AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣ: ಅಪರಾಧಿಗಳ ಬಿಡುಗಡೆ ಕುರಿತು ಸುಪ್ರೀಂಕೋರ್ಟ್ ವಿಚಾರಣೆ

ಬಿಲ್ಕಿಸ್ ಬಾನೊ 21 ವರ್ಷ ವಯಸ್ಸಿನವಳಾಗಿದ್ದಳು ಆಕೆಯ 3 ವರ್ಷದ ಮಗಳು ಸೇರಿದಂತೆ ಆಕೆಯ ಕುಟುಂಬದ ಏಳು ಸದಸ್ಯರು ಕೊಲ್ಲಲ್ಪಟ್ಟಿದ್ದಾರೆ.

BIG NEWS ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣ: ಅಪರಾಧಿಗಳ ಬಿಡುಗಡೆ ಕುರಿತು ಸುಪ್ರೀಂಕೋರ್ಟ್ ವಿಚಾರಣೆ
Bilkis Bano
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 25, 2022 | 2:51 PM

Share

ದೆಹಲಿ : 2002ರಲ್ಲಿ ಬಿಲ್ಕಿಸ್ ಬಾನು (Bilkis Bano Case) ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದವರ ಹತ್ಯೆ ಪ್ರಕರಣದ 11 ಮಂದಿ ಅಪರಾಧಿಗಳಿಗೆ ಕ್ಷಮಾದಾನ ನೀಡಿ ಜೈಲಿನಿಂದ ಬಿಡುಗಡೆ ಮಾಡಿದ್ದಕ್ಕಾಗಿ ಸುಪ್ರೀಂಕೋರ್ಟ್ ಗುಜರಾತ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಒಂದು ವಾರದ ನಂತರ, ಅವರ ಬಿಡುಗಡೆಯ ವಿರುದ್ಧದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಿಚಾರಣೆ ನಡೆಸಿತು. ಈ ವಿಷಯವನ್ನು ವಿಚಾರಣೆಗೆ ರಮಣ ಸಮ್ಮತಿ ಸೂಚಿಸುವುದಾಗಿ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮಂಗಳವಾರ ಹೇಳಿದ್ದರು.

ಬಿಲ್ಕಿಸ್ ಬಾನು 2002 ರ ಗುಜರಾತ್ ಗಲಭೆಯ ಸಮಯದಲ್ಲಿ ಹಿಂಸಾಚಾರದಿಂದ ತಪ್ಪಿಸಿಕೊಳ್ಳುತ್ತಿದ್ದಾಗ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಅಪರಾಧಿಗಳು ಆಕೆಯ ಮೂರು ವರ್ಷದ ಮಗಳು ಸೇರಿದಂತೆ ಆಕೆಯ ಕುಟುಂಬದ ಏಳು ಸದಸ್ಯರನ್ನು ಸಹ ಕೊಂದಿದ್ದಾರೆ. ಗುಜರಾತ್ ಸರ್ಕಾರದ ಕ್ಷಮಾದಾನ ನೀತಿಯಡಿಯಲ್ಲಿ ಭಾರತದ ಸ್ವಾತಂತ್ರ್ಯ ದಿನದಂದು ಸುಮಾರು 15 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಿದ 11 ಅಪರಾಧಿಗಳ ಬಿಡುಗಡೆಯು ಭಾರೀ ಆಕ್ರೋಶವನ್ನು ಉಂಟುಮಾಡಿತು.

ದೇಶಾದ್ಯಂತ ವಿರೋಧ ಪಕ್ಷದ ನಾಯಕರು ಗುಜರಾತ್ ಮತ್ತು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯನ್ನು ಈ ಕ್ರಮಕ್ಕೆ ತರಾಟೆಗೆ ತೆಗೆದುಕೊಂಡರು. ಬಿಡುಗಡೆಯನ್ನು ಪ್ರಶ್ನಿಸಿದ ಅರ್ಜಿದಾರರಲ್ಲಿ ತೃಣಮೂಲ ಕಾಂಗ್ರೆಸ್‌ನ ಮಹುವಾ ಮೊಯಿತ್ರಾ ಕೂಡ ಒಬ್ಬರು.

ಕೇವಲ ಅವರಿಗೆ ಬಿಡುಗಡೆ ಮಾತ್ರವಲ್ಲ ನಂತರ ಅವರಿಗೆ ಅಭಿನಂದಿಸಿದ್ದು ಕೂಡ ವ್ಯಾಪಕ ಅಕ್ರೋಶವನ್ನು ಹುಟ್ಟುಹಾಕಿತು. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ಅಭಿನಂದನೆಯನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಬಿಲ್ಕಿಸ್ ಬಾನೊ ಪ್ರಕರಣವನ್ನು ಸದನದಲ್ಲಿ ಎತ್ತುವ ಅಗತ್ಯವಿರಲಿಲ್ಲ. ಸುಮಾರು 14 ವರ್ಷಗಳ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ ನಂತರ ಅಪರಾಧಿಗಳು ಬಿಡುಗಡೆಯಾಗಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಅವರನ್ನು ಬಿಡುಗಡೆ ಮಾಡಲಾಗಿದೆ. ಆದರೆ ಯಾವುದೇ ಆರೋಪಿಗೆ ಸನ್ಮಾನ ಮಾಡಿದರೆ ಅದು ತಪ್ಪು. ಆರೋಪಿಯು ಆರೋಪಿಯಾಗಿದ್ದು, ಅಂತಹ ಕೃತ್ಯಗಳನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಈ ಹಿಂದೆ ಆರೋಪಿಯೊಬ್ಬ ತನ್ನ ಕ್ಷಮಾಪಣೆಗಾಗಿ ಸಲ್ಲಿಸಿದ ಮನವಿಯನ್ನು ಪರಿಗಣಿಸುವಂತೆ ಗುಜರಾತ್ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಹೇಳಿತ್ತು. ಇತ್ತೀಚೆಗೆ, 6,000 ಕ್ಕೂ ಹೆಚ್ಚು ನಾಗರಿಕರು ಸಂಘಟನೆಯ ಕಾರ್ಯಕರ್ತರು ಸೇರಿದಂತೆ ಅಪರಾಧಿಗಳು ಜೈಲಿನಿಂದ ಹೊರಬರುವ ಬಗ್ಗೆ ಎಸ್‌ಸಿಗೆ ಪತ್ರ ಬರೆದಿದ್ದಾರೆ. ಆಕ್ಷೇಪಿಸಿದ ಇತರರಲ್ಲಿ 2009 ರಲ್ಲಿ 11 ಪುರುಷರಿಗೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರಲ್ಲಿ ಒಬ್ಬರು. ನಿವೃತ್ತ ನ್ಯಾಯಮೂರ್ತಿ ಉಮೇಶ್ ಸಾಲ್ವಿ ಈ ವಾರದ ಆರಂಭದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದರು.

Published On - 12:01 pm, Thu, 25 August 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?