AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋಧಪುರ್​ನಲ್ಲಿ ಭೀಕರ ಅಪಘಾತ; ಟ್ರಕ್​ಗೆ ಗುದ್ದಿದ ಟಿಟಿ ವಾಹನ; 15ಕ್ಕೂ ಹೆಚ್ಚು ಮಂದಿ ಸಾವು

Tempo Traveller crashes into truck, over 18 people killed at Rajasthan: ರಾಜಸ್ಥಾನದ ಜೋಧಪುರ್ ಬಳಿ ನಿಂತಿದ್ದ ಟ್ರಕ್​ಗೆ ಟಿಟಿ ವಾಹನ ಅಪ್ಪಳಿಸಿ ಅಪಘಾತವಾಗಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 15 ಮಂದಿ ಅಸುನೀಗಿದ್ದು, ಹಲವರು ಗಾಯಗೊಂಡಿದ್ದಾರೆ. ಕೆಲ ವರದಿಗಳ ಪ್ರಕಾರ 18ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸತ್ತವರೆಲ್ಲರೂ ಒಂದೇ ಕುಟುಂಬದ ಸದಸ್ಯರು ಎಂದು ಹೇಳಲಾಗಿದೆ.

ಜೋಧಪುರ್​ನಲ್ಲಿ ಭೀಕರ ಅಪಘಾತ; ಟ್ರಕ್​ಗೆ ಗುದ್ದಿದ ಟಿಟಿ ವಾಹನ; 15ಕ್ಕೂ ಹೆಚ್ಚು ಮಂದಿ ಸಾವು
ಅಪಘಾತ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 02, 2025 | 9:34 PM

Share

ಜೋಧಪುರ್, ನವೆಂಬರ್ 2: ರಾಜಸ್ಥಾನ ಜೋಧಪುರ್​ನಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ (Rajasthan accident) ಸಂಭವಿಸಿದೆ. ನಿಂತಿದ್ದ ಟ್ರಕ್​ವೊಂದಕ್ಕೆ ಟೆಂಪೋ ಟ್ರಾವಲರ್ ಗಾಡಿ ಗುದ್ದಿದ ಘಟನೆ ಸಂಭವಿಸಿದೆ. ಈ ದುರಂತದಲ್ಲಿ 15ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಆರಂಭಿಕ ವರದಿಗಳು ಹೇಳುತ್ತಿವೆ. ಜೋಧಪುರ್​ನ ಫಲೋದಿಯಲ್ಲಿನ ಮಟೋಡ ಗ್ರಾಮದ ಸಮೀಪದ ಭಾರತ್ ಮಾಲಾ ಎಕ್ಸ್​ಪ್ರೆಸ್​ವೇ ಬಳಿ ಸಂಭವಿಸಿದ ಈ ಅಪಘಾತದಲ್ಲಿ ಗಾಯಗೊಂಡವರ ಸಂಖ್ಯೆಯೂ ಹಲವಿದೆ.

ಕೆಲ ವರದಿ ಪ್ರಕಾರ ಅಪಘಾತದಲ್ಲಿ ಕನಿಷ್ಠ 18 ಮಂದಿ ಸಾವನ್ನಪ್ಪಿದ್ದಾರೆ. ಇವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರೆಂದು ಹೇಳಲಾಗುತ್ತಿದೆ. ಬಿಕಾನೆರ್​ನ ಕೊಲಾಯತ್ ಮಂದಿರಕ್ಕೆ ಭೇಟಿ ನೀಡಿ ಇವರು ಜೋಧಪುರ್​ಗೆ ಮರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚುವರಿ ಶುಶ್ರೂಷೆಗಾಗಿ ಗಾಯಾಳುಗಳನ್ನು ಗ್ರೀನ್ ಕಾರಿಡಾರ್ ಮೂಲಕ ಜೋಧಪುರ್​ನಲ್ಲಿರುವ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ವರದಿಗಳು ಹೇಳುತ್ತಿವೆ.

ಇದನ್ನೂ ಓದಿ: ಭಾರತದ ಅತ್ಯಂತ ತೂಕದ ಉಪಗ್ರಹ ಹೊತ್ತು ಯಶಸ್ವಿಯಾಗಿ ನಭಕ್ಕೆ ಹಾರಿದ ಇಸ್ರೋ ‘ಬಾಹುಬಲಿ’ ರಾಕೆಟ್

ರಾಜಸ್ಥಾನ್ ಸಿಎಂ ಭಜನ್​ಲಾಲ್ ಶರ್ಮಾ ಅವರು ಘಟನೆಗೆ ಆಘಾತ ವ್ಯಕ್ತಪಡಿಸಿದ್ದು, ಮೃತರ ಸಾವಿಗೆ ಶೋಕ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸರಿಯಾಗಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಎಎನ್​ಐ ಎಕ್ಸ್​ನಲ್ಲಿ ಹಾಕಿದ ಪೋಸ್ಟ್

‘ಮೃತರ ಕುಟುಂಬಗಳಿಗೆ ನನ್ನ ಸಂತಾಪ ಇರುತ್ತದೆ. ಎಲ್ಲಾ ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಮೃತರ ಆತ್ಮಗಳಿಗೆ ಸದ್ಗತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದೂ ಪ್ರಾರ್ಥಿಸುತ್ತೇನೆ’ ಎಂದು ರಾಜಸ್ಥಾನ ಮುಖ್ಯಮಂತ್ರಿಗಳು ತಮ್ಮ ಎಕ್ಸ್ ಪೋಸ್ಟ್​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಜೇನುತುಪ್ಪಗೆ ದೊಡ್ಡ ಬೇಡಿಕೆ; ಜೇನುಸಾಕಣೆಗೆ ಕೇಂದ್ರದಿಂದ ಉತ್ತೇಜನ; ‘ಸಿಹಿ ಕ್ರಾಂತಿ’ ಹಾದಿಯಲ್ಲಿ ಭಾರತ

ಮೃತರ ಶವಗಳನ್ನು ಓಸಿಯನ್​ನಲ್ಲಿರುವ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಗಾಯಾಳುಗಳನ್ನು ಜೋಧಪುರ್​ಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶ್ವೇತಾ ಚೌಹಾಣ್ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:22 pm, Sun, 2 November 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ