AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ಬಾಬರಿ ಮಸೀದಿ ಧ್ವಂಸ ಪ್ರಕರಣ: ಎಲ್ಲಾ ಪ್ರಕರಣ ರದ್ದುಗೊಳಿಸಿದ ಸುಪ್ರೀಂ

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧ ಎಲ್ಲ ಪ್ರಕರಣ ರದ್ದು ಮಾಡಿದ ಸುಪ್ರೀಂಕೋರ್ಟ್

BIG NEWS: ಬಾಬರಿ ಮಸೀದಿ ಧ್ವಂಸ ಪ್ರಕರಣ: ಎಲ್ಲಾ ಪ್ರಕರಣ ರದ್ದುಗೊಳಿಸಿದ ಸುಪ್ರೀಂ
Babri Masjid and Supreme Court
TV9 Web
| Edited By: |

Updated on:Aug 30, 2022 | 1:03 PM

Share

1992 ರಲ್ಲಿ ಅಯೋಧ್ಯೆಯಲ್ಲಿ (Ayodhya) ಬಾಬರಿ ಮಸೀದಿ ಧ್ವಂಸ (Babri Masjid) ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರ ಮತ್ತು ಅದರ ಅಧಿಕಾರಿಗಳ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿಗಳಿಗೆ ಸುಪ್ರೀಂಕೋರ್ಟ್ ಮಂಗಳವಾರ ತೆರೆ ಎಳೆದಿದೆ. ಗುಜರಾತ್‌ನಲ್ಲಿ 2002 ರ ಗೋಧ್ರಾ ನಂತರದ(Godhra communal riots) ಕೋಮು ಗಲಭೆಯ ಹಿನ್ನೆಲೆಯಲ್ಲಿ ಆರಂಭಿಸಲಾದ ಎಲ್ಲಾ ಪ್ರಕ್ರಿಯೆಗಳನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಅಯೋಧ್ಯೆಯ ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ಕುರಿತು 2019 ರ ಸುಪ್ರೀಂ ಕೋರ್ಟ್‌ನ ತೀರ್ಪಿನ ದೃಷ್ಟಿಯಿಂದ ಸಮಯ ಕಳೆದಂತೆ, ನಿಂದನೆ ಪ್ರಕರಣಗಳು ಉಳಿದುಕೊಂಡಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಗೋಧ್ರಾ ನಂತರದ ಗಲಭೆಗಳ ಹಿನ್ನೆಲೆಯಲ್ಲಿ ಆರಂಭಿಸಲಾದ ಪ್ರಕ್ರಿಯೆಗಳ ಕುರಿತು ಉಲ್ಲೇಖಿಸಿದ ನ್ಯಾಯಾಲಯ, ನ್ಯಾಯಾಲಯದ ಆದೇಶದ ಮೇರೆಗೆ ವಿಶೇಷ ತನಿಖಾ ತಂಡವು ಮೊಕದ್ದಮೆ ಹೂಡಿರುವ ಒಂಬತ್ತು ಪ್ರಮುಖ ಪ್ರಕರಣಗಳ ಪೈಕಿ ಎಂಟು ಪ್ರಕರಣಗಳಲ್ಲಿ ವಿಚಾರಣೆಗಳು ಮುಗಿದು ಹೋಗುವುದರೊಂದಿಗೆ ಪ್ರಕರಣಗಳು ಸಮಯ ಕಳೆದಂತೆ ನಿರುಪಯುಕ್ತವಾಗಿವೆ ಎಂದು ಹೇಳಿದೆ. ನರೋದಾ ಗಾಂವ್‌ನ ವಿಚಾರಣಾ ನ್ಯಾಯಾಲಯದಲ್ಲಿ ಒಂದು ಪ್ರಕರಣದಲ್ಲಿ ಅಂತಿಮ ವಾದಗಳು ನಡೆಯುತ್ತಿವೆ.

ಏತನ್ಮಧ್ಯೆ, 2002 ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ “ಮುಗ್ಧ ಜನರನ್ನು” ಬಂಧಿಸಲು ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪದ ಮೇಲೆ ಬಂಧಿತರಾಗಿರುವ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ.

ಪ್ರಕರಣದಲ್ಲಿ ಗುಜರಾತ್ ಪರವಾಗಿ ಹಾಜರಾಗಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಗುರುವಾರ ನ್ಯಾಯಮೂರ್ತಿ ಯುಯು ಲಲಿತ್ ಅವರ ಪೀಠಕ್ಕೆ ಸೆಟಲ್ವಾಡ್ ಅವರ ಅರ್ಜಿಗೆ ಪ್ರತಿಕ್ರಿಯೆ ಸಿದ್ಧವಾಗಿದೆ ಆದರೆ ಅದಕ್ಕೆ ಕೆಲವು ತಿದ್ದುಪಡಿಗಳ ಅಗತ್ಯವಿದೆ ಎಂದು ಹೇಳಿದರು.

ಪ್ರಕರಣದಲ್ಲಿ ಜೂನ್‌ನಲ್ಲಿ ಬಂಧಿತರಾಗಿದ್ದ ಸೆಟಲ್ವಾಡ್ ಅವರ ಜಾಮೀನು ಅರ್ಜಿಯ ಕುರಿತು ಆಗಸ್ಟ್ 22 ರಂದು ಸುಪ್ರೀಂಕೋರ್ಟ್ ಗುಜರಾತ್ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿತ್ತು.

Published On - 12:17 pm, Tue, 30 August 22

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ