AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhuj Earthquake 2001: ಕುಟುಂಬದವರೆಲ್ಲಾ ಪ್ರಾಣ ಬಿಟ್ಟಿದ್ದ ಕಾಂಕ್ರೀಟ್​ ರಾಶಿಗಳ ನಡುವಿಂದ ಪವಾಡವೆಂಬಂತೆ ಬದುಕಿ ಬಂದಿದ್ದ 8 ತಿಂಗಳ ಮಗುವಿಗೀಗ ನಿಶ್ಚಿತಾರ್ಥ

Bhuj Earthquake 2001: 22 ವರ್ಷಗಳ ಹಿಂದೆ ಭುಜ್​ನಲ್ಲಿ ಸಂಭವಿಸಿದ್ದ ಭಾರಿ ಭೂಕಂಪ(Earthquake)ದಲ್ಲಿ ಅವಶೇಷಗಳಡಿ ಸಿಲುಕಿದವರು ಎಲ್ಲರೂ ಮೃತಪಟ್ಟಿದ್ದಾರೆ ಎಂದುಕೊಳ್ಳುತ್ತಿರುವ ಹೊತ್ತಿಗೆ ಉಸಿರು ಬಿಗಿ ಹಿಡಿದು ಬದುಕಿ ಬಂದಿದ್ದ 8 ತಿಂಗಳ ಮಗುವಿಗೀಗ ನಿಶ್ಚಿತಾರ್ಥ.

Bhuj Earthquake 2001: ಕುಟುಂಬದವರೆಲ್ಲಾ ಪ್ರಾಣ ಬಿಟ್ಟಿದ್ದ ಕಾಂಕ್ರೀಟ್​ ರಾಶಿಗಳ ನಡುವಿಂದ ಪವಾಡವೆಂಬಂತೆ ಬದುಕಿ ಬಂದಿದ್ದ 8 ತಿಂಗಳ ಮಗುವಿಗೀಗ ನಿಶ್ಚಿತಾರ್ಥ
ಭೂಕಂಪ
ನಯನಾ ರಾಜೀವ್
|

Updated on:May 03, 2023 | 1:03 PM

Share

22 ವರ್ಷಗಳ ಹಿಂದೆ ಭುಜ್​ನಲ್ಲಿ ಸಂಭವಿಸಿದ್ದ ಭಾರಿ ಭೂಕಂಪ(Earthquake)ದಲ್ಲಿ ಅವಶೇಷಗಳಡಿ ಸಿಲುಕಿದವರು ಎಲ್ಲರೂ ಮೃತಪಟ್ಟಿದ್ದಾರೆ ಎಂದುಕೊಳ್ಳುತ್ತಿರುವ ಹೊತ್ತಿಗೆ ಉಸಿರು ಬಿಗಿ ಹಿಡಿದು ಬದುಕಿ ಬಂದಿದ್ದ 8 ತಿಂಗಳ ಮಗುವಿಗೀಗ ನಿಶ್ಚಿತಾರ್ಥ. ಗುಜರಾತ್​ನ ಭುಜ್​ನಲ್ಲಿ ಸಂಭವಿಸಿದ ಭೂಕಂಪದಲ್ಲಿ 13 ಮಂದಿ ಮೃತಪಟ್ಟಿದ್ದರು. ಭೂಕಂಪ ಸಂಭವಿಸಿ ನಾಲ್ಕು ದಿನಗಳ ಕಳೆದ ಬಳಿಕ ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ನಡೆಯುತ್ತಿತ್ತು, ಆ ಸಂದರ್ಭದಲ್ಲಿ ಮಗುವಿನ ಅಳು ಕೇಳಿಸಿತ್ತು. ಎಂಟು ತಿಂಗಳ ಮಗು ಕಾಂಕ್ರೀಟ್​ ರಾಶಿಗಳ ಅಡಿಯಿಂದ ಜೀವಂತವಾಗಿ ಬದುಕಿಬಂದಿತ್ತು.

ಈಗ ಅವರಿಗೆ 22 ವರ್ಷ, ಹೆಸರು ಮುರ್ತಾಜಾ ಅಲಿ ವೆಜ್ಲಾನಿ, ಮುರ್ತಾಜಾ ಈಗ ತನ್ನ ಜೀವನದ ಹೊಸ ಅಧ್ಯಾಯವನ್ನು ಪ್ರಾರಂಭಿಸಲಿದ್ದಾರೆ. ವಾಸ್ತವವಾಗಿ, ಕಳೆದ ವಾರ, ಮುರ್ತಾಜಾ ರಾಜ್‌ಕೋಟ್‌ನ ಹುಡುಗಿಯೊಂದಿಗೆ ಭುಜ್‌ನ ಮಸೀದಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು.

ಮತ್ತಷ್ಟು ಓದಿ: New Zealand Earthquake: ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ 6.1 ತೀವ್ರತೆಯ ಭೂಕಂಪ

ಜನವರಿ 26 ರಂದು ಭುಜ್‌ನಲ್ಲಿ 7.6 ತೀವ್ರತೆಯ ಭೂಕಂಪ ಸಂಭವಿಸಿದಾಗ, ವೆಜ್ಲಾನಿ ಕುಟುಂಬದ ಮೂರು ಅಂತಸ್ತಿನ ಮನೆಯು ಭೂಕಂಪದಲ್ಲಿ ನೆಲಸಮವಾಗಿತ್ತು. ಈ ಭೂಕಂಪದಲ್ಲಿ ಮುರ್ತಾಜಾ ಅವರ ಇಡೀ ಕುಟುಂಬ ಪ್ರಾಣ ಕಳೆದುಕೊಂಡಿದೆ. ಅವರ ಅಜ್ಜ, ಪೋಷಕರು, ಚಿಕ್ಕಪ್ಪ ಮತ್ತು ಚಿಕ್ಕಮ್ಮ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು ಸೇರಿದಂತೆ ಎಂಟು ಕುಟುಂಬ ಸದಸ್ಯರು ಸಾವನ್ನಪ್ಪಿದ್ದರು.

ಆ ಸಮಯದಲ್ಲಿ ಮುರ್ತಾಜಾ ಅವರ ಅಜ್ಜಿ ಮೊರ್ಬಿಯಲ್ಲಿರುವ ತನ್ನ ತಾಯಿಯ ಮನೆಗೆ ಹೋಗಿದ್ದರು , ಆದ್ದರಿಂದ ಅವರ ಪ್ರಾಣ ಉಳಿದಿತ್ತು. ಮುರ್ತಾಜಾ ಅವರ ತಾಯಿ ಜೈನಾಬ್ ಅವರ ತೋಳುಗಳಿಂದ ಮಗುವನ್ನು ಬೇರ್ಪಡಿಸಲಾಗಿತ್ತು. ಮುರ್ತಜಾ ಅವರ ಚಿಕ್ಕಮ್ಮ ನಸೀಫಾ ಹಾಗೂ ಅವರ ಪತಿ ಜಾಹಿದ್ ಸಲಹಿದ್ದರು. ಇದೀಗ ಮುರ್ತಜಾ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:45 pm, Wed, 3 May 23

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು