AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸ್‌ಫರ್ಡ್ ವಿವಿಯಿಂದ ಹೊಸ ಅಧ್ಯಯನ; ಕೊವಿಶೀಲ್ಡ್ 2 ಡೋಸ್ ನಡುವೆ ಅಂತರ ಹೆಚ್ಚಿದಷ್ಟು ಹೆಚ್ಚು ರಕ್ಷಣೆ

ಮೊದಲು ಆಸ್ಟ್ರಾಜನಿಕ ಕಂಪನಿಯ ಲಸಿಕೆ ಪಡೆಯಬೇಕು. ಬಳಿಕ ಫೈಜರ್ ಕಂಪನಿ ಲಸಿಕೆ ಪಡೆದರೆ ಕೊರೊನಾ ವಿರುದ್ಧ 9 ಪಟ್ಟು ಹೆಚ್ಚಿನ ಪ್ರತಿಕಾಯಗಳು ಸೃಷ್ಟಿಯಾಗುತ್ತವೆ ಎಂದು ಲಸಿಕೆಗಳ ಬಗ್ಗೆ ಪ್ರೊಫೆಸರ್ ಮ್ಯಾಥ್ಯೂ ಸ್ನಾಪೆ ತಿಳಿಸಿದ್ದಾರೆ.

ಆಕ್ಸ್‌ಫರ್ಡ್ ವಿವಿಯಿಂದ ಹೊಸ ಅಧ್ಯಯನ; ಕೊವಿಶೀಲ್ಡ್ 2 ಡೋಸ್ ನಡುವೆ ಅಂತರ ಹೆಚ್ಚಿದಷ್ಟು ಹೆಚ್ಚು ರಕ್ಷಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 29, 2021 | 2:41 PM

Share

ದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ಲಸಿಕೆಯ ಅಭಾವ ಹೆಚ್ಚಾಗಿದೆ. ಜಾಗತಿಕ ಮಟ್ಟದಲ್ಲಿ ಲಸಿಕೆಯ ಕೊರತೆಯ ಮಧ್ಯೆ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯವು ಮತ್ತೊಂದು ಅಧ್ಯಯನ ನಡೆಸಿದೆ. ಲಸಿಕೆಗಳ ಮಿಶ್ರಣದಿಂದ ಕೊರೊನಾ ವಿರುದ್ಧ ಹೋರಾಡಲು ಹೆಚ್ಚು ರಕ್ಷಣೆ ಸಿಗುತ್ತೆ ಎಂದು ಆಕ್ಸ್‌ಫರ್ಡ್ ವ್ಯಾಕ್ಸಿನ್ ಗ್ರೂಪ್‌ ಅಧ್ಯಯನ ನಡೆಸಿದೆ. ಅಸ್ಟ್ರಾಜೆನೆಕಾ ಮತ್ತು ಫಿಜರ್-ಬಯೋಟೆಕ್ ಲಸಿಕೆಗಳನ್ನು ಪರ್ಯಾಯ ಪ್ರಮಾಣವು ಕೊರೊನಾ ವೈರಸ್ ವಿರುದ್ಧ ಹೋರಾಡಲು ಹೆಚ್ಚಿನ ರೋಗ ನಿರೋಧಕ ಶಕ್ತಿಯನ್ನು ನೀಡುತ್ತದೆ ಎಂಬುವುದು ಅಧ್ಯಯನದ ಮೂಲಕ ತಿಳಿದುಬಂದಿದೆ.

ಮೊದಲು ಆಸ್ಟ್ರಾಜನಿಕ ಕಂಪನಿಯ ಲಸಿಕೆ ಪಡೆಯಬೇಕು. ಬಳಿಕ ಫೈಜರ್ ಕಂಪನಿ ಲಸಿಕೆ ಪಡೆದರೆ ಕೊರೊನಾ ವಿರುದ್ಧ 9 ಪಟ್ಟು ಹೆಚ್ಚಿನ ಪ್ರತಿಕಾಯಗಳು ಸೃಷ್ಟಿಯಾಗುತ್ತವೆ ಎಂದು ಲಸಿಕೆಗಳ ಬಗ್ಗೆ ಪ್ರೊಫೆಸರ್ ಮ್ಯಾಥ್ಯೂ ಸ್ನಾಪೆ ತಿಳಿಸಿದ್ದಾರೆ. ಆಸ್ಟ್ರಾಜನಿಕ ಕಂಪನಿಯ 2 ಡೋಸ್‌ ಲಸಿಕೆಗಿಂತ 9 ಪಟ್ಟು ಹೆಚ್ಚು ಪ್ರತಿಕಾಯ ಸೃಷ್ಟಿಯಾಗುತ್ತೆ. ಮೊದಲು ಆಸ್ಟ್ರಾಜನಿಕ ಬಳಿಕ ಫೈಜರ್ ಲಸಿಕೆ ಪಡೆದರೆ ಪ್ರತಿಕಾಯ ಸೃಷ್ಟಿಯಾಗುತ್ತೆ. ಆದರೆ ಮೊದಲು ಫೈಜರ್ ಕಂಪನಿಯ ಲಸಿಕೆಯನ್ನು ಪಡೆದು ಬಳಿಕ ಆಸ್ಟ್ರಾಜನಿಕ ಲಸಿಕೆ ಪಡೆದರೆ 5 ಪಟ್ಟು ಪ್ರತಿಕಾಯ ಸೃಷ್ಟಿಯಾಗುತ್ತೆ. ಆಸ್ಟ್ರಾಜನಿಕ ಕಂಪನಿಯ 2 ಡೋಸ್ ಲಸಿಕೆ ಪಡೆದರೆ ಆಗ ಸೃಷ್ಟಿಯಾಗುವ ಪ್ರತಿಕಾಯಕ್ಕಿಂತ 5 ಪಟ್ಟು ಹೆಚ್ಚು ಸೃಷ್ಟಿಯಾಗುತ್ತೆ ಎಂದು ಆಕ್ಸ್‌ಫರ್ಡ್ ವ್ಯಾಕ್ಸಿನ್ ಗ್ರೂಪ್ ಅಧ್ಯಯನ ಹೇಳಿದೆ.

ಇನ್ನು ಕೊವಿಶೀಲ್ಡ್ ನಡುವಿನ ಅಂತರ ಹೆಚ್ಚಾದಷ್ಟು ಹೆಚ್ಚು ರಕ್ಷಣೆ ಇರುತ್ತೆ ಎಂದು ಆಕ್ಸ್‌ಫರ್ಡ್ ವಿವಿಯ ಮತ್ತೊಂದು ಅಧ್ಯಯನದಿಂದ ಮಾಹಿತಿ ಸಿಕ್ಕಿದೆ. 2 ಡೋಸ್‌ಗಳ ನಡುವೆ ಅಂತರ ಹೆಚ್ಚಾದಷ್ಟು ಹೆಚ್ಚು ರಕ್ಷಣೆ ಇರುತ್ತದೆ. ಕೊವಿಶೀಲ್ಡ್ 2 ಡೋಸ್ ನಡುವೆ ಅಂತರ 8-12 ವಾರದ ಅಂತರಕ್ಕಿಂತ 45 ವಾರ ಇದ್ದರೆ. 4 ಪಟ್ಟು ಹೆಚ್ಚು ಪ್ರತಿಕಾಯಗಳು ಸೃಷ್ಟಿಯಾಗುತ್ತದೆ. ಈ ಪ್ರತಿಕಾಯಗಳು ಒಂದು ವರ್ಷದವರೆಗೂ ಇರುತ್ತದೆ. 3ನೇ ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಂಡರೆ ಎರಡು ಪಟ್ಟು ಹೆಚ್ಚಿನ ಪ್ರತಿಕಾಯಗಳು ಸೃಷ್ಟಿಯಾಗುತ್ತದೆ. ಮನುಷ್ಯನ ದೇಹದ ಪ್ರತಿಕಾಯಗಳು ಕೊರೊನಾ ವೈರಸ್ ವಿರುದ್ಧ ಹೋರಾಡುತ್ತವೆ. ಪ್ರತಿಕಾಯಗಳ ಪ್ರಮಾಣ ಹೆಚ್ಚಾದಷ್ಟು ಕೊರೊನಾ ವಿರುದ್ಧ ಹೆಚ್ಚಿನ ರಕ್ಷಣೆ ಸಿಗುತ್ತದೆ.

ಇದನ್ನೂ ಓದಿ: ಭಾರತದ ಕೊವ್ಯಾಕ್ಸಿನ್​ ಲಸಿಕೆ ಹೆಸರಲ್ಲಿ ಅತಿದೊಡ್ಡ ಹಗರಣ ನಡೆಸಿದ ಆರೋಪ; ಬ್ರೆಜಿಲ್​ ಅಧ್ಯಕ್ಷರ ಕುರ್ಚಿಯನ್ನೇ ಅಲುಗಾಡಿಸುತ್ತಿದೆ ಕೊರೊನಾ ಲಸಿಕೆ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?