AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮ್ ಆದ್ಮಿಗೆ ದೊಡ್ಡ ಹೊಡೆತ; ಮಹಿಳಾ ಸಮ್ಮಾನ್ ಯೋಜನೆಗೆ ನೋಂದಾಯಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಎಲ್‌ಜಿ ಆದೇಶ

ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ಅಸ್ತಿತ್ವದಲ್ಲಿಲ್ಲದ ಯೋಜನೆಗಾಗಿ ಫಾರ್ಮ್‌ಗಳನ್ನು ಭರ್ತಿ ಮಾಡುವ ಮೂಲಕ ಮಹಿಳೆಯರ ಫೋನ್ ನಂಬರ್​​ಗಳು ಮತ್ತು ವಿಳಾಸಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರಾದ ಸಂದೀಪ್ ದೀಕ್ಷಿತ್ ಎಂಬುವವರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಿಳಾ ಸಮ್ಮಾನ್ ಯೋಜನೆಗೆ ನೋಂದಾಯಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಎಲ್​ಜಿ ಆದೇಶ ನೀಡಿದ್ದಾರೆ.

ಆಮ್ ಆದ್ಮಿಗೆ ದೊಡ್ಡ ಹೊಡೆತ; ಮಹಿಳಾ ಸಮ್ಮಾನ್ ಯೋಜನೆಗೆ ನೋಂದಾಯಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಎಲ್‌ಜಿ ಆದೇಶ
Arvind Kejriwal
ಸುಷ್ಮಾ ಚಕ್ರೆ
|

Updated on: Dec 28, 2024 | 8:46 PM

Share

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷಕ್ಕೆ ಭಾರಿ ಹೊಡೆತ ಉಂಟಾಗಿದ್ದು, ಮಹಿಳಾ ಸಮ್ಮಾನ್ ಯೋಜನೆ ಹೆಸರಿನಲ್ಲಿ ನೋಂದಣಿ ಮಾಡಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಎಲ್‌ಜಿ ವಿ.ಕೆ ಸಕ್ಸೇನಾ ಇಂದು ಆದೇಶಿಸಿದ್ದಾರೆ. ಕಾಂಗ್ರೆಸ್ ಮುಖಂಡ ಸಂದೀಪ್ ದೀಕ್ಷಿತ್ ಅವರ ದೂರಿನ ಮೇರೆಗೆ ಪೊಲೀಸ್ ಆಯುಕ್ತರಿಗೆ ಈ ಆದೇಶ ನೀಡಲಾಗಿದೆ. ಶಿಬಿರಗಳನ್ನು ಸ್ಥಾಪಿಸಿ ನೋಂದಣಿ ಮಾಡಿಕೊಳ್ಳುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶ ನೀಡಲಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಅವರು ಗುರುವಾರ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರಿಗೆ ಎಎಪಿಯ ‘ಮಹಿಳಾ ಸಮ್ಮಾನ್’ ಯೋಜನೆಯ ಬಗ್ಗೆ ದೂರು ನೀಡಿದ್ದರು. ಆಡಳಿತ ಪಕ್ಷವು ದೆಹಲಿಯ ಮಹಿಳೆಯರೊಂದಿಗೆ ವಂಚನೆ ಮಾಡುತ್ತಿದೆ ಎಂದು ಆರೋಪಿಸಿದ್ದರು.

ದೆಹಲಿ ಮುಖ್ಯಮಂತ್ರಿ ಅತಿಶಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ‘ಮಹಿಳಾ ಸಮ್ಮಾನ್ ಯೋಜನೆ’ ಈಗಾಗಲೇ ನಗರದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಘೋಷಿಸಿದ್ದರು. ಆದರೆ, ಅದು ನಿಜವಲ್ಲ ಎಂದು ದೀಕ್ಷಿತ್ ಹೇಳಿದ್ದಾರೆ. ಫೆಬ್ರವರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ನಂತರ ಸತತ ಮೂರನೇ ಅವಧಿಗೆ ತಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ಈ ಮೊತ್ತವನ್ನು 2,100 ರೂ.ಗೆ ಏರಿಸಲಾಗುವುದು ಎಂದು ಅರವಿಂದ್ ಕೇಜ್ರಿವಾಲ್ ಇತ್ತೀಚೆಗೆ ಘೋಷಿಸಿದ್ದರು.

ಇದನ್ನೂ ಓದಿ: 60 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ; ದೆಹಲಿಯಲ್ಲಿ ಕೇಜ್ರಿವಾಲ್ ಸಂಜೀವಿನಿ ಯೋಜನೆ ಘೋಷಣೆ

ದೆಹಲಿಯ ಪ್ರತಿ ಮಹಿಳೆಗೆ (18 ವರ್ಷಕ್ಕಿಂತ ಮೇಲ್ಪಟ್ಟವರು) ರೂ.ಗಳನ್ನು ನೀಡುವುದಾಗಿ ಎಎಪಿ ಮಾಡಿರುವ ಘೋಷಣೆಗಳ ಕುರಿತು ದೆಹಲಿಯ ಪ್ರಧಾನ ಕಾರ್ಯದರ್ಶಿ ಎಲ್‌ಜಿ ಅವರು ಇಂದು ದೆಹಲಿಯ ಮುಖ್ಯ ಕಾರ್ಯದರ್ಶಿ ಮತ್ತು ದೆಹಲಿಯ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ತಿಂಗಳಿಗೆ 1000, ಮತ್ತು 2025ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಚುನಾಯಿತರಾದರೆ ಮೊತ್ತವನ್ನು ತಿಂಗಳಿಗೆ 2100 ರೂ. ಏರಿಕೆ ಮಾಡುವ ಬಗ್ಗೆ “ಸರ್ಕಾರೇತರ ವ್ಯಕ್ತಿಗಳಿಂದ ವೈಯಕ್ತಿಕ ವಿವರಗಳು ಮತ್ತು ನಮೂನೆಗಳನ್ನು ಸಂಗ್ರಹಿಸುವ ವಿಷಯದಲ್ಲಿ ವಿಭಾಗೀಯ ಆಯುಕ್ತರ ಮೂಲಕ ವಿಚಾರಣೆಯನ್ನು ನಡೆಸುವಂತೆ ಮುಖ್ಯ ಕಾರ್ಯದರ್ಶಿಗೆ ಎಲ್​ಜಿ ಸೂಚಿಸಿದ್ದಾರೆ. ಇದಲ್ಲದೆ, ಪೊಲೀಸ್ ಆಯುಕ್ತರು ಆ ವ್ಯಕ್ತಿಯ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲು ಕ್ಷೇತ್ರ ಅಧಿಕಾರಿಗಳಿಗೆ ನಿರ್ದೇಶನ ನೀಡಬಹುದು. ಪ್ರಯೋಜನಗಳನ್ನು ನೀಡುವ ನೆಪದಲ್ಲಿ ಅವರ ವೈಯಕ್ತಿಕ ವಿವರಗಳನ್ನು ಸಂಗ್ರಹಿಸುವ ಮೂಲಕ ನಾಗರಿಕರ ಗೌಪ್ಯತೆಯನ್ನು ಉಲ್ಲಂಘಿಸುತ್ತಿದ್ದಾರೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಸಿಎಂ ಅತಿಶಿಯನ್ನು ಶೀಘ್ರ ಬಂಧಿಸಬಹುದು: ಕೇಜ್ರಿವಾಲ್ ಹೀಗೆ ಹೇಳಿದ್ದೇಕೆ?

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ರಾಷ್ಟ್ರೀಯ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್, ಮಹಿಳಾ ಸಮ್ಮಾನ್ ಮತ್ತು ಸಂಜೀವನಿ ಯೋಜನೆಗಳಿಂದ ಬಿಜೆಪಿ ಅಸಮಾಧಾನಗೊಂಡಿದೆ ಎಂದು ಆರೋಪಿಸಿದ್ದಾರೆ. ”ದೆಹಲಿ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತಿದೆ. ಚುನಾವಣೆಯಲ್ಲಿ ಗೆದ್ದ ನಂತರ ಮಹಿಳೆಯರಿಗೆ 2100 ರೂ., 60 ವರ್ಷ ಮೇಲ್ಪಟ್ಟ ವೃದ್ಧರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಹೇಳಿದ್ದೆ. ಈ ಎರಡೂ ಯೋಜನೆಗಳಿಂದ ಸಾರ್ವಜನಿಕರಿಗೆ ಲಕ್ಷಾಂತರ ರೂ. ಸಿಗಲಿದೆ. ಬಿಜೆಪಿಯ ಹಲವು ನಾಯಕರು ಗೆಲ್ಲುವುದನ್ನು ಮರೆತುಬಿಡಿ, ಹಲವೆಡೆ ಬಿಜೆಪಿಯ ಠೇವಣಿ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ. ಅವರು ಮೊದಲು ತಮ್ಮ ಗೂಂಡಾಗಳನ್ನು ಕಳುಹಿಸಿದರು ಮತ್ತು ನಂತರ ಪೊಲೀಸರನ್ನು ಕಳುಹಿಸಿದರು, ದಾಖಲಾತಿ ಶಿಬಿರವನ್ನು ಬೇರು ಸಮೇತ ಕಿತ್ತುಹಾಕಿ ಇಂದು ತನಿಖೆ ನಡೆಸಲಾಗುವುದು ಎಂದು ನಕಲಿ ತನಿಖೆಗೆ ಆದೇಶಿಸಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ