆಯಲ್ಲಿ ಶಿಕ್ಷೆಯ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಘಟನೆಯಲ್ಲಿ ಯಾರಾದರು ಮೃತಪಟ್ಟರೆ ಎರಡು ವರ್ಷಗಳ ಕಾಲ ಶಿಕ್ಷೆ ವಿಧಿಸುವ ಅವಕಾಶ ಈಗಾಗಲೇ ಇದೆ. ಹೊಸ ಕಾಯ್ದೆಯಲ್ಲಿ 10 ವರ್ಷ ಜೈಲು ಶಿಕ್ಷೆ ಸೇರಿದಂತೆ 7 ಲಕ್ಷದವರೆಗೆ ದಂಡ ವಿಧಿಸುವ ಪ್ರಸ್ತಾಪ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ