Bhuj Earthquake 2001: ಕುಟುಂಬದವರೆಲ್ಲಾ ಪ್ರಾಣ ಬಿಟ್ಟಿದ್ದ ಕಾಂಕ್ರೀಟ್​ ರಾಶಿಗಳ ನಡುವಿಂದ ಪವಾಡವೆಂಬಂತೆ ಬದುಕಿ ಬಂದಿದ್ದ 8 ತಿಂಗಳ ಮಗುವಿಗೀಗ ನಿಶ್ಚಿತಾರ್ಥ

Bhuj Earthquake 2001: 22 ವರ್ಷಗಳ ಹಿಂದೆ ಭುಜ್​ನಲ್ಲಿ ಸಂಭವಿಸಿದ್ದ ಭಾರಿ ಭೂಕಂಪ(Earthquake)ದಲ್ಲಿ ಅವಶೇಷಗಳಡಿ ಸಿಲುಕಿದವರು ಎಲ್ಲರೂ ಮೃತಪಟ್ಟಿದ್ದಾರೆ ಎಂದುಕೊಳ್ಳುತ್ತಿರುವ ಹೊತ್ತಿಗೆ ಉಸಿರು ಬಿಗಿ ಹಿಡಿದು ಬದುಕಿ ಬಂದಿದ್ದ 8 ತಿಂಗಳ ಮಗುವಿಗೀಗ ನಿಶ್ಚಿತಾರ್ಥ.

Bhuj Earthquake 2001: ಕುಟುಂಬದವರೆಲ್ಲಾ ಪ್ರಾಣ ಬಿಟ್ಟಿದ್ದ ಕಾಂಕ್ರೀಟ್​ ರಾಶಿಗಳ ನಡುವಿಂದ ಪವಾಡವೆಂಬಂತೆ ಬದುಕಿ ಬಂದಿದ್ದ 8 ತಿಂಗಳ ಮಗುವಿಗೀಗ ನಿಶ್ಚಿತಾರ್ಥ
ಭೂಕಂಪ
Follow us
|

Updated on:May 03, 2023 | 1:03 PM

22 ವರ್ಷಗಳ ಹಿಂದೆ ಭುಜ್​ನಲ್ಲಿ ಸಂಭವಿಸಿದ್ದ ಭಾರಿ ಭೂಕಂಪ(Earthquake)ದಲ್ಲಿ ಅವಶೇಷಗಳಡಿ ಸಿಲುಕಿದವರು ಎಲ್ಲರೂ ಮೃತಪಟ್ಟಿದ್ದಾರೆ ಎಂದುಕೊಳ್ಳುತ್ತಿರುವ ಹೊತ್ತಿಗೆ ಉಸಿರು ಬಿಗಿ ಹಿಡಿದು ಬದುಕಿ ಬಂದಿದ್ದ 8 ತಿಂಗಳ ಮಗುವಿಗೀಗ ನಿಶ್ಚಿತಾರ್ಥ. ಗುಜರಾತ್​ನ ಭುಜ್​ನಲ್ಲಿ ಸಂಭವಿಸಿದ ಭೂಕಂಪದಲ್ಲಿ 13 ಮಂದಿ ಮೃತಪಟ್ಟಿದ್ದರು. ಭೂಕಂಪ ಸಂಭವಿಸಿ ನಾಲ್ಕು ದಿನಗಳ ಕಳೆದ ಬಳಿಕ ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ನಡೆಯುತ್ತಿತ್ತು, ಆ ಸಂದರ್ಭದಲ್ಲಿ ಮಗುವಿನ ಅಳು ಕೇಳಿಸಿತ್ತು. ಎಂಟು ತಿಂಗಳ ಮಗು ಕಾಂಕ್ರೀಟ್​ ರಾಶಿಗಳ ಅಡಿಯಿಂದ ಜೀವಂತವಾಗಿ ಬದುಕಿಬಂದಿತ್ತು.

ಈಗ ಅವರಿಗೆ 22 ವರ್ಷ, ಹೆಸರು ಮುರ್ತಾಜಾ ಅಲಿ ವೆಜ್ಲಾನಿ, ಮುರ್ತಾಜಾ ಈಗ ತನ್ನ ಜೀವನದ ಹೊಸ ಅಧ್ಯಾಯವನ್ನು ಪ್ರಾರಂಭಿಸಲಿದ್ದಾರೆ. ವಾಸ್ತವವಾಗಿ, ಕಳೆದ ವಾರ, ಮುರ್ತಾಜಾ ರಾಜ್‌ಕೋಟ್‌ನ ಹುಡುಗಿಯೊಂದಿಗೆ ಭುಜ್‌ನ ಮಸೀದಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು.

ಮತ್ತಷ್ಟು ಓದಿ: New Zealand Earthquake: ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ 6.1 ತೀವ್ರತೆಯ ಭೂಕಂಪ

ಜನವರಿ 26 ರಂದು ಭುಜ್‌ನಲ್ಲಿ 7.6 ತೀವ್ರತೆಯ ಭೂಕಂಪ ಸಂಭವಿಸಿದಾಗ, ವೆಜ್ಲಾನಿ ಕುಟುಂಬದ ಮೂರು ಅಂತಸ್ತಿನ ಮನೆಯು ಭೂಕಂಪದಲ್ಲಿ ನೆಲಸಮವಾಗಿತ್ತು. ಈ ಭೂಕಂಪದಲ್ಲಿ ಮುರ್ತಾಜಾ ಅವರ ಇಡೀ ಕುಟುಂಬ ಪ್ರಾಣ ಕಳೆದುಕೊಂಡಿದೆ. ಅವರ ಅಜ್ಜ, ಪೋಷಕರು, ಚಿಕ್ಕಪ್ಪ ಮತ್ತು ಚಿಕ್ಕಮ್ಮ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು ಸೇರಿದಂತೆ ಎಂಟು ಕುಟುಂಬ ಸದಸ್ಯರು ಸಾವನ್ನಪ್ಪಿದ್ದರು.

ಆ ಸಮಯದಲ್ಲಿ ಮುರ್ತಾಜಾ ಅವರ ಅಜ್ಜಿ ಮೊರ್ಬಿಯಲ್ಲಿರುವ ತನ್ನ ತಾಯಿಯ ಮನೆಗೆ ಹೋಗಿದ್ದರು , ಆದ್ದರಿಂದ ಅವರ ಪ್ರಾಣ ಉಳಿದಿತ್ತು. ಮುರ್ತಾಜಾ ಅವರ ತಾಯಿ ಜೈನಾಬ್ ಅವರ ತೋಳುಗಳಿಂದ ಮಗುವನ್ನು ಬೇರ್ಪಡಿಸಲಾಗಿತ್ತು. ಮುರ್ತಜಾ ಅವರ ಚಿಕ್ಕಮ್ಮ ನಸೀಫಾ ಹಾಗೂ ಅವರ ಪತಿ ಜಾಹಿದ್ ಸಲಹಿದ್ದರು. ಇದೀಗ ಮುರ್ತಜಾ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Wed, 3 May 23

ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು