AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಕೋರ್ಟ್ ರಚಿಸಿದ ಸಮಿತಿಯ ಸದಸ್ಯತ್ವ ನಿರಾಕರಿಸಿದ ಭೂಪೇಂದರ್ ಸಿಂಗ್ ಮನ್

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಡಿಸೆಂಬರ್ ನಲ್ಲಿ ರಚಿಸಿದ್ದ ಕೃಷಿ ಕಾಯ್ದೆ ಪರ ಸಮಿತಿಯಲ್ಲಿ ಭೂಪೇಂದರ್ ಸಿಂಗ್ ಮನ್ ಅವರು ಸಹ ಸದಸ್ಯರಾಗಿದ್ದರು. ಹೀಗಾಗಿ, ಭೂಪೇಂದರ್ ಸಿಂಗ್ ಮನ್ ಅವರನ್ನೂ ಸೇರಿ ಸಮಿತಿ ಸದಸ್ಯರ ಬಗ್ಗೆ ರೈತ ಒಕ್ಕೂಟಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಈ ಬೆನ್ನಲ್ಲೇ ಭೂಪೇಂದರ್ ಸಿಂಗ್ ಮನ್ ಪ್ರತಿಕ್ರಿಯೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ರಚಿಸಿದ ಸಮಿತಿಯ ಸದಸ್ಯತ್ವ ನಿರಾಕರಿಸಿದ ಭೂಪೇಂದರ್ ಸಿಂಗ್ ಮನ್
ಭೂಪೇಂದರ್ ಸಿಂಗ್ ಮನ್ ( ಟ್ವಿಟ್ಟರ್)
guruganesh bhat
|

Updated on:Jan 14, 2021 | 5:21 PM

Share

ದೆಹಲಿ:  ಕೃಷಿ ಕಾಯ್ದೆಗಳ ಪರ ಒಲವು ವ್ಯಕ್ತಪಡಿಸಿದ್ದ  ಮಾಜಿ ಸಂಸದ ಮತ್ತು ಭಾರತೀಯ ಕಿಸಾನ್ ಯೂನಿಯನ್​ನ ಅಧ್ಯಕ್ಷರೂ ಆಗಿರುವ ಭೂಪೇಂದರ್ ಸಿಂಗ್ ಮನ್ , ಸುಪ್ರೀಂ ಕೋರ್ಟ್ ನೇಮಿಸಿರುವ ತಜ್ಞರ ಸಮಿತಿಯ ಸದಸ್ಯತ್ವ ನಿರಾಕರಿಸಿದ್ದಾರೆ.  ತಮ್ಮನ್ನು ಆಯ್ಕೆಮಾಡಿರುವ ಸುಪ್ರೀಂಕೋರ್ಟ್​ಗೆ ಧನ್ಯವಾದ ತಿಳಿಸಿರುವ ಅವರು, ಈ ಸಮಿತಿಯಿಂದ ನಿರ್ಗಮಿಸುವುದಾಗಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಮತ್ತು ದೆಹಲಿ ಚಲೋ ಚಳುವಳಿಕಾರರ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತಜ್ಞರ ಸಮಿತಿ ರಚಿಸಿತ್ತು. ರೈತ ಒಕ್ಕೂಟಗಳು ಮತ್ತು ಕೇಂದ್ರ ಸರ್ಕಾರ ತಜ್ಞರ ಸಮಿತಿಯಿಂದ ಒಮ್ಮತ ಪಡೆಯಲಿ ಎಂದು ನ್ಯಾಯಪೀಠ ತಿಳಿಸಿತ್ತು. ರೈತನೂ ಆಗಿರುವ ನಾನು, ಸಾರ್ವಜನಿಕರ ಭಾವನೆ ಮತ್ತು ಆತಂಕಗಳನ್ನು ಗಮನಿಸಿ ಪಂಜಾಬ್ ಮತ್ತು ರೈತರ ಹಿತಾಸಕ್ತಿಗಳಿಗೆ ಧಕ್ಕೆಯಾಗದಂತೆ ಯಾವುದೇ ಸ್ಥಾನವನ್ನು ತ್ಯಾಗಮಾಡಲು  ಸಿದ್ಧನಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಭೂಪೇಂದರ್ ಸಿಂಗ್ ಮನ್ ಬರೆದ ಪತ್ರ

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಡಿಸೆಂಬರ್ ನಲ್ಲಿ ರಚಿಸಿದ್ದ ಕೃಷಿ ಕಾಯ್ದೆ ಪರ ಸಮಿತಿಯಲ್ಲಿ ಭೂಪೇಂದರ್ ಸಿಂಗ್ ಮನ್ ಅವರು ಸಹ ಸದಸ್ಯರಾಗಿದ್ದರು. ಹೀಗಾಗಿ, ಭೂಪೇಂದರ್ ಸಿಂಗ್ ಮನ್ ಅವರನ್ನೂ ಸೇರಿ ಸಮಿತಿ ಸದಸ್ಯರ ಬಗ್ಗೆ ರೈತ ಒಕ್ಕೂಟಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಈ ಬೆನ್ನಲ್ಲೇ ಭೂಪೇಂದರ್ ಸಿಂಗ್ ಮನ್ ಪ್ರತಿಕ್ರಿಯೆ ನೀಡಿದ್ದಾರೆ.

1990 ರಿಂದ 96 ರ ಅವಧಿಗೆ ರಾಜ್ಯಸಭಾ ಸಂಸದರಾಗಿ ಸೇವೆ ಸಲ್ಲಿಸಿದ್ದ ಭೂಪೇಂದರ್ ಸಿಂಗ್ ಮನ್, 2012, 2017 ಮತ್ತು 2019 ರ ಲೋಕಸಭಾ ಚುನಾವಣೆಗಳಲ್ಲಿ ಪಂಜಾಬ್​ನಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದರು. ಅಲ್ಲದೇ, ಕೃಷಿ ಕಾಯ್ದೆಗಳ ಪರ ಒಲವು ವ್ಯಕ್ತಪಡಿಸಿದ್ದರು. 81 ರ ವಯೋಮಾನದ ಅವರು, 1980 ರ ದಶಕದಲ್ಲಿ ಆಲ್ ಇಂಡಿಯಾ ಕಿಸಾನ್ ಕೋರ್ಡಿನೇಶನ್ ಕಮಿಟಿಯ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಜತೆಗೆ ಹಾಲಿ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

Delhi Chalo ಕೃಷಿ ಕಾಯ್ದೆಗಳಿಗೆ ತಾತ್ಕಾಲಿಕ ತಡೆ ನೀಡಿ ಸಮಿತಿ ನೇಮಿಸಿದ ಸುಪ್ರೀಂ ಕೋರ್ಟ್; ಸಮಿತಿ ಸದಸ್ಯರ ಹಿನ್ನೆಲೆ ಏನು?

Published On - 4:48 pm, Thu, 14 January 21

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ