AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ಎಎಪಿ 10 ಶಾಸಕರನ್ನು ಸಂಪರ್ಕಿಸಿದ ಬಿಜೆಪಿ, ಅರವಿಂದ್ ಕೇಜ್ರಿವಾಲ್ ಆರೋಪ

ಪಂಜಾಬ್ ಸರ್ಕಾರವನ್ನು ಉರುಳಿಸಲು ಬಿಜೆಪಿ ತನ್ನ ಆಮ್ ಆದ್ಮಿ ಪಕ್ಷದ (ಎಎಪಿ) 10 ಶಾಸಕರನ್ನು ಸಂಪರ್ಕಿಸಿದೆ ಎಂದು ಅರವಿಂದ್ ಕೇಜ್ರಿವಾಲ್ ಇಂದು ಆರೋಪಿಸಿದ್ದಾರೆ.

BIG NEWS: ಎಎಪಿ 10 ಶಾಸಕರನ್ನು ಸಂಪರ್ಕಿಸಿದ ಬಿಜೆಪಿ, ಅರವಿಂದ್ ಕೇಜ್ರಿವಾಲ್ ಆರೋಪ
Arvind Kejriwal
TV9 Web
| Edited By: |

Updated on: Sep 14, 2022 | 1:22 PM

Share

ದೆಹಲಿ: ಪಂಜಾಬ್ ಸರ್ಕಾರವನ್ನು ಉರುಳಿಸಲು ಬಿಜೆಪಿ ತನ್ನ ಆಮ್ ಆದ್ಮಿ ಪಕ್ಷದ (ಎಎಪಿ) 10 ಶಾಸಕರನ್ನು ಸಂಪರ್ಕಿಸಿದೆ ಎಂದು ಅರವಿಂದ್ ಕೇಜ್ರಿವಾಲ್ ಇಂದು ಆರೋಪಿಸಿದ್ದಾರೆ. ನಮ್ಮ 10 ಶಾಸಕರನ್ನು ಪಂಜಾಬ್‌ನಲ್ಲಿ ಬಿಜೆಪಿ ಸಂಪರ್ಕಿಸಿದೆ ಬಿಜೆಪಿಯವರು ಶಾಸಕರನ್ನು ಖರೀದಿಸುತ್ತಿದ್ದಾರೆ ಮತ್ತು ನಮ್ಮ ಸರ್ಕಾರವನ್ನು ಉರುಳಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಎಂದು ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ಇತ್ತೀಚೆಗೆ ಬಿಜೆಪಿಯು ದೆಹಲಿಯಲ್ಲಿ ಆಪರೇಷನ್ ಕಮಲವನ್ನು ಬಿಜೆಪಿ ಮಾಡುತ್ತಿದೆ. ನಮ್ಮ ಶಾಸಕರನ್ನು ಪಕ್ಷಾಂತರಕ್ಕೆ ಪ್ರೇರೇಪಿಸುತ್ತಿದೆ ಎಂದು ಆರೋಪಿಸಿದ್ದರು. ಇದೀಗ ಆಪರೇಷನ್ ಕಮಲ ದೆಹಲಿಯಲ್ಲಿ ವಿಫಲವಾಗಿರುವ ಕಾರಣ ಬಿಜೆಪಿ ಪಂಜಾಬ್‌ನತ್ತ ಮುಖ ಮಾಡಿದೆ ಎಂದು ಹೇಳಿದರು. ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಲು ಎಎಪಿ ಶಾಸಕರನ್ನು ದೆಹಲಿಗೆ ಬರುವಂತೆ ಬಿಜೆಪಿ ಹೇಳಿದೆ. ಪಕ್ಷವನ್ನು ಬದಲಾಯಿಸಲು ಕೋಟಿಗಳಷ್ಟು ಆಫರ್ ಮಾಡಲಾಗಿದೆ ಎಂದು ಪಂಜಾಬ್ ಸಚಿವ ಹರ್ಪಾಲ್ ಚೀಮಾ ಆರೋಪಿಸಿದ್ದಾರೆ.

ದಿಲ್ಲಿಗೆ ಬನ್ನಿ, ಬಿಜೆಪಿಯ ಹಿರಿಯರನ್ನು ಭೇಟಿಯಾಗುವಂತೆ ಮಾಡುತ್ತೇನೆ ಎಂದು ಪಕ್ಷದ ಶಾಸಕರೊಬ್ಬರು ಸ್ವೀಕರಿಸಿದ ಕರೆಗಳಲ್ಲಿ ಬಹಿರಂಗವಾಗಿದೆ ಎಂದು ಸಚಿವ ಹರ್ಪಾಲ್ ಚೀಮಾ ಹೇಳಿದ್ದಾರೆ. ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿ ಶಾಸಕರಿಗೆ 25 ಕೋಟಿ ರೂ ನೀಡುತ್ತಿದೆ. ಕರ್ನಾಟಕದಲ್ಲಿ ಆಪರೇಷನ್ ಕಮಲ ಯಶಸ್ವಿಯಾಗಿರಬಹುದು, ಆದರೆ ದೆಹಲಿ ಶಾಸಕರು ದೃಢವಾಗಿದ್ದು ಬಿಜೆಪಿ ಕಾರ್ಯಾಚರಣೆಯನ್ನು ವಿಫಲಗೊಳಿಸಿದ್ದಾರೆ ಎಂದು ಚೀಮಾ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಪಂಜಾಬ್‌ನಲ್ಲಿ ಸರ್ಕಾರ ಬದಲಾವಣೆಯಾದರೆ, ನಿಮಗೆ (ಶಾಸಕರು) ಬಿಜೆಪಿ ಸರ್ಕಾರ ಬಂದರೆ ಪ್ರಮುಖ ಹುದ್ದೆಗಳನ್ನು ನೀಡಲಾಗುವುದು. ಎಂದು ಶ್ರೀ ಚೀಮಾ ಹೇಳಿದರು, ಭಗವಂತ್ ಮಾನ್ ನೇತೃತ್ವದ ಸರ್ಕಾರವನ್ನು ಉರುಳಿಸಲು ಶಾಸಕರಿಗೆ ಹಲವಾರು ಕರೆಗಳು ಬಂದಿವೆ ಎಂದು ಹೇಳಿದ್ದರೆ

ಆರೋಪವನ್ನು ತಳ್ಳಿಹಾಕಿದ ಬಿಜೆಪಿ

ಪಂಜಾಬ್ ಸಚಿವ ಹರ್ಪಾಲ್ ಚೀಮಾ ಅವರು ಬಿಜೆಪಿ ವಿರುದ್ಧ ಆಧಾರರಹಿತ ಆರೋಪವನ್ನು ಮಾಡುತ್ತಿದ್ದಾರೆ. ಪಂಜಾಬ್‌ನಲ್ಲಿ ಎಎಪಿ ದೊಡ್ಡ ವಿಭಜನೆಗೆ ಕಾರಣವಾಗುತ್ತಿದೆ ಎಂಬುದನ್ನು ತೋರಿಸುತ್ತದೆ. ಕೇಜ್ರಿವಾಲ್ ಅವರ ಹಸ್ತಕ್ಷೇಪದಿಂದ ಪಕ್ಷವು ಛಿದ್ರವಾಗುವ ಹಂತದಲ್ಲಿದೆ ಎಂದು ಬಿಜೆಪಿಯ ಸುಭಾಷ್ ಶರ್ಮಾ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ